Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...