Homeಕರ್ನಾಟಕರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ರಂಗಾಸಕ್ತರಿಗೆ ವಿಶೇಷ ಅವಕಾಶ: ತುಮಕೂರಿನ ಡೀಪ್ ಪೋಕಸ್ ಸಂಸ್ಥೆಯಿಂದ ಅಭಿನಯ ತರಭೇತಿ ಕಾರ್ಯಗಾರ

ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ

- Advertisement -
- Advertisement -

| ಅನಿಲ್ ಕುಮಾರ್ ಚಿಕ್ಕದಾಳವಟ್ಟ |

ಕನ್ನಡ ರಂಗಭೂಮಿಯಲ್ಲಿ ತುಮಕೂರು ವಿಶೇಷ ಸ್ಥಾನವನ್ನು ಪಡೆದಿದೆ. ಕಂಪನಿ ನಾಟಕದ ದಿಗ್ಗಜರಲ್ಲೊಬ್ಬರಾದ ಗುಬ್ಬಿ ವೀರಣ್ಣನವರ ತವರು ಜಿಲ್ಲೆಯಾದ ಇಲ್ಲಿ, ಈಗಲೂ ಎಂದಿಗೂ ನಿಲ್ಲದಂತೆ ಪ್ರತಿ ಶನಿವಾರ ಮತ್ತು ಭಾನುವಾರ ಪೌರಾಣೀಕ ನಾಟಕ ನಡೆಯತ್ತಲೇ ಇವೆ. ಮುಂಗಡವಾಗಿ 6 ತಿಂಗಳವರೆಗೂ ಈ ವಾರಗಳು ಕಾಯ್ದಿರಿಸುತ್ತಾರೆ. ಇಂತಹ ರಂಗ ನೆಲೆಯ ಹಿನ್ನಲೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸಾಕಷ್ಟು ಆಧುನಿಕ ರಂಗಭೂಮಿ ಚಟುವಟಿಕೆಗಳು ನಡೆಯುತ್ತಿವೆ. ಇದೀಗ ಹೆಸರಾಂತ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿ ಅವರ ನೇತೃತ್ವದ ಡೀಪ್ ಪೋಕಸ್ ಸಂಸ್ಥೆಯು ಹತ್ತು ದಿನಗಳ ಅಭಿನಯ ತರಭೇತಿ ಶಿಬಿರ ಹಮ್ಮಿಕೊಂಡಿದೆ. ಜೂನ್ 23 ರಿಂದ ಜುಲೈ 2ರವರೆಗೆ ಶಿಬಿರ ನಡೆಯಲಿದ್ದು, ಜೂನ್ 23ರ ಭಾನುವಾರ ಸಂಜೆ 5.30ಕ್ಕೆ ಶಿಬಿರ ಉದ್ಘಾಟನೆಗೊಳ್ಳಲಿದೆ. ಈ ಶಿಬಿರವನ್ನು ಉದ್ಘಾಟಿಸಲು ರಂಗಭೂಮಿ ಮತ್ತು ಸಿನೆಮಾ ನಟರಾದ ಅಚ್ಯುತ್, ನೀನಾಸಂ ಸತೀಶ್, ಧರ್ಮೇಂದ್ರ ಮುಂತಾದವರು ಭಾಗವಹಿಸಲಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‍ನ ತುಮಕೂರು ಜಿಲ್ಲಾ ಘಟಕ, ಝೆನ್ ಟೀಮ್ ಮತ್ತು ಸಮ್ಮತ ಥೀಯೇಟರ್ ತುಮಕೂರು ಇವರ ಸಹಯೋಗದಲ್ಲಿ ಶಿಬಿರ ನಡೆಯಲಿದೆ. ಪ್ರವೇಶ ಉಚಿತವಾಗಿದ್ದು ಪ್ರತಿದಿನ ಮದ್ಯಾಹ್ನ 3.30 ರಿಂದ ಸಂಜೆ 8 ರವರೆಗೆ, ತುಮಕೂರಿನ ಅಮಾನಿಕೆರೆಯ ಎದುರುಗಡೆ ಇರುವ ಕನ್ನಡ ಭವನದಲ್ಲಿ ಶಿಬಿರ ನಡೆಯಲಿದೆ. ಈ ಶಿಬಿರಕ್ಕೆ ರಂಗನಿರ್ಧೇಕರಾದ ಚನ್ನಕೇಶವ ಜಿ, ಶಿವಮೊಗ್ಗ ರಂಗಾಯಣ ನಿರ್ದೇಶಕರಾದ ಎಂ.ಗಣೇಶ್, ನಟರಾದ ಅಚ್ಯುತ್, ನೀನಾಸಂ ಸತೀಶ್, ಹನುಮಂತೇಗೌಡ ,ನಟಿ ಅಂಜಾನಾ ಶೆಟ್ಟಿ ತುಮಕೂರಿನ ರಂಗಕರ್ಮಿಗಳಾದ ಗೋಮಾರದಹಳ್ಳಿ ಮಂಜುನಾಥ್, ಉಗಮ ಶ್ರೀನಿವಾಸ್, ತಿಪಟೂರು ಚಂದ್ರು, ರಂಗಾಯಣ ರವಿಶಂಕರ್ , ಚೇತನ್ ನೀನಾಸಂ ಮುಂತಾದ ಪ್ರತಿಭೆಗಳು ಜೊತೆಯಾಗಲಿದ್ದಾರೆ.

ಶಿಬಿರದ ನಿರ್ದೇಶಕರಾಗಿ ನಟರಾಜ್ ಹೊನ್ನವಳ್ಳಿ

ನಟರಾಜ್ ಹೊನ್ನವಳ್ಳಿಯವರು ಮೂಲತಹ ತಿಟೂರಿನ ಹೊನ್ನವಳ್ಳಿಯವರಾಗಿದ್ದಾರೆ. ನೀನಾಸಂ ಸಂಸ್ಥೆಯಲ್ಲಿ ರಂಗಶಿಕ್ಷಣದ ಕೋರ್ಸ್ ಮಾಡಿರುವ ಇವರು ಪಾಶ್ಚತ್ಯ ರಂಗಭೂಮಿನ ಕುರಿತು ವಿಶೇಷ ಆಧ್ಯಯನವನ್ನು ಮಾಡಿದ್ದಾರೆ. ತಿಪಟೂರಿನಲ್ಲಿ ಪ್ರೋಥಿಯೋ ಎಂಬ ತಂಡವನ್ನು ಕಟ್ಟಿದ್ದರು. ನಾಡಿನ ಖ್ಯಾತ ರಂಗ ನೀರ್ದೇಶಕರಾಗಿ ಗುರುತಿಸಿಕೊಂಡಿರುವ ಇವರು ಕ್ರೀಯಾಶೀಲ ರಂಗಕರ್ಮಿಯಾಗಿದ್ದಾರೆ.

ನಟರಾಜ್ ಹೊನ್ನವಳ್ಳಿ

ಲಂಕೇಶರ ಬದುಕು, ಶಂಕರ ಮೊಕಾಶಿ ಪುಣೇಕರ್ ಅವರ ನಟ ನಾರಾಯಣಿ , ಪೂರ್ಣಚಂದ್ರ ತೇಜಸ್ವಿಯವರ ಜುಗಾರಿ ಕ್ರಾಸ್, ಮಾಸ್ತಿಯವರ ಸುಬ್ಬಣ್ಣ ಕಾದಂಬರಿ, ಗುಣಮುಖ, ಮುದುಕನ ಮದುವೆ, ಶೇಕ್ಸಫೀಯರ್ ಮನೆಗೆ ಬಂದ ಮುಂತಾದ 50ಕ್ಕೂ ಹೆಚ್ಚು ನಾಟಕಗಳನ್ನು ನಿರ್ದೇಶಿಸಿದ್ದಾರೆ. ಇವರಿಗೆ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿಯೂ ಸಂದಿದೆ. ಇವರ ರಂಗಸಾಧನೆಗಾಗಿ ತಿಪಟೂರು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಕ.ಸಾ.ಪ ಗೌರವಿಸಿತ್ತು.

ಡೀಪ್ ಪೋಕಸ್ ಸಂಸ್ಥೆಯ ಕುರಿತು

ಡೀಪ್ ಪೋಕಸ್ ಸಂಸ್ಥೆ ರಂಗ ನಿರ್ಧೇಶಕ ನಟರಾಜ್ ಹೊನ್ನವಳ್ಳಿಯವರ ಕನಸಿನ ಅಭಿನಯ ತರಬೇತಿ ಸಂಸ್ಥೆಯಾಗಿದೆ. ಈ ಸಂಸ್ಥೆಯು ರಂಗಭೂಮಿ ಮತ್ತು ಸಿನೆಮಾ ನಟನೆಯ ಮತ್ತು ಅಭಿನಯ ತಂತ್ರಗಳ ಬಗ್ಗೆ ಅಧ್ಯಯನ ಸಂಸ್ಥೆಯಾಗಿ ಮುಂದಿನ ದಿನಗಳಲ್ಲಿ ರೂಪುಗೊಳ್ಳಲಿದೆ. ಸದ್ಯ ಹತ್ತು ದಿನಗಳ ಕಾರ್ಯಗಾರ ನಡೆಯುತ್ತಿದ್ದು ನಂತರ ಶಿಬಿರದ ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿಯವರ ನಿರ್ದೇಶನದಲ್ಲಿ ದ.ರಾ.ಬೇಂದ್ರೆ ರಚಿಸಿರುವಂತಹ ಕಾಳಿದಾಸರ ಮೇಘದೂತ ನಾಟಕ ನಿರ್ಮಾಣವಾಗಲಿದೆ. ಹೀಗೆ ಸಿನೆಮಾ ಮತ್ತು ರಂಗಭೂಮಿಯ ಅಭಿನಯಕ್ಕಾಗಿ ದೇಹ ಮತ್ತು ಮನಸ್ಸನ್ನು ಸಿದ್ಧಪಡಿಸಿಕೊಳ್ಳುವುದು ಹೇಗೆ ಮತ್ತು ನಿರ್ದೇಶನವನ್ನೂ ಒಳಗೊಂಡೊಂತೆ ಬೇರೆ ಬೇರೆ ವಿಭಾಗಗಳನ್ನು ಕಲಿಸುವ ನಿಟ್ಟಿನಲ್ಲಿ ಡೀಪ್ ಫೋಕಸ್ ಅಭಿನಯ ಸ್ಟೋಡಿಯೋ ರೂಪುಗೊಳ್ಳಲಿದೆ. ತುಮಕೂರು ಭಾಗದಲ್ಲಿ ಒಂದು ರಂಗಭೂಮಿ ಮತ್ತು ಸಿನೆಮಾಕ್ಕೆ ಸಂಬಂಧಿಸಿದ ಶಾಲೆಯಾಗಿ ರೂಪುಗೊಳ್ಳೂವ ಸಿದ್ದತೆಯಲ್ಲಿರುವುದ ಸಂತಸದ ವಿಷಯ.

ತರಭೇತಿ ಶಿಬಿರದಲ್ಲಿ ಭಾಗವಹಿಸುವವರು ಹೆಚ್ಚಿನ ಮಾಹಿತಿಗೆ ಈ ಈ ಮೊಬೈಲ್ ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ. 9606546903, 7676360812, 9901848170, 8105515256.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...