Homeಮುಖಪುಟ'ಬಿರಿಯಾನಿ' ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

‘ಬಿರಿಯಾನಿ’ ಚಿತ್ರ ಬಿಡುಗಡೆಗೆ ಥಿಯೇಟರ್ ಮಾಲೀಕರ ಹಿಂದೇಟು: ಮಲಯಾಳಂ ನಿರ್ದೇಶಕನ ಆಕ್ರೋಶ

- Advertisement -
- Advertisement -

ಥಿಯೇಟರ್ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಲಯಾಳಂ ಚಿತ್ರನಿರ್ದೇಶಕ ಸಾಜಿನ್ ಬಾಬು, ‘ಅವರು ಸೂಪರ್ ಸೆನ್ಸಾರ್ ಬೋರ್ಡ್‌ಗಳಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ. ತಮ್ಮ ಬಿರಿಯಾನಿ ಚಿತ್ರದ ಬಿಡುಗಡೆಗೆ ಒಪ್ಪದ ಥಿಯೇಟರ್ ಮಾಲೀಕರು ನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

“ಚಿತ್ರದಲ್ಲಿ ಲೈಂಗಿಕ ದೃಶ್ಯಗಳಿವೆ ಎಂದು ಸ್ವತಃ ಇವರೇ ಜನರನ್ನು ದಾರಿತಪ್ಪಿಸುತ್ತಿದ್ದಾರೆ. ನಂತರ, ಜನರು ಥಿಯೇಟರ್‌ಗೆ ಬರುವುದಿಲ್ಲ ಹಾಗಾಗಿ ಈ ಚಿತ್ರವನ್ನು ತಮ್ಮ ಥಿಯೇಟರ್‌ನಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದು ಮಾಲೀಕರು ಹೇಳುತ್ತಿದ್ದಾರೆ” ಎಂದು ಸಾಜಿನ್ ಬಾಬು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಿರುವನಂತಪುರಂನ ಕೇಸರಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಮೀಟ್ ದಿ ಡೈರೆಕ್ಟರ್’ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅಂತರರಾಷ್ಟ್ರೀಯ ಮೆಚ್ಚುಗೆ ಮತ್ತು ವಿಶೇಷ ತೀರ್ಪುಗಾರರ ಮೆಚ್ಚುಗೆ ಪಡೆದಿದ್ದ ಬಿರಿಯಾನಿ ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ‘ವಯಸ್ಕರಿಗೆ ಮಾತ್ರ’ (A) ಪ್ರಮಾಣಪತ್ರ ನೀಡಿತ್ತು. ಈ ಚಿತ್ರವು ಶುಕ್ರವಾರ ರಾಜ್ಯದಾದ್ಯಂತ ಹಲವಾರು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ ಅಕ್ಷಿ ಚಿತ್ರಕ್ಕೆ ಪ್ರಶಸ್ತಿ: ನಟ ಧನುಷ್‌ಗೆ 67ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

“ಈ ಚಿತ್ರವು ಮೊದಲು ಕೋಳಿಕೋಡ್‌ನ ಚಿತ್ರಮಂದಿರಗಳಿಂದ ವಿರೋಧವನ್ನು ಎದುರಿಸಿತು. ಶೀಘ್ರದಲ್ಲೇ, ಇನ್ನೂ ಕೆಲವರು ಇದನ್ನೇ ಅನುಸರಿಸಿದರು. ಚಿತ್ರದಲ್ಲಿ ಸ್ಪಷ್ಟವಾದ ಲೈಂಗಿಕ ದೃಶ್ಯಗಳಿವೆ ಎಂದು ಥಿಯೇಟರ್ ಮಾಲೀಕರು ರಹಸ್ಯವಾಗಿ ಜನರಿಗೆ ಹೇಳುತ್ತಿದ್ದಾರೆ. ಅವರು ನೈತಿಕ ಪೊಲೀಸ್‌ಗಿರಿ ಮಾಡುತ್ತಿರುವುದನ್ನು ನೋಡಿ ನಿರಾಶೆಯಾಗಿದೆ. ಇದು ಸಮಸ್ಯೆಗೆ ಸಿಲುಕಿರುವ ನಮ್ಮ ಸಾಂಸ್ಕೃತಿಕ ಸನ್ನಿವೇಶವನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಇಟಲಿಯ ಏಷ್ಯಾಟಿಕ್ ವಿಶ್ವ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನವನ್ನು ನೀಡಿದ್ದ ಬಿರಿಯಾನಿ ಚಿತ್ರದ ಅತ್ಯುತ್ತಮ ಮಹಿಳಾ ನಟನೆಗಾಗಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ ಕನಿ ಕುಶ್ರುತಿಗೆ ರಾಜ್ಯ ಚಲನಚಿತ್ರ ಪ್ರಶಸ್ತಿ ದೊರೆತಿದೆ. ಈ ಚಿತ್ರ ಮುಂದಿನ ವಾರ ಹೊರ ರಾಜ್ಯಗಳಲ್ಲಿ ಬಿಡುಗಡೆಯಾಗಲಿದೆ.

ಶೀಘ್ರದಲ್ಲೇ ಆನ್‌ಲೈನ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಸಾಜಿನ್, ಇದನ್ನು ಆನ್‌ಲೈನ್‌ನಲ್ಲಿ ನೋಡುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

2020 ರ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಈ ಬಿರಿಯಾನಿ ಚಿತ್ರವು ಪ್ರದರ್ಶನಗೊಂಡು ತೀರ್ಪುಗಾರರ ಮೆಚ್ಚುಗೆ ಪಡೆದ ಚಿತ್ರ ಎಂಬ ಹೆಗ್ಗಳಿಕೆ ಗಳಿಸಿತ್ತು. ಕೇರಳದಲ್ಲಿನ ಬಡ ಮುಸ್ಲಿಂ ಕುಟುಂಬದ ಮಹಿಳೆಯೊಬ್ಬಳು ಅನುಭವಿಸುವ ನರಕಯಾತನೆ, ಮಾಧ್ಯಮಗಳು ಮತ್ತು ಸಮಾಜ ನೋಡುವ ರೀತಿ, ಭಯೋತ್ಪಾದನೆಯ ಆಪಾದನೆ ಇತ್ಯಾದಿ ವಿಷಯಗಳನ್ನು ನಿರ್ದೇಶಕ ಸಾಜಿನ್ ಈ ಚಿತ್ರದಲ್ಲಿ ವಿವರಿಸಿದ್ದಾರೆ.


ಇದನ್ನೂ ಓದಿ: ಹಾಲಿವುಡ್ ನಿರ್ದೇಶಕರು ಹೊಗಳಿದ 87 ಸೆಕೆಂಡಿನ ಈ ವಿಡಿಯೊ ಹೇಗಿದೆ; ನೀವೇ ನೋಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...

ಇಸ್ರೇಲ್-ಅಮೆರಿಕ ದಾಳಿ: ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಹತ್ಯೆ

ಇಸ್ರೇಲ್ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಇರಾನ್‌ನ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಶನಿವಾರ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯು ಟೆಹ್ರಾನ್‌ನ ಈಶಾನ್ಯ ನರ್ಮಕ್ ಜಿಲ್ಲೆಯಲ್ಲಿರುವ ಅಹ್ಮದಿನೆಜಾದ್...

ಇಸ್ರೇಲ್-ಇರಾನ್ ಕಾಳಗಕ್ಕೆ ಹಿಝ್ಬುಲ್ಲಾ ಎಂಟ್ರಿ : ಐಡಿಎಫ್‌ ದಾಳಿಗೆ ಬೈರುತ್‌ನಲ್ಲಿ 10 ಸಾವು

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ನಡುವಿನ ಸಂಘರ್ಷಕ್ಕೆ ಈಗ ಹಿಝ್ಬುಲ್ಲಾ ಎಂಟ್ರಿಯಾಗಿದೆ. ಇಸ್ರೇಲ್ ಮತ್ತು ಲೆಬನಾನ್‌ನ ಹಿಝ್ಬುಲ್ಲಾ ನಡುವಿನ ಕಾಳಗ ಸೋಮವಾರ (ಮಾ.2) ತೀವ್ರಗೊಂಡಿದೆ. ಇಸ್ರೇಲ್ ಪಡೆಗಳು ಹಿಝ್ಬುಲ್ಲಾವನ್ನು ಗುರಿಯಾಗಿಸಿಕೊಂಡು ಲೆಬನಾನ್...

ಎಸ್‌ಐಆರ್ ಬಡವರ ವಿರುದ್ಧದ ‘ಅಘೋಷಿತ ಯುದ್ಧ’: ಶಿವಸುಂದರ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಡವರ ವಿರುದ್ದದ 'ಅಘೋಷಿತ ಯುದ್ದ'ವಾಗಿದೆ. ಇದು ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರನ್ನು ಗುರಿಯಾಗಿಸಿಕೊಂಡಿದೆ ಚಿಂತಕ ಶಿವಸುಂದರ್ ಹೇಳಿದರು. ಕಲಬುರಗಿ...

ಸಿಕ್ಕ ಸಿಕ್ಕ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಟ್ರಂಪ್ : ಅಧ್ಯಕ್ಷರ ಯುದ್ದೋನ್ಮಾದಕ್ಕೆ ಲಗಾಮು ಹಾಕಲು ಮುಂದಾದ ಯುಎಸ್ ಕಾಂಗ್ರೆಸ್

"ನಾನು ಶಾಂತಿದೂತ, ವಿಶ್ವ ಶಾಂತಿಯ ರಾಯಭಾರಿ, ಹಲವು ದೇಶಗಳ ನಡುವಿನ ಸಂಘರ್ಷಗಳನ್ನು ನಿಲ್ಲಿಸಿ ಜಗತ್ತಿನಲ್ಲಿ ಶಾಂತಿ ನೆಲೆಸುವಂತೆ ಮಾಡಿರುವ ನನಗೆ 'ನೊಬೆಲ್ ಶಾಂತಿ ಪ್ರಶಸ್ತಿ' ಕೊಡಿ" ಎನ್ನುತ್ತಲೇ, ಸಿಕ್ಕ ಸಿಕ್ಕ ದೇಶಗಳ ಮೇಲೆ...

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...