Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...