Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...