Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...