Homeಅಂಕಣಗಳುಎಲೆಮರೆಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ 'ಸಂತೋಷ ಗುಡ್ಡಿಯಂಗಡಿ’

ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ಶಾಲಾ ಶಿಕ್ಷಣದಲ್ಲಿ ರಂಗಭೂಮಿ ಕಸಿ ಮಾಡುತ್ತಿರುವ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಒಂದಿಷ್ಟು...

- Advertisement -
- Advertisement -

ಎಲೆಮರೆ-5

-ಅರುಣ್ ಜೋಳದಕೂಡ್ಲಿಗಿ.

ಶಿವಾಜಿಯ ಆಡಳಿತವಿದ್ದಾಗ ಆತನ ಸೈನ್ಯದಲ್ಲಿದ್ದ ಒಂದು ಗುಂಪು ಆತನ  ಸಾವಿನ ನಂತರ ಸಾಗರದ ಕಡೆಗೆ ವಲಸೆ ಬರುತ್ತಾರೆ. ಇಲ್ಲಿ ಹವ್ಯಕರ ಮನೆಗಳಲ್ಲಿ ಕೆಲವು ಕಾಲ ಜೀತ ಮಾಡಿಕೊಂಡಿದ್ದು, ಕಾಲಾನಂತರ ಶಿವನ ಭಕ್ತರಾಗಿದ್ದ ಇವರು ಕರಾವಳಿಯ ಕೋಟೇಶ್ವರಕ್ಕೆ ಬಂದು ಅಲ್ಲಿನ ಕೆರೆಗೆ ತಾವು ಕಟ್ಟಿದ್ದ ಲಿಂಗವನ್ನು ಎಸೆದು ಮೀನು ತಿನ್ನಲು ಶುರುಮಾಡಿದ ಪುಟ್ಟ ಸಮುದಾಯವೆ ‘ಕೂಸಾಳ’. ಜೀತ ಮಾಡುವವರನ್ನು ಒಡೆಯರು ಮನೆಯ ಮಕ್ಕಳೆಂದು ಪ್ರೀತಿಯಿಂದ ಕರೆಯುತ್ತಾರೆಂದು ನಂಬಿಸಿರುವ ‘ಕೂಸಾಳು’ ಪದವೇ ಸಮುದಾಯಕ್ಕೂ ಬಂದಿರಬಹುದು. ಉಡುಪಿ, ಕಾರ್ಕಳ, ಕುಂದಾಪುರ ಮುಂತಾದ ಕಡೆಗಳಲ್ಲಿ ನೆಲೆಸಿದ ಕೂಸಾಳುಗಳು ದಲಿತ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದು, ಇದೀಗ ತಮ್ಮನ್ನು ಆದಿ ದ್ರಾವಿಡ ಎಂದು ಕರೆದುಕೊಳ್ಳುತ್ತಾರೆ.

ಈ ಕೂಸಾಳು ಸಮುದಾಯ ‘ಕೀಳು’ ಎನ್ನುವ ಭೂತವನ್ನು ಆರಾಧಿಸುತ್ತಾರೆ. ಮರದ ಬಳಿ ಇಟ್ಟಿರುವ ಕಲ್ಲೇ ದೈವ, ಈ ದೈವದ ಹೆಸರೇ ಕೀಳು. ಹೀಗೆ ತಮ್ಮದೇ ಆದ ಪುಟ್ಟ ದೈವದ ಮನೆಗಳನ್ನು ಕಟ್ಟಿಕೊಂಡು ಪೂಜೆ ಮಾಡುತ್ತ ತಮ್ಮ ಗುರುತನ್ನು ಕಾಪಿಟ್ಟುಕೊಂಡ ಪುಟ್ಟದಾದ ಕೂಸಾಳು ಸಮುದಾಯದ ಒಳಗಿಂದ ಅಕ್ಷರದ ಬೆಳಕಿನಲ್ಲಿ ನಡೆದುಕೊಂಡು ಬಂದವರು ಸಂತೋಷ್ ಗುಡ್ಡಿಯಂಗಡಿ.

“ಮಂತ್ರವಾದಿಯಾದ ತಾತ ಸಾಗರ – ಶಿವಮೊಗ್ಗದ ಕಡೆಯ ಘಟ್ಟಕ್ಕೆ ಹೋಗುವಾಗ ಕೊಲ್ಲೂರು ಕಾಡಲ್ಲಿ ರಾತ್ರಿಯಾಗುತ್ತದೆ. ಆಗ ಮಂತ್ರಶಕ್ತಿಯಿಂದ ಎರಡು ಹುಲಿಗಳನ್ನು ವಶಮಾಡಿಕೊಂಡು ತನ್ನ ಕಾಲು ಮತ್ತು ತಲೆಯ ಬಳಿ ಕಾವಲಿಗಿರಿಸಿ ಅಜ್ಜ ಮಲಗುತ್ತಾನೆ. ದಾರಿಹೋಕ ಬ್ರಿಟೀಷ್ ಅಧಿಕಾರಿ ಅಜ್ಜನನ್ನು ನೋಡುತ್ತಾನೆ. ಈ ಮನುಷ್ಯ ಅಸಾಮಾನ್ಯ, ಇಂತವರು ನಮ್ಮ ವಿರುದ್ಧ ತಿರುಗಿಬಿದ್ದರೆ ಕಷ್ಟವೆಂದು ಆ ಮಂತ್ರವಾದಿಯನ್ನು ಏಳು ಗುಂಡಿಟ್ಟು ಕೊಂದರಂತೆ. ಅಜ್ಜಿಯ ಮೇಲೆ ಭೂತ ಬಂದು ಮೈಮೇಲೆ ಅಳಕೊಂಡು ಈ ಕತೆಯನ್ನು ಹೇಳುತ್ತಿದ್ದರು” ಎನ್ನುತ್ತ ತನ್ನ ಮುತ್ತಾತನ ಕತೆ ಹೇಳುವ ಸಂತೋಷ ತನ್ನ ಸಮುದಾಯದ ಕಥನಗಳನ್ನು ಒಡಲೊಳಗಿಟ್ಟುಕೊಂಡ ಯುವಕ.

ನಂದನ್ ನೀಲೆಕಣಿ ಅವರ ಶಿರಸಿಯ ಕಡೆ ತೋಟದಲ್ಲಿ ಜೀತ ಮಾಡುತ್ತಿದ್ದ ತಂದೆತಾಯಿಯ ಮಗನಾದ ಸಂತೋಷ್, ಪಿಯುಸಿ ಫೇಲಾಗಿ ಮನೆಯಲ್ಲಿ ಸುಳ್ಳು ಹೇಳಿ, 4 ವರ್ಷ ಗಾರೆ ಕೆಲಸ ಮಾಡುತ್ತಾನೆ. ಹಿಮಕರ ಎನ್ನುವವರ ಸಂಪರ್ಕ ಸಿಕ್ಕು ‘ನಮ್ಮ ಭೂಮಿ’ ಸಂಸ್ಥೆಯ ಬೀದಿನಾಟಕಕ್ಕೆ ಸಂತೋಷ್ ಅವರನ್ನು ಪರಿಚಯಿಸುತ್ತಾರೆ. ನಂತರ ಮುರಾರಿ ಬಲ್ಲಾಳ್ ಎನ್ನುವವರು ನೀನಾಸಂಗೆ ದಾರಿ ತೋರುತ್ತಾರೆ. ನೀನಾಸಂ ತಿರುಗಾಟದಲ್ಲಿ ಮೂರು ವರ್ಷ ಓಡಾಟ ಮಾಡಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ಒಂದು ವರ್ಷ ಮೇಷ್ಟ್ರಾಗಿ ಕೆಲಸ ಮಾಡುತ್ತಾರೆ. ಅದೇ ಹೊತ್ತಿಗೆ 2009 ರಲ್ಲಿ ಸರಕಾರಿ ಪ್ರೌಢಶಾಲೆಯ ನಾಟಕದ ಮೇಷ್ಟ್ರಾಗಿ ಕೆಲಸಕ್ಕೆ ಸೇರುತ್ತಾರೆ. ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಒಂದು ದಶಕ ಪೂರೈಸಿದ್ದಾರೆ.

ಶಾಲೆಗಳಲ್ಲಿ ರಂಗಶಿಕ್ಷಣಕ್ಕೆ ಇಂತದ್ದೇ ಮಾದರಿಯಿಲ್ಲ. ಆಯಾ ಶಾಲೆಯಲ್ಲಿ ಆಯ್ಕೆಯಾದ ರಂಗಶಿಕ್ಷಕರು ತಮ್ಮ ಕ್ರಿಯಾಶೀಲತೆ, ಹೊಸತನದಿಂದ ತಾವೇ ಮಾದರಿಗಳನ್ನು ರೂಪಿಸಬೇಕು. ಒಂದು ದಶಕದಲ್ಲಿ ಸಂಶೋಷ್ ಅವರು ರಂಗ ಶಿಕ್ಷಕರಾಗಿ ನಡೆಸಿದ ಪ್ರಯೋಗಗಳು ನಿಜಕ್ಕೂ ಅತ್ಯುತ್ತಮ ರಂಗಶಿಕ್ಷಣದ ಮಾದರಿಗಳಾಗಿವೆ. ಇಡೀ ಶಾಲೆಯನ್ನೇ ಒಂದು ರಂಗಮಂದಿರವನ್ನಾಗಿಸಿ, ಮಕ್ಕಳನ್ನು ರಂಗಭೂಮಿಯ ಕಣ್ಣೋಟದಿಂದ ಲೋಕವನ್ನು ನೋಡುವ ಮಾದರಿ ರೂಪಿಸಿದ್ದಾರೆ. ಈ ಪ್ರಯೋಗದಲ್ಲಿ ಮಕ್ಕಳಿಂದ ಈತನಕ 25 ನಾಟಕಗಳನ್ನು ಮಾಡಿಸಿದ್ದಾರೆ. ಸಂತೋಷ್ ಅವರು ‘ಸನಿಮಾತ್ಮೆ’ ಮತ್ತು ‘ಗಾಯ’ ಎನ್ನುವ ನಾಟಕಗಳನ್ನು ಬರೆದಿದ್ದಾರೆ. ಮಕ್ಕಳಿಗಾಗಿಯೇ ‘ಹುಲಿಯಜ್ಜ’, ‘ತಿಕ್ಕಲು ರಾಜ ತಿರಬೋಕಿ ರಾಜ್ಯ’, ‘ಭೂಮಿಗೆ ಜ್ವರ ಬಂದಿದೆ’, ‘ಜಟ್ರೋಫ ಎಂಬ ವರ’, ‘ಮಾಯದ ಡಬ್ಬಿ’, ‘ಪ್ಲಾಸ್ಟಿಕ್ ರಾಕ್ಷಸ’, ‘ಕಾಮನಬಿಲ್ಲಿನ ಸೈನಿಕರು’, ‘ಕಪ್ಪು ವಜ್ರ’ ನಾಟಕಗಳನ್ನು ಮಾಡಿಸಿದ್ದಾರೆ.

ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಶಾಲಾ ಮಕ್ಕಳ ಬರಹಗಳನ್ನೊಳಗೊಂಡ “ಹೆಮ್ಮರ” ಕೈಬರಹದ ಮಾಸಿಕವನ್ನು ಸಂತೋಷ್‌ರವರು ಬಹಳ ವರ್ಷ ಪ್ರಕಟಿಸಿದ್ದಾರೆ. ಅದು ಮಕ್ಕಳ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸಲು, ಮಕ್ಕಳಲ್ಲಿ ಓದಲು, ಬರೆಯಲು ದೊಡ್ಡ ಸ್ಫೂರ್ತಿಯನ್ನು ನೀಡಿತ್ತು.

ಸ್ವೀಡನ್‌ನ 16 ವರ್ಷದ ಶಾಲಾ ಬಾಲಕಿ ಗ್ರೇಟಾ ಥನ್ಬರ್ಗ್ ಹವಾಮಾನ ವೈಪರೀತ್ಯ ಕಂಡು 2018 ರಲ್ಲಿ ‘ಸ್ಕೂಲ್ ಸ್ಟ್ರೈಕ್ ಫಾರ್ ಕ್ಲೈಮೆಟ್/ ಪ್ರೈಡೇಸ್ ಫಾರ್ ಫ್ಯೂಚರ್’ ಅಭಿಯಾನ ಆರಂಭಿಸಿದಳು. ಸೆಪ್ಟಂಬರ್ 23 ರಂದು ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ‘ನಿಮಗೆಷ್ಟು ಧೈರ್ಯ’? ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯ, ಕನಸುಗಳನ್ನು ಚೂರಾಗಿಸಿದ್ದೀರಿ ಎಂದು ಜಾಗತಿಕ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಳು. ಗ್ರೇಟಾ ಪ್ರಭಾವದಿಂದ ಸಂತೋಷ್ ತಮ್ಮ ಶಾಲೆಯ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ ‘ನಾಳೆಗಳು ನಮ್ಮದು’ ಎನ್ನುವ ಧ್ಯೇಯವಾಕ್ಯದೊಂದಿಗೆ ‘ನಿಮ್ಮ ಕಸ ನಿಮಗೆ’ ಎಂಬ ಅಭಿಯಾನವನ್ನು ಆರಂಭಿಸಿದರು. ಉತ್ಪಾದಕ ಕಂಪನಿಗಳಿಗೇ ಅವರ ಪ್ಲಾಸ್ಟಿಕ್ ಕಸವನ್ನು ಪೋಸ್ಟ್ ಮಾಡುವ ವಿಶಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಹೆಗ್ಗಡನಳ್ಳಿ ಮಕ್ಕಳು ರಾಜ್ಯವ್ಯಾಪಿ ಗಮನ ಸೆಳೆಯುತ್ತಿದ್ದಾರೆ. ಇದು ಇಡೀ ದೇಶಕ್ಕೆ ಮಾದರಿಯಾಗಿದೆ.

ಸಂತೋಷ್ ಒಳ್ಳೆಯ ಕಥೆಗಾರ ಕೂಡ. ಅವರ ‘ಕೊರಬಾಡು’ ಕಥಾಸಂಕಲನ ಭಿನ್ನ ಪ್ರಯೋಗ. ಅಷ್ಟು ಚರ್ಚೆಗೆ ಬಾರದ ಈ ಸಂಕಲನದಲ್ಲಿ ದೇವನೂರು ಮಾದರಿಯ ಕಥನ ಶೈಲಿಯನ್ನು ಅನುಕರಿಸುತ್ತಲೇ ಅದನ್ನು ಮೀರಲು ಪ್ರಯತ್ನಿಸಲಾಗಿದೆ. ಬಹುಶಃ ದೇವನೂರೋತ್ತರ ನಂಜನಗೂಡಿನ ಜನರ ನುಡಿಗಟ್ಟನ್ನು ಸಂತೋಷ್ ಅವರ ಕತೆಗಳಲ್ಲಿ ಕಾಣಬಹುದು. ಕಥನ ಶೈಲಿಯಲ್ಲಿಯೂ ದೇವನೂರರ ಮಾದರಿಯನ್ನು ಹೊಸದಾಗಿ ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಸಂತೋಷ್ ನಾಟಕದ ಹಿನ್ನೆಲೆಯವರಾದ ಕಾರಣ ಈ ಕತೆಗಳಲ್ಲಿನ ನಾಟಕೀಯ ಗುಣ ವಿಶಿಷ್ಟವಾಗಿ ಮೂಡಿಬಂದಿದೆ. ಹೊಸ ತಲೆಮಾರಿನ ಬರಹಗಾರರು ಓದಲೇಬೇಕಾದ ಕಥಾ ಸಂಕಲನವಿದು. ಹೀಗೆ ಸಂತೋಷ್ ತನ್ನದೇ ಲೋಕದಲ್ಲಿ ನಡೆಸುತ್ತಿರುವ ಕ್ರಿಯಾಶೀಲ ಚಟುವಟಿಕೆಗಳು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಮ್ಮೂರ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಹೆಮ್ಮೆಯೆನಿಸುತ್ತದೆ. ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...