Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....