Homeಅಂಕಣಗಳುಎಲೆಮರೆಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ 'ಸಂತೋಷ ಗುಡ್ಡಿಯಂಗಡಿ’

ಕಡುಬಡತನದಲ್ಲಿ ಬೆಳೆದು ನೂರಾರು ಮಕ್ಕಳಿಗೆ ನೆರಳಾದ ಒಂದು ಹೆಮ್ಮರ ‘ಸಂತೋಷ ಗುಡ್ಡಿಯಂಗಡಿ’

ಶಾಲಾ ಶಿಕ್ಷಣದಲ್ಲಿ ರಂಗಭೂಮಿ ಕಸಿ ಮಾಡುತ್ತಿರುವ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಒಂದಿಷ್ಟು...

- Advertisement -
- Advertisement -

ಎಲೆಮರೆ-5

-ಅರುಣ್ ಜೋಳದಕೂಡ್ಲಿಗಿ.

ಶಿವಾಜಿಯ ಆಡಳಿತವಿದ್ದಾಗ ಆತನ ಸೈನ್ಯದಲ್ಲಿದ್ದ ಒಂದು ಗುಂಪು ಆತನ  ಸಾವಿನ ನಂತರ ಸಾಗರದ ಕಡೆಗೆ ವಲಸೆ ಬರುತ್ತಾರೆ. ಇಲ್ಲಿ ಹವ್ಯಕರ ಮನೆಗಳಲ್ಲಿ ಕೆಲವು ಕಾಲ ಜೀತ ಮಾಡಿಕೊಂಡಿದ್ದು, ಕಾಲಾನಂತರ ಶಿವನ ಭಕ್ತರಾಗಿದ್ದ ಇವರು ಕರಾವಳಿಯ ಕೋಟೇಶ್ವರಕ್ಕೆ ಬಂದು ಅಲ್ಲಿನ ಕೆರೆಗೆ ತಾವು ಕಟ್ಟಿದ್ದ ಲಿಂಗವನ್ನು ಎಸೆದು ಮೀನು ತಿನ್ನಲು ಶುರುಮಾಡಿದ ಪುಟ್ಟ ಸಮುದಾಯವೆ ‘ಕೂಸಾಳ’. ಜೀತ ಮಾಡುವವರನ್ನು ಒಡೆಯರು ಮನೆಯ ಮಕ್ಕಳೆಂದು ಪ್ರೀತಿಯಿಂದ ಕರೆಯುತ್ತಾರೆಂದು ನಂಬಿಸಿರುವ ‘ಕೂಸಾಳು’ ಪದವೇ ಸಮುದಾಯಕ್ಕೂ ಬಂದಿರಬಹುದು. ಉಡುಪಿ, ಕಾರ್ಕಳ, ಕುಂದಾಪುರ ಮುಂತಾದ ಕಡೆಗಳಲ್ಲಿ ನೆಲೆಸಿದ ಕೂಸಾಳುಗಳು ದಲಿತ ಅಸ್ಪೃಶ್ಯ ಸಮುದಾಯಕ್ಕೆ ಸೇರಿದ್ದು, ಇದೀಗ ತಮ್ಮನ್ನು ಆದಿ ದ್ರಾವಿಡ ಎಂದು ಕರೆದುಕೊಳ್ಳುತ್ತಾರೆ.

ಈ ಕೂಸಾಳು ಸಮುದಾಯ ‘ಕೀಳು’ ಎನ್ನುವ ಭೂತವನ್ನು ಆರಾಧಿಸುತ್ತಾರೆ. ಮರದ ಬಳಿ ಇಟ್ಟಿರುವ ಕಲ್ಲೇ ದೈವ, ಈ ದೈವದ ಹೆಸರೇ ಕೀಳು. ಹೀಗೆ ತಮ್ಮದೇ ಆದ ಪುಟ್ಟ ದೈವದ ಮನೆಗಳನ್ನು ಕಟ್ಟಿಕೊಂಡು ಪೂಜೆ ಮಾಡುತ್ತ ತಮ್ಮ ಗುರುತನ್ನು ಕಾಪಿಟ್ಟುಕೊಂಡ ಪುಟ್ಟದಾದ ಕೂಸಾಳು ಸಮುದಾಯದ ಒಳಗಿಂದ ಅಕ್ಷರದ ಬೆಳಕಿನಲ್ಲಿ ನಡೆದುಕೊಂಡು ಬಂದವರು ಸಂತೋಷ್ ಗುಡ್ಡಿಯಂಗಡಿ.

“ಮಂತ್ರವಾದಿಯಾದ ತಾತ ಸಾಗರ – ಶಿವಮೊಗ್ಗದ ಕಡೆಯ ಘಟ್ಟಕ್ಕೆ ಹೋಗುವಾಗ ಕೊಲ್ಲೂರು ಕಾಡಲ್ಲಿ ರಾತ್ರಿಯಾಗುತ್ತದೆ. ಆಗ ಮಂತ್ರಶಕ್ತಿಯಿಂದ ಎರಡು ಹುಲಿಗಳನ್ನು ವಶಮಾಡಿಕೊಂಡು ತನ್ನ ಕಾಲು ಮತ್ತು ತಲೆಯ ಬಳಿ ಕಾವಲಿಗಿರಿಸಿ ಅಜ್ಜ ಮಲಗುತ್ತಾನೆ. ದಾರಿಹೋಕ ಬ್ರಿಟೀಷ್ ಅಧಿಕಾರಿ ಅಜ್ಜನನ್ನು ನೋಡುತ್ತಾನೆ. ಈ ಮನುಷ್ಯ ಅಸಾಮಾನ್ಯ, ಇಂತವರು ನಮ್ಮ ವಿರುದ್ಧ ತಿರುಗಿಬಿದ್ದರೆ ಕಷ್ಟವೆಂದು ಆ ಮಂತ್ರವಾದಿಯನ್ನು ಏಳು ಗುಂಡಿಟ್ಟು ಕೊಂದರಂತೆ. ಅಜ್ಜಿಯ ಮೇಲೆ ಭೂತ ಬಂದು ಮೈಮೇಲೆ ಅಳಕೊಂಡು ಈ ಕತೆಯನ್ನು ಹೇಳುತ್ತಿದ್ದರು” ಎನ್ನುತ್ತ ತನ್ನ ಮುತ್ತಾತನ ಕತೆ ಹೇಳುವ ಸಂತೋಷ ತನ್ನ ಸಮುದಾಯದ ಕಥನಗಳನ್ನು ಒಡಲೊಳಗಿಟ್ಟುಕೊಂಡ ಯುವಕ.

ನಂದನ್ ನೀಲೆಕಣಿ ಅವರ ಶಿರಸಿಯ ಕಡೆ ತೋಟದಲ್ಲಿ ಜೀತ ಮಾಡುತ್ತಿದ್ದ ತಂದೆತಾಯಿಯ ಮಗನಾದ ಸಂತೋಷ್, ಪಿಯುಸಿ ಫೇಲಾಗಿ ಮನೆಯಲ್ಲಿ ಸುಳ್ಳು ಹೇಳಿ, 4 ವರ್ಷ ಗಾರೆ ಕೆಲಸ ಮಾಡುತ್ತಾನೆ. ಹಿಮಕರ ಎನ್ನುವವರ ಸಂಪರ್ಕ ಸಿಕ್ಕು ‘ನಮ್ಮ ಭೂಮಿ’ ಸಂಸ್ಥೆಯ ಬೀದಿನಾಟಕಕ್ಕೆ ಸಂತೋಷ್ ಅವರನ್ನು ಪರಿಚಯಿಸುತ್ತಾರೆ. ನಂತರ ಮುರಾರಿ ಬಲ್ಲಾಳ್ ಎನ್ನುವವರು ನೀನಾಸಂಗೆ ದಾರಿ ತೋರುತ್ತಾರೆ. ನೀನಾಸಂ ತಿರುಗಾಟದಲ್ಲಿ ಮೂರು ವರ್ಷ ಓಡಾಟ ಮಾಡಿ, ಕುಂದಾಪುರದ ರಂಗ ಅಧ್ಯಯನ ಕೇಂದ್ರದಲ್ಲಿ ಒಂದು ವರ್ಷ ಮೇಷ್ಟ್ರಾಗಿ ಕೆಲಸ ಮಾಡುತ್ತಾರೆ. ಅದೇ ಹೊತ್ತಿಗೆ 2009 ರಲ್ಲಿ ಸರಕಾರಿ ಪ್ರೌಢಶಾಲೆಯ ನಾಟಕದ ಮೇಷ್ಟ್ರಾಗಿ ಕೆಲಸಕ್ಕೆ ಸೇರುತ್ತಾರೆ. ಇದೀಗ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಗ್ಗಡಹಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಾ ಒಂದು ದಶಕ ಪೂರೈಸಿದ್ದಾರೆ.

ಶಾಲೆಗಳಲ್ಲಿ ರಂಗಶಿಕ್ಷಣಕ್ಕೆ ಇಂತದ್ದೇ ಮಾದರಿಯಿಲ್ಲ. ಆಯಾ ಶಾಲೆಯಲ್ಲಿ ಆಯ್ಕೆಯಾದ ರಂಗಶಿಕ್ಷಕರು ತಮ್ಮ ಕ್ರಿಯಾಶೀಲತೆ, ಹೊಸತನದಿಂದ ತಾವೇ ಮಾದರಿಗಳನ್ನು ರೂಪಿಸಬೇಕು. ಒಂದು ದಶಕದಲ್ಲಿ ಸಂಶೋಷ್ ಅವರು ರಂಗ ಶಿಕ್ಷಕರಾಗಿ ನಡೆಸಿದ ಪ್ರಯೋಗಗಳು ನಿಜಕ್ಕೂ ಅತ್ಯುತ್ತಮ ರಂಗಶಿಕ್ಷಣದ ಮಾದರಿಗಳಾಗಿವೆ. ಇಡೀ ಶಾಲೆಯನ್ನೇ ಒಂದು ರಂಗಮಂದಿರವನ್ನಾಗಿಸಿ, ಮಕ್ಕಳನ್ನು ರಂಗಭೂಮಿಯ ಕಣ್ಣೋಟದಿಂದ ಲೋಕವನ್ನು ನೋಡುವ ಮಾದರಿ ರೂಪಿಸಿದ್ದಾರೆ. ಈ ಪ್ರಯೋಗದಲ್ಲಿ ಮಕ್ಕಳಿಂದ ಈತನಕ 25 ನಾಟಕಗಳನ್ನು ಮಾಡಿಸಿದ್ದಾರೆ. ಸಂತೋಷ್ ಅವರು ‘ಸನಿಮಾತ್ಮೆ’ ಮತ್ತು ‘ಗಾಯ’ ಎನ್ನುವ ನಾಟಕಗಳನ್ನು ಬರೆದಿದ್ದಾರೆ. ಮಕ್ಕಳಿಗಾಗಿಯೇ ‘ಹುಲಿಯಜ್ಜ’, ‘ತಿಕ್ಕಲು ರಾಜ ತಿರಬೋಕಿ ರಾಜ್ಯ’, ‘ಭೂಮಿಗೆ ಜ್ವರ ಬಂದಿದೆ’, ‘ಜಟ್ರೋಫ ಎಂಬ ವರ’, ‘ಮಾಯದ ಡಬ್ಬಿ’, ‘ಪ್ಲಾಸ್ಟಿಕ್ ರಾಕ್ಷಸ’, ‘ಕಾಮನಬಿಲ್ಲಿನ ಸೈನಿಕರು’, ‘ಕಪ್ಪು ವಜ್ರ’ ನಾಟಕಗಳನ್ನು ಮಾಡಿಸಿದ್ದಾರೆ.

ಹೆಮ್ಮರಗಾಲ ಶಾಲೆಯಲ್ಲಿದ್ದಾಗ ಶಾಲಾ ಮಕ್ಕಳ ಬರಹಗಳನ್ನೊಳಗೊಂಡ “ಹೆಮ್ಮರ” ಕೈಬರಹದ ಮಾಸಿಕವನ್ನು ಸಂತೋಷ್‌ರವರು ಬಹಳ ವರ್ಷ ಪ್ರಕಟಿಸಿದ್ದಾರೆ. ಅದು ಮಕ್ಕಳ ವಿಶೇಷ ಪ್ರತಿಭೆಯನ್ನು ಅನಾವರಣಗೊಳಿಸಲು, ಮಕ್ಕಳಲ್ಲಿ ಓದಲು, ಬರೆಯಲು ದೊಡ್ಡ ಸ್ಫೂರ್ತಿಯನ್ನು ನೀಡಿತ್ತು.

ಸ್ವೀಡನ್‌ನ 16 ವರ್ಷದ ಶಾಲಾ ಬಾಲಕಿ ಗ್ರೇಟಾ ಥನ್ಬರ್ಗ್ ಹವಾಮಾನ ವೈಪರೀತ್ಯ ಕಂಡು 2018 ರಲ್ಲಿ ‘ಸ್ಕೂಲ್ ಸ್ಟ್ರೈಕ್ ಫಾರ್ ಕ್ಲೈಮೆಟ್/ ಪ್ರೈಡೇಸ್ ಫಾರ್ ಫ್ಯೂಚರ್’ ಅಭಿಯಾನ ಆರಂಭಿಸಿದಳು. ಸೆಪ್ಟಂಬರ್ 23 ರಂದು ವಿಶ್ವಸಂಸ್ಥೆಯ ಶೃಂಗಸಭೆಯಲ್ಲಿ ‘ನಿಮಗೆಷ್ಟು ಧೈರ್ಯ’? ನೀವು ನಿಮ್ಮ ಖಾಲಿ ಮಾತುಗಳಿಂದ ನನ್ನ ಬಾಲ್ಯ, ಕನಸುಗಳನ್ನು ಚೂರಾಗಿಸಿದ್ದೀರಿ ಎಂದು ಜಾಗತಿಕ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಳು. ಗ್ರೇಟಾ ಪ್ರಭಾವದಿಂದ ಸಂತೋಷ್ ತಮ್ಮ ಶಾಲೆಯ ಮಕ್ಕಳಲ್ಲಿ ಪರಿಸರದ ಅರಿವು ಮೂಡಿಸಿ ‘ನಾಳೆಗಳು ನಮ್ಮದು’ ಎನ್ನುವ ಧ್ಯೇಯವಾಕ್ಯದೊಂದಿಗೆ ‘ನಿಮ್ಮ ಕಸ ನಿಮಗೆ’ ಎಂಬ ಅಭಿಯಾನವನ್ನು ಆರಂಭಿಸಿದರು. ಉತ್ಪಾದಕ ಕಂಪನಿಗಳಿಗೇ ಅವರ ಪ್ಲಾಸ್ಟಿಕ್ ಕಸವನ್ನು ಪೋಸ್ಟ್ ಮಾಡುವ ವಿಶಿಷ್ಟ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕಾರಣಕ್ಕೆ ಹೆಗ್ಗಡನಳ್ಳಿ ಮಕ್ಕಳು ರಾಜ್ಯವ್ಯಾಪಿ ಗಮನ ಸೆಳೆಯುತ್ತಿದ್ದಾರೆ. ಇದು ಇಡೀ ದೇಶಕ್ಕೆ ಮಾದರಿಯಾಗಿದೆ.

ಸಂತೋಷ್ ಒಳ್ಳೆಯ ಕಥೆಗಾರ ಕೂಡ. ಅವರ ‘ಕೊರಬಾಡು’ ಕಥಾಸಂಕಲನ ಭಿನ್ನ ಪ್ರಯೋಗ. ಅಷ್ಟು ಚರ್ಚೆಗೆ ಬಾರದ ಈ ಸಂಕಲನದಲ್ಲಿ ದೇವನೂರು ಮಾದರಿಯ ಕಥನ ಶೈಲಿಯನ್ನು ಅನುಕರಿಸುತ್ತಲೇ ಅದನ್ನು ಮೀರಲು ಪ್ರಯತ್ನಿಸಲಾಗಿದೆ. ಬಹುಶಃ ದೇವನೂರೋತ್ತರ ನಂಜನಗೂಡಿನ ಜನರ ನುಡಿಗಟ್ಟನ್ನು ಸಂತೋಷ್ ಅವರ ಕತೆಗಳಲ್ಲಿ ಕಾಣಬಹುದು. ಕಥನ ಶೈಲಿಯಲ್ಲಿಯೂ ದೇವನೂರರ ಮಾದರಿಯನ್ನು ಹೊಸದಾಗಿ ವಿಸ್ತರಿಸಲು ಪ್ರಯತ್ನಿಸಿದ್ದಾರೆ. ಸಂತೋಷ್ ನಾಟಕದ ಹಿನ್ನೆಲೆಯವರಾದ ಕಾರಣ ಈ ಕತೆಗಳಲ್ಲಿನ ನಾಟಕೀಯ ಗುಣ ವಿಶಿಷ್ಟವಾಗಿ ಮೂಡಿಬಂದಿದೆ. ಹೊಸ ತಲೆಮಾರಿನ ಬರಹಗಾರರು ಓದಲೇಬೇಕಾದ ಕಥಾ ಸಂಕಲನವಿದು. ಹೀಗೆ ಸಂತೋಷ್ ತನ್ನದೇ ಲೋಕದಲ್ಲಿ ನಡೆಸುತ್ತಿರುವ ಕ್ರಿಯಾಶೀಲ ಚಟುವಟಿಕೆಗಳು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನಮ್ಮೂರ ಸಂತೋಷ್ ಗುಡ್ಡಿಯಂಗಡಿಯವರ ಕುರಿತು ಹೆಮ್ಮೆಯೆನಿಸುತ್ತದೆ. ಲೇಖನಕ್ಕಾಗಿ ಧನ್ಯವಾದಗಳು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...