Homeಮುಖಪುಟ'ಖಾಸಗಿ ಮಾಹಿತಿಯ ಕಳ್ಳತನ' : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದೆ.

ವಾಟ್ಸಾಪ್‌ನ ‘ಒಪ್ಪಿಕೊಳ್ಳಿ ಇಲ್ಲವೇ ಬಿಟ್ಟುಬಿಡಿ’ (take it or leave it) ಎಂಬ ವಿವಾದಾತ್ಮಕ ಗೌಪ್ಯತಾ ನೀತಿಯ ವಿರುದ್ಧ ಭಾರತೀಯ ಸ್ಪರ್ಧಾತ್ಮಕ ಆಯೋಗವು (ಸಿಸಿಐ) 213.14 ಕೋಟಿ ರೂಪಾಯಿಗಳ ದಂಡ ವಿಧಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ವಾಟ್ಸಾಪ್ ಮತ್ತು ಮೆಟಾ ಸಂಸ್ಥೆಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಯ್‌ಮಾಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿತು.

ಈ ಸಂದರ್ಭದಲ್ಲಿ ನ್ಯಾಯಪೀಠವು, ಬಳಕೆದಾರರಿಗೆ ತಮ್ಮ ವೈಯಕ್ತಿಕ ಡೇಟಾ ಹಂಚಿಕೆಯನ್ನು ನಿರಾಕರಿಸಲು ಯಾವುದೇ ಅರ್ಥಪೂರ್ಣವಾದ ‘ಆಪ್ಟ್-ಔಟ್’ (Opt-out) ಆಯ್ಕೆಯನ್ನು ನೀಡದಿರುವುದನ್ನು ತೀವ್ರವಾಗಿ ಪ್ರಶ್ನಿಸಿತು. ಬಳಕೆದಾರರ ಒಪ್ಪಿಗೆಯಿಲ್ಲದೆ ಅವರ ಡೇಟಾವನ್ನು ಇತರ ಕಂಪನಿಗಳೊಂದಿಗೆ ಹಂಚಿಕೊಳ್ಳುವ ಈ ನೀತಿಯು ಮಾರುಕಟ್ಟೆಯಲ್ಲಿನ ತನ್ನ ಪ್ರಬಲ ಸ್ಥಾನದ ದುರುಪಯೋಗ ಎಂದು ನ್ಯಾಯಾಲಯದ ಈ ವಿಚಾರಣೆಯು ಎತ್ತಿ ತೋರಿಸಿದೆ.

ಆಯ್ಕೆಯಿಂದ ಹೊರಗುಳಿಯುವ ಪ್ರಶ್ನೆ ಎಲ್ಲಿದೆ? ಇದು ಖಾಸಗಿ ಮಾಹಿತಿಯ ಕಳ್ಳತನ ಮಾಡುವ ಗೌಪ್ಯ ಮಾರ್ಗವಾಗಿದೆ ಎಂದ ಸುಪ್ರೀಂ ಕೋರ್ಟ್, ನಾಗರಿಕರನ್ನು ದೊಡ್ಡ ತಂತ್ರಜ್ಞಾನ ಕಂಪನಿಗಳೊಂದಿಗೆ ಅಸಮಾನ ಒಪ್ಪಂದಗಳಿಗೆ ಒತ್ತಾಯಿಸಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದೆ.

ಭಾರತದಲ್ಲಿ ಖಾಸಗಿತನದ ಹಕ್ಕನ್ನು ಅತ್ಯಂತ ಕಟ್ಟುನಿಟ್ಟಾಗಿ ಮತ್ತು ಜಾಗರೂಕತೆಯಿಂದ ರಕ್ಷಿಸಲಾಗುತ್ತದೆ ಎಂದ ಸುಪ್ರೀಂ ಕೋರ್ಟ್, ದೊಡ್ಡ ತಂತ್ರಜ್ಞಾನ ಕಂಪನಿಗಳು ರೂಪಿಸುವ ನಿಯಮಗಳು ಮತ್ತು ಷರತ್ತುಗಳು ಎಷ್ಟು ಚಾಣಾಕ್ಷತನದಿಂದ ಕೂಡಿರುತ್ತವೆ ಎಂದರೆ, ಅವುಗಳ ಹಿಂದಿನ ನಿಜವಾದ ಉದ್ದೇಶ ಮತ್ತು ಪರಿಣಾಮಗಳನ್ನು ಸಾಮಾನ್ಯ ಜನರು ಅರ್ಥಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟಿದೆ. ಇಂತಹ ಸಂಕೀರ್ಣ ಭಾಷೆಯ ಒಪ್ಪಂದಗಳ ಮೂಲಕ ಬಳಕೆದಾರರ ಮಾಹಿತಿಯನ್ನು ಪಡೆಯುವುದು ಖಾಸಗಿ ಮಾಹಿತಿಯ ಕಳ್ಳತನಕ್ಕೆ ಸಮನಾದ ಮಾರ್ಗವಾಗಿದೆ ಎಂದು ಕಿಡಿಕಾರಿದೆ.

ಬಳಕೆದಾರರು ಮತ್ತು ದೊಡ್ಡ ತಂತ್ರಜ್ಞಾನ ಕಂಪನಿಗಳ ನಡುವೆ ಸಮಾನವಾದ ಚೌಕಾಶಿ ಶಕ್ತಿ ಇಲ್ಲದಿರುವಾಗ, ಅಂತಹ ಸಂದರ್ಭದಲ್ಲಿ ಗ್ರಾಹಕರ ದತ್ತಾಂಶವನ್ನು ಹಂಚಿಕೊಳ್ಳಲು ಕಂಪನಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಅನಿವಾರ್ಯ ಪರಿಸ್ಥಿತಿಯಲ್ಲಿ ಅಥವಾ ಸರಿಯಾದ ಮಾಹಿತಿ ಇಲ್ಲದೆ ಬಳಕೆದಾರರು ನೀಡುವ ಒಪ್ಪಿಗೆಯನ್ನು “ಸ್ವತಂತ್ರ ಅಥವಾ ಪೂರ್ಣ ಮಾಹಿತಿಯುಕ್ತ ಒಪ್ಪಿಗೆ” ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಒತ್ತಿಹೇಳಿದೆ. ಇಂತಹ ಸಂದರ್ಭಗಳಲ್ಲಿ ಪಡೆಯುವ ಒಪ್ಪಿಗೆಯನ್ನು ನ್ಯಾಯಾಲಯವು “ತಯಾರಿಸಿದ ಒಪ್ಪಿಗೆ” ಎಂದು ಕರೆದಿದ್ದು, ಇದು ಸಂವಿಧಾನಬದ್ಧವಾದ ವೈಯಕ್ತಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಈ ಪ್ರಕರಣವು ಕೇವಲ ಕಂಪನಿಗಳ ನಡುವಿನ ವಿವಾದವಲ್ಲ, ಬದಲಾಗಿ ಇಡೀ ದೇಶದ ಜನರ ದತ್ತಾಂಶ ಸುರಕ್ಷತೆಗೆ ಸಂಬಂಧಿಸಿದ ನೀತಿ ರೂಪಿಸುವ ವಿಷಯವಾಗಿರುವುದರಿಂದ, ಸುಪ್ರೀಂ ಕೋರ್ಟ್ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವನ್ನು ಪ್ರಕರಣದಲ್ಲಿ ಒಂದು ಪಕ್ಷವನ್ನಾಗಿ ಸೇರಿಸಿಕೊಂಡಿದೆ. ಇದರ ಮೂಲಕ ತಂತ್ರಜ್ಞಾನ ಕಂಪನಿಗಳ ಖಾಸಗಿ ನೀತಿಗಳು ರಾಷ್ಟ್ರ ಮಟ್ಟದ ದತ್ತಾಂಶ ಸಂರಕ್ಷಣಾ ಕಾನೂನುಗಳ ಮೇಲೆ ಬೀರುವ ವ್ಯಾಪಕ ಪರಿಣಾಮಗಳನ್ನು ಚರ್ಚಿಸಲು ನ್ಯಾಯಾಲಯ ನಿರ್ಧರಿಸಿದೆ. ಸರ್ಕಾರದ ಭಾಗವಹಿಸುವಿಕೆಯು ಈ ಪ್ರಕರಣದಲ್ಲಿ ಸಮಗ್ರವಾದ ಮತ್ತು ಭದ್ರವಾದ ನೀತಿಗಳನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ನ್ಯಾಯಾಲಯ ಭಾವಿಸಿದೆ.

ಫೆಬ್ರವರಿ 9 ರಂದು ಪ್ರಕರಣದಲ್ಲಿ ಮಧ್ಯಂತರ ಆದೇಶಗಳನ್ನು ಹೊರಡಿಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...