Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....