Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...