Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...