Homeಮುಖಪುಟನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

ನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

- Advertisement -
- Advertisement -

ಮೊನ್ನೆಯಷ್ಟೇ 4ನೇ ಹಂತದ ಮತದಾನ ಮುಗಿದಿದೆ. ಮೋದಿ ಜನಪ್ರಿಯತೆ ಬಾಲಾಕೋಟ್ ವಾಯುದಾಳಿ ಕಾರಣದಿಂದಾಗಿ ಮತ್ತೆ ಮೊದಲಿನಷ್ಟು ಅಲ್ಲದಿದ್ದರೂ ಉತ್ತಮಗೊಂಡಿದೆ ಎಂದು ಸಮೀಕ್ಷಾ ವರದಿಯೊಂದು 3ನೇ ಹಂತದ ಮತದಾನಕ್ಕೂ ಮುಂಚೆ ಹೇಳಿತ್ತು. ಈ ಬಾಲಾಕೋಟ್ ವಾಯುದಾಳಿಯ ವಿಚಾರವೆಲ್ಲ ಹಳ್ಳಿಹಳ್ಳಿಗೆಲ್ಲ ಮುಟ್ಟಿತೆ? ಹಾಗಾಗಿದ್ದರೆ, ಈ ವಿಚಾರ ಪ್ರಸ್ತಾಪಿಸುತ್ತಲೇ ಇರುವ ಮೋದಿ ಸಹಿತ ಬಿಜೆಪಿ ನಾಯಕರ ಮಾತುಗಳನ್ನು ಪ್ರಚಾರ ಮಾಡಲು ಮಾತ್ರ ಒಂದು ದೊಡ್ಡ ಮಟ್ಟದ ವ್ಯವಸ್ಥಿತ ಯೋಜನೆ ನಡೆದಿದೆಯಲ್ಲವೇ? ಭಾರಿ ಮೊತ್ತವನ್ನು ವ್ಯಯಿಸದೇ ಅದು ಸಾಧ್ಯವೇ?

ಇಲ್ಲಿ ಮೋದಿ ವೇವ್ ಅಂದುಬಿಟ್ಟರೆ ಮುಗಿಯಲ್ಲ ಮಾಧ್ಯಮಗಳೇ, ಅದನ್ನು ಪುಶ್ ಮಾಡ್ತಾ ಇರೋದು ಮನಿ ವೇವ್… ಅಂದರೆ ಬಿಜೆಪಿ ನೀರಿನಂತೆ ಖರ್ಚು ಮಾಡುತ್ತಿರುವ ದುಡ್ಡು…ಈ ಸಲದ ಚುನಾವಣೆಯಲ್ಲಿ ಬಿಜೆಪಿಯ ವಿಪರೀತ ಪಾರ್ಟಿ ಫಂಡ್ ಬಗ್ಗೆ ಚರ್ಚೆಯೇ ಆಗಿಲ್ಲ… ಈ ಕುರಿತಾಗಿ ಒಂದು ನೋಟ ಇಲ್ಲಿದೆ….

ಇವತ್ತು ದೇಶದ ಎಲ್ಲ ಬಿಜೆಪಿಯೇತರ ಪಕ್ಷಗಳು ಚುನಾವಣೆಗಾಗಿ ವೆಚ್ಚ ಮಾಡುತ್ತಿರುವ ಒಟ್ಟು ಮೊತ್ತಕ್ಕಿಂತಲೂ ಹಲವು ಪಟ್ಟು ಮೊತ್ತವನ್ನು ಬಿಜೆಪಿ ಖರ್ಚು ಮಾಡುತ್ತಿದೆ. ಜೊತೆಗೆ ವಿವಿಧ ರೂಪದಲ್ಲಿ ‘ಅಗೋಚರ’ ಮೂಲಗಳು ಅದಕ್ಕೆ ಹಣಕಾಸಿನ ನೆರವು ಹರಿಸುತ್ತಲೇ ಇವೆ.
ಫಂಡ್ ರೈಸಿಂಗ್: ಬಿಜೆಪಿದು ಶೇ.75!

ಅಧಿಕೃತ ಅಂಕಿಅಂಶಗಳ ಪ್ರಕಾರವೇ, ದೇಶದ ಎಲ್ಲ ಪಕ್ಷಗಳಿಗೆ ದೊರೆತ ಪಾರ್ಟಿ ಫಂಡಿಗಿಂತಲೂ ಹಲವು ಪಟ್ಟು ಬಿಜೆಪಿಗೆ ಲಭಿಸಿದೆ. ಆಶ್ಚರ್ಯವೇನು ಬಂತು ಅಲ್ಲವೇ… ಕಾರ್ಪೋರೇಟ್ ನೀತಿಗಳನ್ನೇ ತನ್ನ ಉಸಿರಾಗಿಸಿಕೊಂಡ ಬಿಜೆಪಿಗೆ, ಆ ನೀತಿಗಳ ಅಕ್ರಮ ಫಲಾನುಭವಿಗಳು ಸಿಕ್ಕಾಪಟ್ಟೆ ಫಂಡ್ ಮಾಡದೇ ಇರುತ್ತಾರಾ?

ಚುನಾವಣೆ, ರಾಜಕೀಯ ವ್ಯವಹಹಾರಗಳ ಕುರಿತು ಅಧ್ಯಯನ ಮಾಡುವ ಅಶೋಷಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ (ಎ.ಡಿ.ಆರ್) ಸಂಸ್ಥೆ ಪಡೆದ ಅಧಿಕೃತ ಖಚಿತ ದಾಖಲೆಗಳ ಪ್ರಕಾರ, 2017-18ರಲ್ಲಿ ಈ ದೇಶದ ಪ್ರಮುಖ 7 ಪಕ್ಷಗಳ ಆದಾಯ (ಫಂಡ್) 1,397.90 ಕೋಟಿ ರೂಪಾಯಿ. ಇದರಲ್ಲಿ ಬಿಜೆಪಿಯ ಆದಾಯ 1,027.34 ಕೋಟಿ ರೂಪಾಯಿ. ಅಂದರೆ ಶೇ 73.5ರಷ್ಟು ಪಾರ್ಟಿ ಫಂಡ್ ಬಿಜೆಪಿಗೇ ಬಂದಿದೆ! ಇದು ಅಧಿಕೃತ ಮಾತ್ರ. ಅನಧಿಕೃತವಾಗಿ ಬಿಜೆಪಿಗೆ ಈ ಐದು ವರ್ಷಗಳಲ್ಲಿ ಸಾಕಷ್ಟು ‘ಪೇಮೆಂಟ್’ ಆಗಿಯೇ ಆಗಿದೆ.

ಬಿಜೆಪಿಯ ಆದಾಯ 1,027.34 ಕೋಟಿಯಲ್ಲಿ ದೇಣಿಗೆ ಮೂಲಕವೇ ಜಾಸ್ತಿ ಬಂದಿದ್ದು ಅದು 989 ಕೋಟಿ ರೂಪಾಯಿ! ಇದು ಕೇವಲ 2017-18ರ ಅಂಕಿಅಂಶ… ಕಪ್ಪುಹಣ ನಿರ್ನಾಮ ಮಾಡಿದೆವು ಎನ್ನುವ ಪ್ರಧಾನಿಯ ಪಾರ್ಟಿಗೆ ಬಂದ ಈ ದೇಣಿಗೆಗಳ ಮೂಲ ಬಿಳಿ ಹಣದ ವಹಿವಾಟು ಖಂಡಿತ ಇರಲಾರದು. ಕಾಂಗ್ರೆಸ್ ಏನ್ ಕಡಿಮೆಯಾ? ಅದಕ್ಕೂ 143 ಕೋಟಿ ರೂಪಾಯಿ ಅದೇ ವರ್ಷದಲ್ಲಿ ದೇಣಿಗೆ ರೂಪದಲ್ಲಿ ಬಂದು ಬಿದ್ದಿದೆ!

ಈ ಬೇನಾಮಿ ಹಣದ ಮೂಲ ಯಾವುದು?
2017ರಲ್ಲಿ ಬಿಜೆಪಿ ಸರ್ಕಾರದಿಂದ ಜಾರಿಗೆ ಬಂದ ಚುನಾವಣಾ ಬಾಂಡ್ ( ಈ ಕುರಿತಾಗಿ ಪರ-ವಿರೋಧ ವಾದ ಇದ್ದೇ ಇದೆ) ನಿಯಮ ಬಿಜೆಪಿಗೇ ಹೆಚ್ಚು ‘ಲಾಭ’ದಾಯಕವಾಗಿದೆ. ಬಾಂಡ್‍ಗಳ ಮೂಲಕ ಪಾರ್ಟಿ ಫಂಡ್ ನೀಡುವವರ ವಿವರವೇ ಗೊತ್ತಾಗುವುದಿಲ್ಲ. ಈ ‘ಅನಾಮಧೇಯ’ ಮೂಲಗಳು ಎಲ್ಲ ಪ್ರಮುಖ ಪಕ್ಷಗಳಿಗೂ ದೇಣಿಗೆ ನೀಡುತ್ತವೆ. ಆದರೆ, ದೇಶದ ಇತಿಹಾಸದಲ್ಲೇ ಈ ಸಲ ಭಾರಿ ಎನ್ನುವಂತಹ ಫಂಡ್ ಸಿಕ್ಕಿದ್ದು ಬಿಜೆಪಿಗೇ! ಒಂದು ಉದಾಹರಣೆ: 2017-18ರಲ್ಲಿ ಆರ್‍ಬಿಐ 215 ಕೋಟಿ ಮೊತ್ತದ ಚುನಾವಣಾ ಬಾಂಡ್‍ಗಳನ್ನು ಇಶ್ಯೂ ಮಾಡಿತು. ಅದರಲ್ಲಿ ಬಿಜೆಪಿ ಶೇರು 210 ಕೋಟಿ ರೂಪಾಯಿ, ಅಂದರೆ ಶೇ.98! ಈ ದೇಶದ ಉದ್ಯಮಪತಿಗಳಿಗೆ ತಲೆ ಕೆಟ್ಟಿದೆಯೇ? ಖಂಡಿತ ಇಲ್ಲ, ಮೋದಿ ಸರ್ಕಾರ ಅವರಿಗೆ ಬೇಕಾದುದನ್ನೆಲ್ಲ ನಮ್ಮ ತೆರಿಗೆ ಹಣದಲ್ಲಿ ಒದಗಿಸುತ್ತ ಬರುತ್ತಿದೆ. ಹೀಗಾಗಿ ಕೊಳ್ಳೆ ಹೊಡೆದ ನಮ್ಮ ತೆರಿಗೆ ಹಣದಲ್ಲಿ ಒಂದು ಪಾಲನ್ನು ಅವರು ಬಿಜೆಪಿಗೆ ನೀಡುತ್ತಿದ್ದಾರಷ್ಟೇ!

ಚುನಾವಣೆ ಹತ್ತಿರ ಬಂದಂತೆ ಈ ‘ಅನಾಮಧೇಯ’ರ ಫಂಡ್ ನೀಡುವಿಕೆ ಹೆಚ್ಚುತ್ತಲೇ ಹೋಗಿದೆ. ಮಾರ್ಚ್ ತಿಂಗಳ ಮೊದಲ ಎರಡು ವಾರಗಳಲ್ಲಿ 1,366 ಕೋಟಿ ಫಂಡ್ ಬಂದಿದೆ. ಇದೆಲ್ಲ ಆಲ್‍ಮೋಸ್ಟ್ ಬಿಜೆಪಿಯ ಬುಟ್ಟಿಗೆ ಬಿದ್ದಿದೆ!

ಇದಲ್ಲದೇ ಎಲ್ಲ ಪ್ರಮುಖ ಪಾರ್ಟಿಗಳಿಗೂ ಬಾಂಡ್ ಅಲ್ಲದೇ ಗುಪ್ತವಾಗಿ ನೂರಾರು ಕೋಟಿ ಬೇನಾಮಿ ದುಡ್ಡು ಹರಿದು ಬರುತ್ತಲೇ ಇದೆ. ಅದರಲ್ಲಿ ಬಿಜೆಪಿಗೆ ಶೇ. 90ಕ್ಕೂ ಹೆಚ್ಚು ಸಿಗುತ್ತಿದೆ! ಈ ಹಣದಲ್ಲೇ ಬಿಜೆಪಿಯ ಪ್ರಚಾರ ಇವತ್ತು ಜೋರಾಗಿದೆ. ಜಾಹಿರಾತು, ಪ್ರಾಯೋಜನೆ ಹೆಸರಲ್ಲಿ ಮತ್ತು ಗುಪ್ತವಾಗಿಯೂ ಅದು ದೇಶದ ಪ್ರಮುಖ ಮಾಧ್ಯಮಗಳಿಗೆ ಈ ಬೇನಾಮಿ ದುಡ್ಡಿನ ಒಂದು ಪಾಲನ್ನು ನೀಡುತ್ತಿದೆ.
ಸುಮ್ಮನೇ ಮೋದಿ ವೇವ್! ಅದನ್ನೆಲ್ಲ ಪುಶ್ ಮಾಡ್ತಾ ಇರೋದು ಕಳ್ಳ ಉದ್ಯಮಿಗಳ ಬೇನಾಮಿ ಹಣ! ಅದಕ್ಕೇ ಇದು ‘MONEY WAVE’ ಅಲ್ಲವೇ?

(ಆಧಾರ: thewire.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...