Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...