Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...