Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...