Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...