Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...