Homeಮುಖಪುಟಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಮಕ್ಕಳ ಸಮಗ್ರ ಬೆಳವಣಿಗೆಗೆ ರಂಗಭೂಮಿ ಅಗತ್ಯ: ಕೂಡಲೇ ರಂಗ ಶಿಕ್ಷಕರ ನೇಮಕಾತಿಯಾಗಲಿ

ಈಗ 43 ಶಾಲೆಗಳಲ್ಲಿರುವ ನಾಟಕ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ.

- Advertisement -
- Advertisement -

ರಂಗಭೂಮಿ ಎನ್ನುವುದು ಒಂದು ವಿಶ್ವವಿದ್ಯಾಲಯವಿದ್ದಂತೆ. ಅಲ್ಲಿ ಕಲಾವಿದನೂ ಸಹ ಪ್ರಾಧ್ಯಪಕನಾಗಿರುತ್ತಾನೆ. ಅಲ್ಲಿ ಕಲೆಯ ಮೂಲಕ ಹೊಸ ಹೊಸ ಯೋಚನೆಗಳೊಂದಿಗೆ ಹೊಸದನ್ನು ಜನರಿಗೆ ತೋರಿಸುವ ನಿಟ್ಟಿನಲ್ಲಿ ಸಮಾಜಕ್ಕೆ ಒಂದು ಸಂದೇಶ ನೀಡುವ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವುದರಲ್ಲಿ ರಂಗ ಮಾಧ್ಯಮವು ವಿಶೇಷವಾಗಿದೆ.

“ಶಿಕ್ಷಣ – ರಂಗಭೂಮಿ – ಸಮುದಾಯ ಪ್ರಜ್ಞೆ” ಪ್ರತಿಯೊಬ್ಬರಿಗೂ ಅವಶ್ಯಕ. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ಶಿಕ್ಷಣಗಳಲ್ಲಿ ರಂಗಭೂಮಿಯ ರಂಗ ಶಿಕ್ಷಣವನ್ನು ಅಳವಡಿಸುವುದು ಮುಖ್ಯವಾಗಿದೆ.

ರಂಗ ಶಿಕ್ಷಣದ ಮೂಲಕ, ರಂಗ ಚಟುವಟಿಕೆಗಳ ಮೂಲಕ ಶಾಲಾ ಮಕ್ಕಳಲ್ಲಿ ಹುಟ್ಟಿಕೊಳ್ಳುವ ಸಮುದಾಯ ಪ್ರಜ್ಞೆ, ಮಕ್ಕಳ ಜ್ಞಾಪಕಶಕ್ತಿ, ಮೌಲ್ಯಮಾಪನ ಗುಣ, ಮತ್ತು ಶೈಕ್ಷಣಿಕ ಗುಣಮಟ್ಟ ಹೆಚ್ಚುತ್ತದೆ. ಜೊತೆಗೆ ಆರೋಗ್ಯಕರ ಸಾಮಾಜಿಕ ಸ್ಥೈರ್ಯವನ್ನು ನೀಡುವ ಶಕ್ತಿಯುಳ್ಳದ್ದಾಗಿರುತ್ತದೆ. ಹಾಗಾಗಿ ಈ ರಂಗ ಶಿಕ್ಷಣವನ್ನು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣದ ಹಂತದಲ್ಲಿ ಅಳವಡಿಸಬೇಕೆಂಬ ಒತ್ತಾಯ ಬಹಳ ಹಳೆಯದು. ರಂಗ ಶಿಕ್ಷಣದಲ್ಲಿರುವ ಪ್ರಾಯೋಗಿತೆಯ ಮಹತ್ವವನ್ನು ಅರಿತುಕೊಂಡೇ ರಂಗ ಶಿಕ್ಷಣವನ್ನು ಅಧ್ಯಯನ ಮಾಡಿರುವ ಥಿಯೇಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಒಂದು ವರ್ಷ ರಂಗ ಪದವಿ ಪಡೆದ ಪದವಿಧರರಿಗೆ ಶಿಕ್ಷಣ ಇಲಾಖೆಯು 43 ರಂಗ ಶಿಕ್ಷಕರನ್ನು ನೇಮಿಸಿಕೊಳ್ಳಲು ಮುಂದಾಗಿದ್ದು, ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಒಂದು ಮಹತ್ವಪೂರ್ಣ ಹೆಜ್ಜೆಯಾಗಿತ್ತು.

ಸಾವಿರಾರು ಯುವಜನರು ರಂಗಭೂಮಿ ಕ್ಷೇತ್ರದಲ್ಲಿ ನಂಬಿಕೆಯಿಟ್ಟು ರಾಜ್ಯದಲ್ಲಿರುವ ನಾಲ್ಕು ರಂಗಶಾಲೆಗಳಾದ (ನೀನಾಸಮ್, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ, ರಂಗ ಅಧ್ಯಯನ ಕೇಂದ್ರ ಮತ್ತು ಮೈಸೂರು ರಂಗಾಯಣ ಶಾಲೆ) ಗಳಲ್ಲಿ ಸೇರಿಕೊಂಡು ರಂಗ ತರಬೇತಿ ಪಡೆದು ರಂಗಭೂಮಿಯನ್ನೇ ಜೀವನವಾಗಿಸಿಕೊಂಡು ಕಲೆ, ಸಾಹಿತ್ಯವನ್ನು ಕರ್ನಾಟಕದಲ್ಲಿ ಇನ್ನೂ ಜೀವಂತವಾಗಿ ಉಳಿಸಿಕೊಂಡು ಬಂದಿದ್ದಾರೆ. ಈ ಹೊತ್ತಿನಲ್ಲಿ ಶಾಲಾ ಶಿಕ್ಷಣದಲ್ಲಿ ರಂಗ ಶಿಕ್ಷಣವನ್ನು ಅಳವಡಿಸಿ, ಪ್ರಾಯೋಗಿಕ ರಂಗ ಪದವಿ ಪಡೆದ ಸಂಪನ್ಮೂಲ ವ್ಯಕ್ತಿಗಳನ್ನು ಪ್ರಾಥಮಿಕ ಹಾಗೂ ಪ್ರೌಢಗಳಿಗೆ ರಂಗ ರಂಗಶಿಕ್ಷಕರ ನೇಮಕಾತಿ ಮಾಡಬೇಕೆಂದು ಒತ್ತಾಯಿಸುವುದು ನ್ಯಾಯಯುತವಾದುದ್ದು. ರಂಗ ಶಿಕ್ಷಣದಲ್ಲಿ ರಂಗ ಶಿಕ್ಷಕರ ಅಗತ್ಯತೆಯನ್ನು ಮನಗಂಡಿರುವ ಈ ಹಿಂದಿನ ಸರ್ಕಾರಗಳು 2007 – 2008 ರಲ್ಲಿ 43 ರಂಗ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ವಿಶೇಷ ಶಿಕ್ಷಕರನ್ನಾಗಿ ನೇಮಿಸಿಕೊಂಡಿತ್ತು . ಈಗ 43 ಶಾಲೆಗಳಲ್ಲಿ ಅ ಶಿಕ್ಷಕರು ಪ್ರಯೋಗಶೀಲರಾಗಿ ಪಠ್ಯ- ಪಠ್ಯೇತರ ಚಟುವಟಿಕೆಗಳ ಮೂಲಕ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಮಹತ್ತರವಾದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತ್ತು ಆಯಾ ಶಾಲೆಗಳಲ್ಲಿ ಕ್ರಿಯಾಶೀಲ ಹಾಗೂ ಗುಣಮಟ್ಟದ ಶಿಕ್ಷಣ ನೀಡಿ ಯಶಸ್ವಿಯಾಗಿದ್ದಾರೆ.

ಮಾನ್ಯ ಶಿಕ್ಷಣ ಸಚಿವರು ದೈಹಿಕ ಶಿಕ್ಷಕರು, ಸಂಗೀತ ಶಿಕ್ಷಕರು, ಚಿತ್ರಕಲಾ ಶಿಕ್ಷಕರ ನೇಮಕಾತಿಗೆ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ 371 (ಜೆ) ಅಡಿಯಲ್ಲಿ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ (ನಾಟಕ) ರಂಗ ಶಿಕ್ಷಕರ ಕುರಿತು ಪ್ರಸ್ತಾಪ ಮಾಡಿಲ್ಲ. ದೈಹಿಕ, ಸಂಗೀತ, ಚಿತ್ರಕಲಾ ಶಿಕ್ಷಕರ ಜೊತೆಗೆ ರಂಗ ಶಿಕ್ಷಣ ಮತ್ತು ರಂಗ ಶಿಕ್ಷಕರ ನೇಮಕಾತಿಗೆ ಅವಕಾಶ ಕಲ್ಪಿಸಿ ಅಧಿಸೂಚನೆ ಹೊರಡಿಸಬೇಕೆಂಬುದು ಸಾವಿರಾರು ಕಲಾವಿದರ ಆಗ್ರಹ. ಕಲೆ, ಸಾಹಿತ್ಯ, ನಶಿಸಿ ಹೋಗುವ ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ರಂಗ ಶಿಕ್ಷಣವನ್ನು ನೀಡಿ ಅ ಮಕ್ಕಳಿಗೆ ಸಮುದಾಯ ಪ್ರಜ್ಞೆ, ಬೌದ್ಧಿಕಶಕ್ತಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಈ ಕೂಡಲೇ ರಂಗ ಶಿಕ್ಷಣವನ್ನು ಜಾರಿಗೆ ತರಬೇಕು. ಇದನ್ನು ಪಾಠ ಮಾಡಲು ರಂಗ ಶಿಕ್ಷಕರ ಅನಿವಾರ್ಯತೆ ಇವತ್ತಿನ ಶಿಕ್ಷಣ ವ್ಯವಸ್ಥೆಗೆ ತುಂಬಾ ಇದೆ ಎಂಬುವುದನ್ನು ಸರ್ಕಾರ ಮತ್ತು ಮಾನ್ಯ ಶಿಕ್ಷಣ ಸಚಿವರು ಮರೆಯಬಾರದು.

ರಂಗಭೂಮಿ, ಶಿಕ್ಷಣ ಹಾಗೂ ಸಾಹಿತ್ಯದ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಗಣ್ಯರು ಕೂಡ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕೆಂಬುದು ನಮ್ಮ ಮನವಿಯಾಗಿದೆ.

ಲಕ್ಷ್ಮಣ್ ಮಂಡಲಗೇರಾ

(ರಾಯಚೂರು ಜಿಲ್ಲೆಯ ಮಂಡಲಗೇರಾ ಗ್ರಾಮದವರಾದ ಲಕ್ಷ್ಮಣ್ ರಂಗ ಕಲಾವಿದರು. ಹತ್ತು ಹಲವು ಮಕ್ಕಳ ನಾಟಕಗಳನ್ನು ನಿರ್ದೇಶಿಸಿರುವ ಇವರು ತೀನ್ ಕಂದೀಲ್, ನಕ್ಷತ್ರದ ಧೂಳು ನಾಟಕದ ಮೂಲಕ ಪರಿಚಿತರು)


ಇದನ್ನೂ ಓದಿ: ಡಿಜಿಟಲ್ ವೇದಿಕೆಗಳಲ್ಲಿ ಸೊರಗಿದ ರಂಗಭೂಮಿ; ಆಪ್ತತೆಯ ಸಂವಾದ ಮರುಕಳಿಸಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...