Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...