Homeಕರ್ನಾಟಕಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ಹಿರಿಯ ನಟ ಹುಲಿವಾನ ಗಂಗಾಧರಯ್ಯ (70) ಇನ್ನಿಲ್ಲ

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

- Advertisement -
- Advertisement -

ರಂಗಭೂಮಿ, ಸಿನಿಮಾ ಮತ್ತು ಕಿರುತೆರೆ ನಟ ಹುಲಿವಾನ ಗಂಗಾಧರಯ್ಯ (70 ವರ್ಷ) ನಿಧನರಾಗಿದ್ದಾರೆ.
ವಾರದ ಹಿಂದೆ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಧುಮೇಹದಿಂದ ಬಳಲುತ್ತಿದ್ದ ಅವರು
ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆ ಹುಲಿವಾನದವರಾದ ಗಂಗಾಧರಯ್ಯ, ಕನ್ನಡ ರಂಗಭೂಮಿ ಪ್ರಮುಖವಾಗಿ ಗುರುತಿಸುವ ಹಲವಾರು ನಾಟಕಗಳ ವಿಭಿನ್ನ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ. ’ಸೇಡಿನ ಹಕ್ಕಿ’ (1985) ಚಿತ್ರದೊಂದಿಗೆ ಸಿನಿಮಾರಂಗ ಪ್ರವೇಶಿಸಿದ ಅವರು 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಗೂ ಕಿರುತೆರೆಯ ಹಲವು ಧಾರಾವಾಹಿಗಳು, ಟೆಲಿಫಿಲ್ಮ್‌ಗಳಲ್ಲಿ ನಟಿಸಿದ್ದಾರೆ.

ಕೃಷಿ ಬಗ್ಗೆ ಅಪಾರ ಒಲವಿದ್ದ ಅವರು ಹುಟ್ಟೂರಿನಲ್ಲಿ “ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ” ಸ್ಥಾಪಿಸಿ ರೈತರಿಗಾಗಿ ಕೆಲಸ ಮಾಡುತ್ತಿದ್ದರು.

ಹುಲಿವಾನ ಗಂಗಾಧರಯ್ಯ ಪದವಿ ಓದಿದ್ದು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ. ಅಲ್ಲಿ ಉತ್ತಮ ರಂಗಭೂಮಿ ವಾತಾವರಣವಿತ್ತು. ಉಪನ್ಯಾಸಕರ ಪ್ರೋತ್ಸಾಹದಿಂದ ಥಿಯೇಟರ್‌ನಲ್ಲಿ ಸಕ್ರಿಯವಾಗಿದ್ದರು. ಪದವಿ ಮುಗಿಸಿದ ನಂತರ ಗಂಗಾಧರಯ್ಯ ಐಟಿಐ ಕಂಪನಿಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ನೌಕರಿ ಹಿಡಿದರು. ಅಲ್ಲಿನ ಲಲಿತ ಕಲಾ ಸಂಘ ಅವರಲ್ಲಿನ ನಟನಾ ಕಲೆಗೆ ಮತ್ತಷ್ಟು ಹೊಳಪು ನೀಡಿತು. ರಂಗಕರ್ಮಿ ಆರ್. ನಾಗೇಶ್ ಮಾರ್ಗದರ್ಶನದಲ್ಲಿ ಅವರು ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಸೂತ್ರಧಾರ, ರಂಗಸಂಪದ, ಬೆನಕ ರಂಗತಂಡಗಳ ಹಲವಾರು ನಾಟಕಗಳಲ್ಲಿ ಪಾತ್ರ ನಿರ್ವಹಿಸಿದರು.

ಮುಂದೊಂದು ದಿನ ತಾವೇ “ಗ್ಲೋಬ್ ಥಿಯೇಟರ್” ತಂಡ ಕಟ್ಟಿ ನಾಟಕಗಳನ್ನು ಪ್ರದರ್ಶಿಸಿದರು. ಆಸ್ಫೋಟ, ಸೂರ್ಯಶಿಕಾರಿ, ಕಾಮಗಾರಿ, ಈಡಿಪಸ್, ಕದಡಿದ ನೀರು, ಚೋಮ… ಹೀಗೆ ಹತ್ತಾರು ನಾಟಕಗಳಲ್ಲಿನ ಸವಾಲಿನ ಪಾತ್ರಗಳ ನಿರ್ವಹಣೆಯಿಂದ ಉತ್ತಮ ಕಲಾವಿದ ಎಂದು ಕರೆಸಿಕೊಂಡಿದ್ದರು. ಇದರಿಂದಾಗಿ ಕಿರುತೆರೆ, ಸಿನಿಮಾದಲ್ಲಿ ಅವಕಾಶಗಳು ತಾನಾಗಿಯೇ ಅರಸಿ ಬಂದವು. 1981ರ ನಂತರ ದೂರದರ್ಶನಕ್ಕೆ ನಾಟಕಗಳನ್ನು ಮಾಡತೊಡಗಿದರು. ಸಿನಿಮಾ, ಕಿರುತೆರೆಯಲ್ಲಿ ಅವಕಾಶಗಳು ಹೆಚ್ಚಾದವು.

ಈ ಮಧ್ಯೆ ಅವರು ಹುಲಿವಾನದಲ್ಲಿ ತೋಟ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿಯೂ ಓಡಾಡುತ್ತಿದ್ದರು. ಒತ್ತಡ ಹೆಚ್ಚಾದ್ದರಿಂದ 1997ರಲ್ಲಿ ಐಟಿಐ ಕಂಪನಿಯ ತಮ್ಮ ನೌಕರಿಗೆ ರಾಜೀನಾಮೆ ನೀಡಿ ಪೂರ್ಣ ಪ್ರಮಾಣದಲ್ಲಿ ನಟನೆ, ಕೃಷಿಯಲ್ಲಿ ತೊಡಗಿಸಿಕೊಂಡರು. ಕಿರುತೆರೆಯಲ್ಲಿ ಸಂಕ್ರಾಂತಿ, ಮಹಾಯಜ್ಞ, ಮುಕ್ತ ಮುಕ್ತ, ಮಳೆಬಿಲ್ಲು ಸೇರಿದಂತೆ ಹತ್ತಾರು ಧಾರಾವಾಹಿಗಳಲ್ಲಿ ಅವರು ಉತ್ತಮ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಕಿರುತೆರೆ ವೃತ್ತಿ ಬದುಕಿನ ಆರಂಭದ ದಿನಗಳಲ್ಲೇ ದೂರದರ್ಶನದಲ್ಲಿ ಮೂಡಿಬಂದ “ಅರ್ಧಸತ್ಯ” ಸರಣಿ ಅವರಿಗೆ ದೊಡ್ಡ ಜನಪ್ರಿಯತೆ ತಂದುಕೊಟ್ಟಿತ್ತು. ‘ಸೇಡಿನ ಹಕ್ಕಿ’ ಚಿತ್ರದೊಂದಿಗೆ ಹಿರಿತೆರೆ ಪ್ರವೇಶಿಸಿದ ಅವರು
ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಜ್ವಾಲಾಮುಖಿ, ಅದೇ ಕಣ್ಣು, ಕುಲಪುತ್ರ, ನವತಾರೆ,
ಚೈತ್ರದ ಚಿಗುರು, ಸ್ವಸ್ತಿಕ್, ಭೂಮಿ ತಾಯಿಯ ಚೊಚ್ಚಲ ಮಗ, ಉಲ್ಟಾ ಪಲ್ಟಾ, ಎ, ಶಬ್ಧವೇಧಿ ಅವರ
ಕೆಲವು ಪ್ರಮುಖ ಸಿನಿಮಾಗಳು.

ಹುಲಿವಾನ ಗಂಗಾಧರಯ್ಯ ಅವರು ಅಪ್ಪಟ ಕೃಷಿ ಜೀವಿ. ಸಾವಯವ ಕೃಷಿ ಪದ್ಧತಿಯನ್ನು ಅನುಮೋದಿಸುವ ಅವರು ಹುಲಿವಾನದ ತಮ್ಮ ಜಮೀನಿನಲ್ಲಿ ಸಮಗ್ರ ಕೃಷಿ ಅಳವಡಿಸಿದ್ದರು. ತೆಂಗು ಬೆಳೆಗಾರರ ಹಿತರಕ್ಷಣೆಗಾಗಿ ಕೋಕನಟ್ ಪ್ರೊಡ್ಯೂಸರ್ಸ್ ಕಂಪನಿ ಸ್ಥಾಪಿಸಿ, ರೈತರಿಗೆ ಸ್ವಾಭಿಮಾನಿ ಬದುಕು ಕಟ್ಟಿಕೊಡುವ ಪ್ರಯತ್ನದಲ್ಲಿ ತೊಡಗಿಸಿಕೊಂಡಿದ್ದರು. ತಮ್ಮ ಕ್ಷೇತ್ರದ ತೆಂಗು ಬೆಳೆಗಾರರ ಬಗ್ಗೆ ಗಂಗಾಧರಯ್ಯ ವಿಶೇಷ ಆಸ್ಥೆಯಿಂದ ಕೆಲಸ ಮಾಡುತ್ತಿದ್ದರು. ನೀರಾ ಮಾರುಕಟ್ಟೆಗೆ ಬರಬೇಕೆನ್ನುವ ಹೋರಾಟದಲ್ಲಿ ಅವರ ಸಕ್ರಿಯ ಪಾಲ್ಗೊಳ್ಳುವಿಕೆಯಿತ್ತು.

ತೆಂಗಿನ ಮರಗಳಿಗೆ ತೋಟದ ಸಂಪನ್ಮೂಲಗಳಿಂದಲೇ ಗೊಬ್ಬರ ಉತ್ಪಾದಿಸುವ ಅವರ ಯೋಜನೆಗೆ ಪುರಸ್ಕಾರವೂ ದೊರೆತಿದೆ. ಕಾಸರಗೋಡಿನ ಸೆಂಟ್ರಲ್ ಪ್ಲಾಂಟೇಷನ್ ಕ್ರಾಪ್ಸ್ ರೀಸರ್ಚ್ ಇನ್‍ಸ್ಟಿಟ್ಯೂಟ್ ಗಂಗಾಧರಯ್ಯನವರಿಗೆ “ಔಟ್‍ಸ್ಟ್ಯಾಂಡಿಂಗ್ ಅಂಡ್ ಇನ್ನೋವೇಟಿವ್ ಫಾರ್ಮರ್” ಎಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇಂದು ಹುಟ್ಟೂರು ಹುಲಿವಾನದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಲಿದೆ.
~ಶಶಿಧರ್‌ ಚಿತ್ರದುರ್ಗ


ಓದಿ:

ಕೀಲಾರ ಟೆಂಟ್ ಹೌಸ್-2: ಟೇಸ್ಟ್ ಆಫ್‌ ಚೆರ್ರಿ: ಸಾವು, ನೋವು, ವಿಷಾದಗಳ ಶೋಧದ ಜೊತೆಗೆ ಉದುರಿದ ಚೆರ್ರಿ ಹಣ್ಣುಗಳ ರುಚಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...