Homeಮುಖಪುಟಯುದ್ಧ ನೌಕೆ 'INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

ಯುದ್ಧ ನೌಕೆ ‘INS ವಿಕ್ರಾಂತ್’‌ ಉಪಕರಣಗಳ ಕಳ್ಳತನ; ಪ್ರಕರಣ ಭೇದಿಸಿದ NIA

- Advertisement -
- Advertisement -

ಭಾರತ ನಿರ್ಮಿತ ಮೊದಲ ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್‌ನಿಂದ ಹಾರ್ಡ್ ಡಿಸ್ಕ್, ರಾಮ್‌ಗಳು ಹಾಗೂ ಪ್ರೊಸೆಸರ್‌ಗಳ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣವನ್ನು ಭೇದಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಹೇಳಿಕೊಂಡಿದೆ.

2019 ರ ಸೆಪ್ಟೆಂಬರ್‌ನಲ್ಲಿ ಕೇರಳದ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಹಡಗು ನಿರ್ಮಾಣದ ಸಂದರ್ಭದಲ್ಲಿ  ಕಳ್ಳತನ ವರದಿಯಾಗಿತ್ತು.

ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ಇಬ್ಬರು ವಲಸೆ ಕಾರ್ಮಿಕರನ್ನು ಬಂಧಿಸಿದ್ದು, ಬಂಧಿತರಲ್ಲಿ ಒಬ್ಬ ವ್ಯಕ್ತಿ ಬಿಹಾರ ಮೂಲದವನು ಇನ್ನೊಬ್ಬ ವ್ಯಕ್ತಿ ರಾಜಸ್ಥಾನದ ನಿವಾಸಿಯಾಗಿದ್ದಾರೆ. ಇಬ್ಬರೂ ಹಡಗಿನಲ್ಲಿ ಪೈಂಟಿಂಗ್‌ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಗುತ್ತಿಗೆದಾರನೊಂದಿಗೆ ವಾಗ್ವಾದವಾಗಿದ್ದರಂದ ಅವರನ್ನು ಕೆಲಸದಿಂದ ಅವರನ್ನು ವಜಾಗೊಳಿಸಲಾಗಿತ್ತು. ಕೆಲಸದಿಂದ ವಜಾಗೊಳಿಸಿದ್ದಕ್ಕೆ ಪ್ರತಿಕ್ರಿಯೆಯಾಗಿ ಅವರು ಈ ಉಪಕರಣಗಳನ್ನು ಕದ್ದಿದ್ದಾರೆ ಎಂದು ಎನ್ಐಎ ಮೂಲಗಳು ತಿಳಿಸಿವೆ.

ಹಡಗಿನಿಂದ ಕಳ್ಳತನವಾದ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಕೇರಳ ಪೊಲೀಸರ ನೆರವಿನೊಂದಿಗೆ 5,000 ಕ್ಕೂ ಹೆಚ್ಚು ಜನರ ಬೆರಳಚ್ಚುಗಳನ್ನು ಪರೀಕ್ಷಿಸಿತ್ತು.

naanu gauri,ನಾನು ಗೌರಿ,
ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಐಎನ್ಎಸ್ ವಿಕ್ರಾಂತ್ .

ಘಟನೆಯ ನಂತರ ಹೆಚ್ಚುವರಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯನ್ನು ನಿಯೋಜಿಸುವುದರೊಂದಿಗೆ ಹಡಗುಕಟ್ಟೆಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಬಯೋಮೆಟ್ರಿಕ್ ಸ್ಕ್ಯಾನಿಂಗ್ ಮತ್ತು ಬಾಡಿ ಸ್ಕ್ಯಾನಿಂಗ್ ಅನ್ನು ಸಹ ಗೇಟ್‌ಗಳಲ್ಲಿ ಕಡ್ಡಾಯಗೊಳಿಸಲಾಗಿದೆ.

ಕೊಚ್ಚಿನ್ ಶಿಪ್‌ಯಾರ್ಡ್ ಭಾರತದ ಅತಿದೊಡ್ಡ ಹಡಗು ನಿರ್ಮಾಣ ಮತ್ತು ನಿರ್ವಹಣಾ ಕೇಂದ್ರವಾಗಿದೆ.

ಐಎನ್ಎಸ್ ವಿಕ್ರಾಂತ್ ನೌಕೆಯ ವಿನ್ಯಾಸದ ಕೆಲಸವು 1999 ರಲ್ಲಿ ಪ್ರಾರಂಭವಾಗಿ, ನೌಕೆಯನ್ನು ಕಟ್ಟಲು ಫೆಬ್ರವರಿ 2009 ರಲ್ಲಿ ಪ್ರಾರಂಭಿಸಲಾಗಿದೆ. ಈ ಬೃಹತ್ ನೌಕೆಯು ಫೆಬ್ರವರಿ 2021 ರಲ್ಲಿ ಸಮುದ್ರ ಪ್ರಯೋಗಗಳನ್ನು ಪ್ರಾರಂಭಿಸಿ 2023 ರಲ್ಲಿ ಸೇವೆಗೆ ಪ್ರವೇಶಿಸುವ ನಿರೀಕ್ಷೆಯಿದೆ. ಈ ಯೋಜನೆಯ ವೆಚ್ಚವು 20,000 ಕೋಟಿ ರೂ. ಆಗಿದೆ.

ಐಎನ್‌ಎಸ್ ವಿಕ್ರಾಂತ್ ಪೂರ್ಣಗೊಳ್ಳುವುದರೊಂದಿಗೆ, ವಿಮಾನವಾಹಕ ನೌಕೆಗಳ ನಿರ್ಮಾಣದಲ್ಲಿ ಭಾರತವು ಅಮೇರಿಕಾ, ಇಂಗ್ಲೆಂಡ್, ರಷ್ಯಾ, ಫ್ರಾನ್ಸ್ ಮತ್ತು ಚೀನಾ ಶ್ರೇಣಿಯನ್ನು ಸೇರಲಿದೆ.


ಓದಿ: ಗಡಿಯನ್ನು ಸೈನ್ಯಕ್ಕೆ ಬಿಡಿ, ಬಾಹ್ಯಾಕಾಶವನ್ನು ವಿಜ್ಞಾನಿಗಳಿಗೆ ಬಿಡಿ. ಬನ್ನಿ ನಮ್ಮೊಡನೆ ಮಾತನಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...