Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...