Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...