Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...