Homeಮುಖಪುಟ'ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ'ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

‘ವಲಸಿಗರ ಮೇಲೆ ತಮಿಳುನಾಡಿನಲ್ಲಿ ದಾಳಿ’ಯೆಂದು ಸುಳ್ಳು ಹಬ್ಬಿಸಿದ್ದ ಯೂಟ್ಯೂಬರ್ ಪೊಲೀಸರಿಗೆ ಶರಣು

- Advertisement -
- Advertisement -

ಬಿಹಾರದಿಂದ ತಮಿಳುನಾಡಿಗೆ ವಲಸೆ ಬಂದಿರುವ ಕಾರ್ಮಿಕರ ಮೇಲೆ ದಾಳಿ ನಡೆಯುತ್ತಿದೆ ಎಂಬ ಸುಳ್ಳು ಸುದ್ದಿ ಜೊತೆಗೆ ಹಲ್ಲೆಯ ಕೆಲವು ನಕಲಿ ವೀಡಿಯೊಗಳನ್ನು ಹಂಚಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಬಿಹಾರ ಪೊಲೀಸರಿಗೆ ಬೇಕಾಗಿದ್ದ ಯೂಟ್ಯೂಬರ್ Manish Kashyap, ಶನಿವಾರ ಪಶ್ಚಿಮ ಚಂಪಾರಣ್ ಜಿಲ್ಲೆಯಲ್ಲಿ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

“ತಮಿಳುನಾಡಿನಲ್ಲಿ ವಲಸಿಗರನ್ನು ಕೊಲ್ಲುವ ಮತ್ತು ಥಳಿಸುವ ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ತೊಡಗಿದೆ” ಎಂಬ ಆರೋಪದ ಮೇಲೆ ಬಿಹಾರ ಪೊಲೀಸ್‌ನ ಆರ್ಥಿಕ ಅಪರಾಧಗಳ ಘಟಕ (ಇಒಯು) ಕಶ್ಯಪ್ ಮತ್ತು ಇತರರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದೆ.

ಮಜೌಲಿಯಾದಲ್ಲಿ ಡಿಐಜಿ ನೇತೃತ್ವದಲ್ಲಿ ಶನಿವಾರ ಬೆಳಗ್ಗೆ ಯೂಟ್ಯೂಬರ್‌ಗೆ ಸೇರಿದ ಆಸ್ತಿಯನ್ನು ಮುಟ್ಟುಗೋಲು ಹಾಕುವ ಪ್ರಕ್ರಿಯೆಗೆ ಮುಂದಾದಗ ಯೂಟ್ಯೂಬರ್‌ ಕಶ್ಯಪ್ ಜಗದೀಶ್‌ಪುರ ಪೊಲೀಸ್‌ ಠಾಣೆಯಲ್ಲಿ ಶರಣಾದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಶ್ಯಪ್‌ನನ್ನು ಬಿಹಾರ ಮತ್ತು ತಮಿಳುನಾಡು ಪೊಲೀಸರು ವಿಚಾರಣೆ ನಡೆಸಲಿದ್ದಾರೆ. “ಬಿಹಾರ ಪೊಲೀಸರು ಅವರ ವಿರುದ್ಧ ಮೂರು ಪ್ರಕರಣಗಳನ್ನು ದಾಖಲಿಸಿದ್ದರೆ, ತಮಿಳುನಾಡು ಪೊಲೀಸರು ಒಂಬತ್ತು ಪ್ರಕರಣಗಳನ್ನು ದಾಖಲಿಸಿದ್ದಾರೆ” ಎಂದು ಆರ್ಥಿಕ ಅಪರಾಧ ಘಟಕದ (ಇಒಯು) ಹೆಚ್ಚುವರಿ ಮಹಾನಿರ್ದೇಶಕ (ಎಡಿಜಿ) ಎನ್‌ಎಚ್ ಖಾನ್ ಮಾಹಿತಿ ನೀಡಿದ್ದಾರೆ.

ಕಶ್ಯಪ್ ಮತ್ತು ಮತ್ತೊಬ್ಬ ಆರೋಪಿ ಯುವರಾಜ್ ಸಿಂಗ್ ರಜಪೂತ್ ವಿರುದ್ಧ ಪೊಲೀಸರು ಅರೆಸ್ಟ್‌ ವಾರೆಂಟ್‌ ಹೊರಡಿಸಿದ್ದರು. ಶರಣಾಗತಿಗಾಗಿ ಅವರ ಮೇಲೆ ಒತ್ತಡ ಹೇರಲು ಅವರ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದರು.

”ಆರ್ಥಿಕ ಅಪರಾಧ ಘಟಕ ರಚಿಸಿರುವ ಆರು ತಂಡಗಳು ಪಾಟ್ನಾ ಮತ್ತು ಚಂಪಾರಣ್ ಪೊಲೀಸರೊಂದಿಗೆ ನಿನ್ನೆಯಿಂದ (ಶುಕ್ರವಾರ) ವಿವಿಧ ಸ್ಥಳಗಳು ಮತ್ತು ಅಡಗುತಾಣಗಳಲ್ಲಿನ ಅವರ ಸ್ಥಳಗಳ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿವೆ. ಬಂಧನ ಮತ್ತು ಇತರ ಕಾನೂನು ಕ್ರಮಗಳ ಭಯದಿಂದ ಅವರು ಶನಿವಾರ ಬೆಟ್ಟಿಯ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ” ಎಂದು ಎಡಿಜಿ ತಿಳಿಸಿದ್ದಾರೆ.

ಇದನ್ನೂ ಓದಿ: ವಲಸಿಗರ ವಿಚಾರದಲ್ಲಿ ಬಿಜೆಪಿ ಸುಳ್ಳು ಸುದ್ದಿ ಹರಡುತ್ತಿದೆ: ಸಿಎಂ ಸ್ಟಾಲಿನ್ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕ ಮಾರ್ಚ್ 6ರಂದು ಕಶ್ಯಪ್ ಸೇರಿದಂತೆ ಅಮನ್ ಕುಮಾರ್, ರಾಕೇಶ್ ತಿವಾರಿ ಮತ್ತು ಯುವರಾಜ್ ಸಿಂಗ್ ರಜಪೂತ್ ಎನ್ನುವ ನಾಲ್ವರ ವಿರುದ್ಧ ಮೊದಲ ಎಫ್‌ಐಆರ್ ದಾಖಲಿಸಿದೆ. ಮೊದಲ ಎಫ್‌ಐಆರ್‌ನ ತನಿಖೆಗೆ ಸಂಬಂಧಿಸಿದಂತೆ ಆರ್ಥಿಕ ಅಪರಾಧ ಘಟಕವು ಈಗಾಗಲೇ ಜಮುಯಿಯಿಂದ ಅಮನ್ ಕುಮಾರ್‌ನನ್ನು ಬಂಧಿಸಿದೆ.

ತಮಿಳುನಾಡಿನಲ್ಲಿ ವಲಸಿಗರನ್ನು ಹೊಡೆದು ಕೊಲ್ಲುವ 30 ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಕಾರ್ಮಿಕರಲ್ಲಿ ಭೀತಿಯನ್ನು ಹರಡಿದೆ ಎಂದು ಆರ್ಥಿಕ ಅಪರಾಧ ಘಟಕದ ತನಿಖೆಯು ಕಂಡುಹಿಡಿದಿದೆ ಎಂದು ಬಿಹಾರ ಪೊಲೀಸ್ (ಪ್ರಧಾನ ಕಚೇರಿ) ಹೆಚ್ಚುವರಿ ಮಹಾನಿರ್ದೇಶಕ ಜೆಎಸ್ ಗಂಗ್ವಾರ್ ಕಳೆದ ವಾರ ಸುದ್ದಿಗಾರರಿಗೆ ತಿಳಿಸಿದ್ದರು.

ಈ ಬಗ್ಗೆ ತನಿಖೆ ನಡೆಸಲು ತಮಿಳುನಾಡು ಪೊಲೀಸರು 13 ಪ್ರಕರಣಗಳನ್ನು ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಬಿಹಾರ ಸರ್ಕಾರವು ತಮಿಳುನಾಡಿಗೆ ತನಿಖೆ ನಡೆಸುತ್ತಿರುವ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಉನ್ನತ ಅಧಿಕಾರಿಗಳ ತಂಡವನ್ನು ಕಳುಹಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...