Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...

ಬಾಬಾ ಸಿದ್ದಿಕ್ ಕೊಲೆ ಆರೋಪಿಯಿಂದ ಶಾಸಕ ಜೀಶನ್ ಸಿದ್ದಿಕ್‌ಗೆ ಜೀವ ಬೆದರಿಕೆ: “ನಿನ್ನ ತಂದೆಯನ್ನು ಕೊಂದೆ, ಈಗ ನಿನ್ನ ಸರದಿ!” ಎಂಬ ಆಡಿಯೋ ವೈರಲ್ 

ಮುಂಬೈ: ಮಾಜಿ ಸಚಿವ ಬಾಬಾ ಸಿದ್ದಿಕ್ ಅವರ ಪುತ್ರ ಹಾಗೂ ಎನ್‌ಸಿಪಿ (ಅಜಿತ್ ಪವಾರ್ ಬಣ) ಶಾಸಕ ಜೀಶನ್ ಸಿದ್ದಿಕ್ ಅವರಿಗೆ ವಿದೇಶದಿಂದ ಭೀಕರ ಜೀವ ಬೆದರಿಕೆ ಕರೆ ಮತ್ತು ಧ್ವನಿ ಸಂದೇಶ...

ಜಾರ್ಖಂಡ್| ಜೆಪಿಎಸ್‌ಸಿ ಸುಧಾರಣೆಗೆ ಆಗ್ರಹಿಸಿ 13ನೇ ದಿನಕ್ಕೆ ಕಾಲಿಟ್ಟ ವಿದ್ಯಾರ್ಥಿಗಳ ಪ್ರತಿಭಟನೆ

ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್‌ಎಸ್‌ಸಿ) ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮತ್ತು ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಗುರುವಾರ 13...

ಎಜುಕೇಶನ್ ಸ್ಟಾರ್ಟ್‌ಅಪ್‌ಗೆ ಭಯೋತ್ಪಾದನೆಯ ಲಿಂಕ್ : ಸ್ವಘೋಷಿತ ಝಿಯೋನಿಸ್ಟ್ ಆರಿಫ್ ಹುಸೇನ್ ವಿರುದ್ಧ ಎಫ್‌ಐಆರ್‌ಗೆ ಕೋರ್ಟ್ ಆದೇಶ

'ಎಕ್ಸ್ ಅಂಡ್ ವೈ ಲರ್ನಿಂಗ್' ಎಂಬ ಶಿಕ್ಷಣ ಸ್ಟಾರ್ಟ್‌ಅಪ್ ಅನ್ನು ಭಯೋತ್ಪಾದನೆಗೆ ಲಿಂಕ್ ಮಾಡಿದ, ಸಾಮಾಜಿಕ ಜಾಲತಾಣಗಳ ಮೂಲಕ ಸಂಸ್ಥೆಯ ವಿರುದ್ಧ ದ್ವೇಷ ಅಭಿಯಾನ ನಡೆಸಿದ ಆರೋಪ ಹೊತ್ತಿರುವ ಸ್ವಘೋಷಿತ ಎಕ್ಸ್ ಮುಸ್ಲಿಂ...

ಅಪ್ರಾಪ್ತ ಮಗುವಿನ ವಿಡಿಯೋಗೆ ವಿಕೃತವಾಗಿ ಕಮೆಂಟಿಸಿದ ನಟಿ ರೂಪಾಲಿ ಗಂಗೂಲಿ: ‘ಮೋದಿ ಸರ್ವಾಧಿಕಾರಿಯಾಗಿದ್ದರೆ ಚೆನ್ನಾಗಿತ್ತು’ ಎಂದ ನಟಿ ವಿರುದ್ಧ ಜನಾಕ್ರೋಶ

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಹಾಗೂ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸದಸ್ಯೆ ರೂಪಾಲಿ ಗಂಗೂಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ...

‘ಅಂಬೇಡ್ಕರ್ ಅವರನ್ನು ಆಚರಿಸುವ ಬಿಜೆಪಿ, ‘ಹಿಂದೂ ರಾಷ್ಟ್ರ’ದ ಕುರಿತ ಅವರ ಎಚ್ಚರಿಕೆಯನ್ನೂ ಓದಲಿ’: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ದೇಶದಲ್ಲಿ ‘ಹಿಂದೂ ರಾಷ್ಟ್ರ’ ನಿರ್ಮಾಣದ ಬೇಡಿಕೆಯನ್ನು ತೀವ್ರವಾಗಿ ಟೀಕಿಸಿರುವ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿ ನಾಯಕರು ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಎಚ್ಚರಿಕೆಗಳನ್ನು ಓದಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ನಾಯಕರು ಭಾರತ...