Homeಮುಖಪುಟ'ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ'ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

‘ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ’ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

- Advertisement -
- Advertisement -

ಬಿಹಾರದಿಂದ ತಮಿಳುನಾಡಿಗೆ ವಲಸೆ ಬಂದಿರುವ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುಳ್ಳು ಸುದ್ದಿ ಜೊತೆಗೆ ಹಲ್ಲೆಯ ಕೆಲವು ನಕಲಿ ವೀಡಿಯೊಗಳನ್ನು ಹಂಚಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಬೇಕಾಗಿದ್ದ ಯೂಟ್ಯೂಬರ್ Manish Kashyap, ಶನಿವಾರ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ತಮಿಳುನಾಡಿನಲ್ಲಿ ವಲಸಿಗರನ್ನು ಕೊಲ್ಲುವ ಮತ್ತು ಥಳಿಸುವ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ತೊಡಗಿದೆ” ಎಂಬ ಆರೋಪದ ಮೇಲೆ ಬಿಹಾರ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕ (ಇಒಯು) ಕಶ್ಯಪ್ ಮತ್ತು ಇತರರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದೆ.

ಮಜೌಲಿಯಾದಲ್ಲಿ ಡಿಐಜಿ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಯೂಟ್ಯೂಬರ್‌ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಗೆ ಮುಂದಾದಗ ಯೂಟ್ಯೂಬರ್‌ ಕಶ್ಯಪ್ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ಶರಣಾದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಶ್ಯಪ್‌ನನ್ನು ಬಿಹಾರ ಮತ್ತು ತಮಿಳುನಾಡು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. “ಬಿಹಾರ ಪೊಲೀಸರು ಅವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದ್ದರೆ, ತಮಿಳುನಾಡು ಪೊಲೀಸರು ಒಂಬತ್ತು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಆರ್ಥಿಕ ಅಪರಾಧ ಘಟಕದ (ಇಒಯು) ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಎನ್‌ಎಚ್ ಖಾನ್ ಮಾಹಿತಿ ನೀಡಿದ್ದಾರೆ.

ಕಶ್ಯಪ್ ಮತ್ತು ಮತ್ತೊಬ್ಬ ಆರೋಪಿ ಯುವರಾಜ್ ಸಿಂಗ್ ರಜಪೂತ್ ವಿರುದ್ಧ ಪೊಲೀಸರು ಅರೆಸ್ಟ್‌ ವಾರೆಂಟ್‌ ಹೊರಡಿಸಿದ್ದರು. ಶರಣಾಗತಿಗಾಗಿ ಅವರ ಮೇಲೆ ಒತ್ತಡ ಹೇರಲು ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರು.

”ಆರ್ಥಿಕ ಅಪರಾಧ ಘಟಕ ರಚಿಸಿರುವ ಆರು ತಂಡಗಳು ಪಾಟ್ನಾ ಮತ್ತು ಚಂಪಾರಣ್ ಪೊಲೀಸರೊಂದಿಗೆ ನಿನ್ನೆಯಿಂದ (ಶುಕ್ರವಾರ) ವಿವಿಧ ಸ್ಥಳಗಳು ಮತ್ತು ಅಡಗುತಾಣಗಳಲ್ಲಿನ ಅವರ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಬಂಧನ ಮತ್ತು ಇತರ ಕಾನೂನು ಕ್ರಮಗಳ ಭಯದಿಂದ ಅವರು ಶನಿವಾರ ಬೆಟ್ಟಿಯ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ” ಎಂದು ಎಡಿಜಿ ತಿಳಿಸಿದ್ದಾರೆ.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕ ಮಾರ್ಚ್ 6ರಂದು ಕಶ್ಯಪ್ ಸೇರಿದಂತೆ ಅಮನ್ ಕುಮಾರ್, ರಾಕೇಶ್ ತಿವಾರಿ ಮತ್ತು ಯುವರಾಜ್ ಸಿಂಗ್ ರಜಪೂತ್ ಎನ್ನುವ ನಾಲ್ವರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಿದೆ. ಮೊದಲ ಎಫ್‌ಐಆರ್‌ನ ತನಿಖೆಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕವು ಈಗಾಗಲೇ ಜಮುಯಿಯಿಂದ ಅಮನ್ ಕುಮಾರ್‌ನನ್ನು ಬಂಧಿಸಿದೆ.

ತಮಿಳುನಾಡಿನಲ್ಲಿ ವಲಸಿಗರನ್ನು ಹೊಡೆದು ಕೊಲ್ಲುವ 30 ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಕಾರ್ಮಿಕರಲ್ಲಿ ಭೀತಿಯನ್ನು ಹರಡಿದೆ ಎಂದು ಆರ್ಥಿಕ ಅಪರಾಧ ಘಟಕದ ತನಿಖೆಯು ಕಂಡುಹಿಡಿದಿದೆ ಎಂದು ಬಿಹಾರ ಪೊಲೀಸ್ (ಪ್ರಧಾನ ಕಚೇರಿ) ಹೆಚ್ಚುವರಿ ಮಹಾನಿರ್ದೇಶಕ ಜೆಎಸ್ ಗಂಗ್ವಾರ್ ಕಳೆದ ವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಪೊಲೀಸರು 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಬಿಹಾರ ಸರ್ಕಾರವು ತಮಿಳುನಾಡಿಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಉನ್ನತ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...