Homeಮುಖಪುಟನಾಟಕ ವಿಮರ್ಶೆ; ಪ್ರಭಾಸ: ಪ್ರಜ್ವಲಿಸಿದ ಪ್ರತಿಭೆ ಮೇರಿ ಕ್ಯೂರಿ

ನಾಟಕ ವಿಮರ್ಶೆ; ಪ್ರಭಾಸ: ಪ್ರಜ್ವಲಿಸಿದ ಪ್ರತಿಭೆ ಮೇರಿ ಕ್ಯೂರಿ

- Advertisement -
- Advertisement -

ಮಹಿಳೆಯರ ಪ್ರತಿಭೆ, ಚೈತನ್ಯಗಳ ಬಗ್ಗೆ ಅಜ್ಞಾನ, ಅನಾದರವಿದ್ದುದು ಭಾರತದಲ್ಲಿ ಮಾತ್ರವಲ್ಲ, ಇದೊಂದು ಜಾಗತಿಕ ವಿದ್ಯಮಾನವೇ ಆಗಿತ್ತು. ಈ ಅಜ್ಞಾನ, ಅನಾದರಗಳು ಇನ್ನೂ ಪೂರ್ಣ ಅಳಿದಿಲ್ಲ. ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಪೋಲೆಂಡಿನಲ್ಲಿ ಜನಿಸಿದ, ನಂತರ ಫ್ರಾನ್ಸಿನಲ್ಲಿ ನೆಲೆನಿಂತ ಮೇರಿ ಕ್ಯೂರಿ ಅವರೂ ಇಂತಹ ಮನೋಭಾವದ ಸಮಾಜದ ವಾತಾವರಣದಿಂದ ನಲುಗಿದವರು. ಈ ವಾತಾವರಣದಲ್ಲಿಯೂ, ಆಧುನಿಕ ಕಾಲಘಟ್ಟದಲ್ಲಿ ವ್ಯಾಪಕವಾಗಿ ಜನರನ್ನು ನರಳಿಸುತ್ತಿರುವ ಭೀಕರ ಕಾಯಿಲೆ ಕ್ಯಾನ್ಸರ್‌ನ ನಿವಾರಣೆಗೆ ಅತ್ಯುತ್ತಮ ಪರಿಹಾರವಾಗಿ ಒದಗಿರುವ ರೇಡಿಯೋ ವಿಕಿರಣ ಚಿಕಿತ್ಸೆಗೆ ಮೂಲಧಾತುವಾದ ರೇಡಿಯಂ ಧಾತುವನ್ನು ಸಂಶೋಧಿಸಿದ ವಿಜ್ಞಾನಿ ಇವರು. ಇವರ ಬದುಕು ಮತ್ತು ಸಾಧನೆಗಳನ್ನು ಆಧರಿಸಿದ ನಾಟಕ ’ಪ್ರಭಾಸ’. ಪ್ರಭಾಸ ಎಂದರೆ ಕಿರಣ ಎಂದು ಅರ್ಥ.

ಮೈಸೂರಿನ ಪರಿವರ್ತನ ರಂಗ ಸಮಾಜ, ಕಲಾಸುರುಚಿ, ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ ’ಕುತೂಹಲಿ’ ಮೈಸೂರು ವಿಜ್ಞಾನ ನಾಟಕೋತ್ಸವದಲ್ಲಿ ಪ್ರದರ್ಶಿತವಾದ ’ಪ್ರಭಾಸ’ ನಾಟಕವನ್ನು ಧಾರವಾಡದ ಅಭಿನಯ ಭಾರತಿ ರಂಗ ತಂಡದವರು ರಂಗಕ್ಕೆ ತಂದಿದ್ದಾರೆ. ಅಮೆರಿಕದ ರಂಗ ನಿರ್ದೇಶಕ ಅಲನ್ ಅಲ್ಡಾ ರಚಿಸಿದ ಮೂಲ ’ರೇಡಿಯಮ್’ ನಾಟಕವನ್ನು ಸುಮನಾ ಡಿ ಮತ್ತು ಶಶಿಧರ ಡೋಂಗ್ರೆ ಕನ್ನಡಕ್ಕೆ ತಂದಿದ್ದಾರೆ. ಮೈಸೂರಿನ ರಂಗಾಯಣದ ಕಿರುರಂಗಮಂದಿರದಲ್ಲಿ ಈ ನಾಟಕವು ಪ್ರದರ್ಶಿತಗೊಂಡಿತು.

ಮೇರಿ ಕ್ಯೂರಿ

ನಾಟಕ ಮೇರಿ ಕ್ಯೂರಿ ಅವರ ಕೌಟುಂಬಿಕ ಬದುಕು, ಅವರ ವೈಜ್ಞಾನಿಕ ಸಂಶೋಧನೆಯ ವಿವಿಧ ಹಂತದ ಏಳುಬೀಳುಗಳು, ಮಡದಿಯ ಸಾಧನೆಯಲ್ಲಿ ಸಂತೋಷ ಕಾಣುವ ಪತಿ ವಿಜ್ಞಾನಿ ಪಿಯರ್ ಕ್ಯೂರಿ ಕೌಟುಂಬಿಕ ಬದುಕು ಮತ್ತು ಸಂಶೋಧನೆಯಲ್ಲಿ ನೀಡುವ ಸಹಕಾರ, ಸಂಶೋಧನೆಯ ಪ್ರಯೋಗಕ್ಕೆ ತನ್ನನ್ನು ಒಡ್ಡಿಕೊಳ್ಳುವ ಪಿಯರ್ ಅದರಿಂದಲೇ ಅಸು ನೀಗುವುದು, ಇದು ಮೇರಿ ಕ್ಯೂರಿ ಬಾಳಿನಲ್ಲಿ ತುಂಬುವ ಶೂನ್ಯ, ಇಂತಹ ಸಂದರ್ಭದಲ್ಲಿ ಮೇರಿಯವರಿಗೆ ಬೆಂಬಲವಾಗಿ ನಿಲ್ಲುವ ಗೆಳೆಯ ಎಮೆಲ್ ಬೋರಿಲ್, ಸಂದರ್ಭದ ಸಹಜ ಬೆಳವಣಿಗೆಯಲ್ಲಿ ಪರಸ್ಪರ ಹತ್ತಿರವಾಗುವ ಎಮೆಲ್ ಮತ್ತು ಮೇರಿ ಕ್ಯೂರಿ, ಇದು ಎಮೆಲ್ ಕುಟುಂಬದಲ್ಲಿ ಎಬ್ಬಿಸುವ ಬಿರುಗಾಳಿ, ಇವುಗಳನ್ನೆಲ್ಲ ಮೀರಿ ಸಂಶೋಧನೆಯಲ್ಲಿ ತೊಡಗುವ ಮೇರಿ ಕ್ಯೂರಿ, ಯಶಸ್ವಿ ಸಂಶೋಧನೆಗೆ ದೊರಕುವ ಎರಡೆರಡು ನೊಬೆಲ್ ಪ್ರಶಸ್ತಿಗಳು, ಕೊನೆಗೆ ತನ್ನ ಸಂಶೋಧನೆಯ ರೇಡಿಯೋ ವಿಕಿರಣದಿಂದಲೇ ತನ್ನ 66ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸುವ ಮೇರಿ ಕ್ಯೂರಿ.. ಇವೆಲ್ಲವುಗಳು ನಾಟಕದಲ್ಲಿ ಸಹಜವಾಗಿ ಮೂಡಿ ಬರುತ್ತವೆ. ಈ ನಡುವೆ ನಾಟಕ ಧರ್ಮ, ದೇವರು ಮತ್ತು ವಿಜ್ಞಾನದ ನಡುವಿನ ಸಂಘರ್ಷವನ್ನೂ ನಿರೂಪಿಸುತ್ತದೆ. ಹಾಗೆ ನೋಡಿದರೆ ಇದನ್ನೊಂದು ’ವಿಜ್ಞಾನ ನಾಟಕ’ ಎಂದು ಕರೆದುಬಿಟ್ಟರೆ ನಾಟಕಕ್ಕೆ ಅನ್ಯಾಯವಾಗುತ್ತದೆ. ಮನುಷ್ಯ ಸಹಜ ಪ್ರೀತಿ, ದಾಂಪತ್ಯದ ಏಳುಬೀಳುಗಳು, ದಾಂಪತ್ಯೇತರ ಸಂಬಂಧ, ಇಂತಹ ಸಂಬಂಧಗಳು ಉಂಟುಮಾಡುವ ಕೌಟುಂಬಿಕ ಸಮಸ್ಯೆಗಳು ಎಲ್ಲವನ್ನೂ ನಿರ್ದೇಶಕರು (ನಿ: ಸಾಲಿಯಾನ್ ಉಮೇಶ ನಾರಾಯಣ) ಹದವಾಗಿ ಬೆಸೆದಿದ್ದಾರೆ.

ಆರಂಭದ ಸುಮಾರು ಅರ್ಧತಾಸು ನಾಟಕ ಕುತೂಹಲ ಕೆರಳಿಸದೆ ಮಂದಗತಿಯಲ್ಲಿ ಸಾಗಿದರೆ ನಂತರದ ದೃಶ್ಯಗಳು ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂತೆ ಜೀವಪಡೆಯುತ್ತಾ ಸಾಗುತ್ತದೆ. ನಾಟಕದಲ್ಲಿ ಬಳಸಿದ ಪಾಶ್ಚಾತ್ಯ ವೀಡಿಯೋ ತುಣುಕುಗಳ ಹಿನ್ನೆಲೆ, ಪಾಶ್ಚಾತ್ಯ ಸಂಗೀತ ಕೊಂಚ ಅಬ್ಬರದೆನಿಸಿದರೂ ಆ ದೇಶದ ಆವರಣವನ್ನು ಮೂಡಿಸುವುದರಲ್ಲಿ ಸಹಾಯ ಮಾಡಿತು. ಆದರೆ ಒಟ್ಟು ಸಂಗೀತ ಇನ್ನಷ್ಟು ಸುಧಾರಿಸಬೇಕಿತ್ತು (ಸಂಗೀತ: ವಿಶ್ವಜಿತ್ ಹಂಪಿಹೊಳೆ). ನಾಟಕದ ಅಂತಿಮ ಹಂತದಲ್ಲಿ ಬರುವ ಮೇರಿಕ್ಯೂರಿ ನೊಬೆಲ್ ಸ್ವೀಕಾರ ಸಂದರ್ಭದ ಭಾಷಣದ ಸನ್ನಿವೇಶ ಪೇಲವವಾಗಿದ್ದು ಇದನ್ನು ಪರಿಣಾಮಕಾರಿಯಾಗಿ ತರಬಹುದಿತ್ತು.

ಪಿಯರ್ ಕ್ಯೂರಿ

ನಾಟಕದಲ್ಲಿ ಪ್ರತಿಯೊಬ್ಬ ನಟನಟಿಯರೂ ತಮ್ಮ ಪಾತ್ರಕ್ಕೆ ಜೀವ ತುಂಬುವ ಕೆಲಸವನ್ನು ಶ್ರದ್ಧೆಯಿಂದ ಮಾಡಿದರು. ಮೇರಿ ಕ್ಯೂರಿ (ಜ್ಯೋತಿ ಪುರಾಣಿಕ), ಮಾರ್ಗರಿತ ಬೋರೆಲ್ (ಜಯಶ್ರೀ ಜೋಶಿ), ಪಾಲ್ ಲಾಂಗೆವಿನ (ಸುನೀಲ ಗಿರಡ್ಡಿ), ಟಾರ್ನ್ ಬ್ಲಾಡ್ (ಅರವಿಂದ ಕುಲಕರ್ಣಿ) ಪಾತ್ರಗಳು ವಿಶೇಷ ಗಮನ ಸೆಳೆದವು. ತಾಂತ್ರಿಕ ನಿರ್ವಹಣೆ (ನಾಗರಾಜ ಪಾಟೀಲ), ಬೆಳಕು (ಯೋಗೀಶ ಬಿ) ಪ್ರಸಾಧನ (ಸಂತೋಷ ಮಹಾಲೆ), ರಂಗ ನಿರ್ವಹಣೆ (ವಿಜಯೇಂದ್ರ ಅರ್ಚಕ) ನಾಟಕಕ್ಕೆ ಪೂರಕವಾಗಿತ್ತು.

ಪಠ್ಯಗಳಿಂದ ವಿಜ್ಞಾನದ ಸಂಗತಿಗಳನ್ನು ತೆಗೆದು, ಆ ಜಾಗದಲ್ಲಿ ಜ್ಯೋತಿಷ್ಯ, ಮತ- ಸಂಪ್ರದಾಯಗಳನ್ನು ತುಂಬುವ ಕೆಲಸ ರಾಷ್ಟ್ರಮಟ್ಟದಲ್ಲಿ ನಡೆಯುತ್ತಿದೆ. ಇದು ನಮ್ಮನ್ನು ಗತಕಾಲಕ್ಕೆ ಕೊಂಡೊಯ್ಯುವ ಪ್ರಯತ್ನ ಎಂದು ದೇಶದ ವಿದ್ವಾಂಸರು ಮತ್ತು ಶಿಕ್ಷಣ ತಜ್ಞರು ಎಚ್ಚರಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ತನ್ನದೇ ಹೊಸ ಶಿಕ್ಷಣ ನೀತಿಯನ್ನು ತರಲು ಸಜ್ಜಾಗಿದೆ. ತನ್ನ ನೂತನ ರಾಜ್ಯ ಶಿಕ್ಷಣ ನೀತಿಯ ಭಾಗವಾಗಿ ವಿಜ್ಞಾನ ನಾಟಕಗಳನ್ನು ರಾಜ್ಯದ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಹಮ್ಮಿಕೊಳ್ಳುವ ಯೋಜನೆಯನ್ನು ಸರ್ಕಾರ ರೂಪಿಸಿ ಜಾರಿಗೆ ತಂದರೆ ಮಕ್ಕಳಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವವನ್ನು ಮೂಡಿಸುವ ಕಾರ್ಯ ಹೆಚ್ಚು ಸುಲಭವಾಗಿ ಸಾಧ್ಯವಾಗುತ್ತದೆ.

ಡಾ. ಸರ್ಜಾಶಂಕರ ಹರಳಿಮಠ

ಡಾ. ಸರ್ಜಾಶಂಕರ ಹರಳಿಮಠ
ಲೇಖಕ, ಕವಿ ಸರ್ಜಾಶಂಕರ್ ಅವರು ಮೂಲತಃ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಹರಳಿಮಠ ಗ್ರಾಮದವರು. ’ಅಂತರಾಳ’, ’ಬೆಚ್ಚಿ ಬೀಳಿಸಿದ ಬೆಂಗಳೂರು’, ’ಬಾರಯ್ಯ ಬೆಳದಿಂಗಳೇ’, ’ಸುಡುಹಗಲ ಸೊಲ್ಲು’ ಅವರ ಕೆಲವು ಪ್ರಕಟಿತ ಪುಸ್ತಕಗಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...