Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...