Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...