Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮನೆ ವಿಳಾಸ ಬಹಿರಂಗ : ಹಿಂದುತ್ವ ಪೋರ್ಟಲ್‌ಗಳು, ಅಭಿಜಿತ್ ಅಯ್ಯರ್-ಮಿತ್ರ ವಿರುದ್ಧ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಸಿಜೆಪಿಯ ಸೌರವ್ ದಾಸ್

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್ ಅವರು ಹಿಂದುತ್ವ ಡಿಜಿಟಲ್ ಮಾಧ್ಯಮ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ ಮಧ್ಯವರ್ತಿಗಳು ಮತ್ತು ಬಲಪಂಥೀಯ ರಾಜಕೀಯ ವಿಶ್ಲೇಷಕ ಅಭಿಜಿತ್ ಅಯ್ಯರ್-ಮಿತ್ರ ಅವರ ವಿರುದ್ಧ ದೆಹಲಿ...

ದಾಖಲೆಗಳಿದ್ದರೂ ಬಂಗಾಳಿ ಮಾತನಾಡುವ ಕಾರಣಕ್ಕೆ ಮಹಿಳೆಯನ್ನು ಬಾಂಗ್ಲಾದೇಶಕ್ಕೆ ಕಳುಹಿಸಿದ ಅಧಿಕಾರಿಗಳು?

ನವಿ ಮುಂಬೈನ 40 ವರ್ಷದ ಬಂಗಾಳಿ ಮಾತನಾಡುವ ಮಹಿಳೆಯೊಬ್ಬರನ್ನು ಅಕ್ರಮ ಬಾಂಗ್ಲಾದೇಶಿ ವಲಸಿಗರು ಎಂಬ ಶಂಕೆಯ ಮೇಲೆ ಬಂಧಿಸಿ, ಆಕೆ ಭಾರತದಲ್ಲೇ ಜನಿಸಿ ವಾಸಿಸುತ್ತಿದ್ದ ದಾಖಲೆಗಳನ್ನು ಕುಟುಂಬದವರು ಒದಗಿಸಿದರೂ, ಗಡಿಯಾಚೆಗೆ ಕಳುಹಿಸಲಾಗಿದೆ ಎಂದು...

ಬಾರ್ ಕೌನ್ಸಿಲ್ ಅಧ್ಯಕ್ಷರ ವಿರುದ್ಧ ₹150 ಕೋಟಿ ಅಕ್ರಮ ಆರೋಪ: ತಕ್ಷಣವೇ ರಾಜೀನಾಮೆ ನೀಡಲು ಒತ್ತಾಯ

ಭಾರತೀಯ ಬಾರ್ ಕೌನ್ಸಿಲ್ (BCI) ಉಪಾಧ್ಯಕ್ಷ ಮತ್ತು ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ...

ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಮಾಧ್ಯಮಕ್ಕೆ ಅನ್ಯಾಯ : ಹೈಕೋರ್ಟ್‌ಗೆ ಅರ್ಜಿ

ಕರ್ನಾಟಕ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿ ಅಧಿಸೂಚನೆಯಲ್ಲಿ ಉರ್ದು ಮಾಧ್ಯಮ ಹಾಗೂ ಇತರ ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ಹುದ್ದೆಗಳನ್ನು ಕೈಬಿಡಲಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ನ ಧಾರವಾಡ ಪೀಠದ ಮುಂದೆ ಅರ್ಜಿ ಸಲ್ಲಿಕೆಯಾಗಿದೆ. ಉರ್ದು...

ಚುನಾವಣಾ ಆಯೋಗಕ್ಕೆ ನಕಲಿ ಆಕ್ಷೇಪಣೆ ಪತ್ರ ಸಲ್ಲಿಕೆ; ಉತ್ತರಾಖಂಡ್ ಹಾಲಿ ಕಾಂಗ್ರೆಸ್ ಶಾಸಕರ ಹೆಸರು ಡಿಲೀಟ್

ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದುಹಾಕಲು ಕೋರಿ ಸಲ್ಲಿಸಲಾದ ಆಕ್ಷೇಪಣೆಯನ್ನು (ಅರ್ಜಿ) ನಾನು ಸಲ್ಲಿಸಿಲ್ಲ ಎಂದು ವ್ಯಕ್ತಿಯೊಬ್ಬರು ನಿರಾಕರಿಸಿದ ನಂತರ, ಉತ್ತರಾಖಂಡ್ ಕಾಂಗ್ರೆಸ್ ಶಾಸಕ ಫುರ್ಕಾನ್ ಅಹಮದ್ ಅವರು ಮತದಾರರ ಪಟ್ಟಿಯ ವಿಶೇಷ ತೀವ್ರ...

RTI ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣ: ₹24 ಲಕ್ಷ ದೇವಸ್ಥಾನದ ಕಾಣಿಕೆ ಹಣ ಮನೆಗೆ ಕೊಂಡೊಯ್ದಿದ್ದ ನರೇಶ್ ಶೆಣೈ

RTI ಕಾರ್ಯಕರ್ತ ವಿನಾಯಕ ಬಾಳಿಗಾ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಲನ ಮೂಡಿಸುವಂತಹ ಮಹತ್ವದ ದಾಖಲೆಯೊಂದು ಬಹಿರಂಗವಾಗಿದೆ. ಬಾಳಿಗಾ ಹತ್ಯೆ ನಡೆಯುವುದಕ್ಕೂ ಕೆಲವೇ ದಿನಗಳ ಮುನ್ನ, ಪ್ರಕರಣದ ಪ್ರಮುಖ ಆರೋಪಿ ನರೇಶ್...

ಸಿಜೆಪಿ ಪ್ರತಿಭಟನೆ: ಪೊಲೀಸ್ ದೌರ್ಜನ್ಯಗಳ ಆರೋಪದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸುಪ್ರೀಂ ಆದೇಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ದೆಹಲಿ ಪೊಲೀಸರು ನಡೆಸಿದ ಅತಿಯಾದ ಬಲಪ್ರಯೋಗ, ಹಿಂಸಾಚಾರ ಮತ್ತು ಇತರ ಗಂಭೀರ ದುರ್ನಡತೆಯ ಆರೋಪಗಳ ತನಿಖೆಗೆ ಉನ್ನತ...

ನಕಲಿ ಔಷಧ ದಂಧೆ: ತನಿಖೆಗೆ ಕಾನೂನು ತೊಡಕು, ಎಸ್‌ಐಟಿಗೆ ವಿಶೇಷಾಧಿಕಾರಕ್ಕೆ ಬೇಡಿಕೆ

ರಾಮನಗರ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ಬೆಳಕಿಗೆ ಬಂದಿರುವ ಸುಮಾರು 5 ಕೋಟಿ ರೂಪಾಯಿ ಮೌಲ್ಯದ ಬೃಹತ್ ನಕಲಿ ಔಷಧ ದಂಧೆಯ ತನಿಖೆಗೆ ಗಂಭೀರವಾದ ಕಾನೂನು ತೊಡಕು...

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...