Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...