Homeಮುಖಪುಟನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

ನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

- Advertisement -
- Advertisement -

ಮೊನ್ನೆಯಷ್ಟೇ 4ನೇ ಹಂತದ ಮತದಾನ ಮುಗಿದಿದೆ. ಮೋದಿ ಜನಪ್ರಿಯತೆ ಬಾಲಾಕೋಟ್ ವಾಯುದಾಳಿ ಕಾರಣದಿಂದಾಗಿ ಮತ್ತೆ ಮೊದಲಿನಷ್ಟು ಅಲ್ಲದಿದ್ದರೂ ಉತ್ತಮಗೊಂಡಿದೆ ಎಂದು ಸಮೀಕ್ಷಾ ವರದಿಯೊಂದು 3ನೇ ಹಂತದ ಮತದಾನಕ್ಕೂ ಮುಂಚೆ ಹೇಳಿತ್ತು. ಈ ಬಾಲಾಕೋಟ್ ವಾಯುದಾಳಿಯ ವಿಚಾರವೆಲ್ಲ ಹಳ್ಳಿಹಳ್ಳಿಗೆಲ್ಲ ಮುಟ್ಟಿತೆ? ಹಾಗಾಗಿದ್ದರೆ, ಈ ವಿಚಾರ ಪ್ರಸ್ತಾಪಿಸುತ್ತಲೇ ಇರುವ ಮೋದಿ ಸಹಿತ ಬಿಜೆಪಿ ನಾಯಕರ ಮಾತುಗಳನ್ನು ಪ್ರಚಾರ ಮಾಡಲು ಮಾತ್ರ ಒಂದು ದೊಡ್ಡ ಮಟ್ಟದ ವ್ಯವಸ್ಥಿತ ಯೋಜನೆ ನಡೆದಿದೆಯಲ್ಲವೇ? ಭಾರಿ ಮೊತ್ತವನ್ನು ವ್ಯಯಿಸದೇ ಅದು ಸಾಧ್ಯವೇ?

ಇಲ್ಲಿ ಮೋದಿ ವೇವ್ ಅಂದುಬಿಟ್ಟರೆ ಮುಗಿಯಲ್ಲ ಮಾಧ್ಯಮಗಳೇ, ಅದನ್ನು ಪುಶ್ ಮಾಡ್ತಾ ಇರೋದು ಮನಿ ವೇವ್… ಅಂದರೆ ಬಿಜೆಪಿ ನೀರಿನಂತೆ ಖರ್ಚು ಮಾಡುತ್ತಿರುವ ದುಡ್ಡು…ಈ ಸಲದ ಚುನಾವಣೆಯಲ್ಲಿ ಬಿಜೆಪಿಯ ವಿಪರೀತ ಪಾರ್ಟಿ ಫಂಡ್ ಬಗ್ಗೆ ಚರ್ಚೆಯೇ ಆಗಿಲ್ಲ… ಈ ಕುರಿತಾಗಿ ಒಂದು ನೋಟ ಇಲ್ಲಿದೆ….

ಇವತ್ತು ದೇಶದ ಎಲ್ಲ ಬಿಜೆಪಿಯೇತರ ಪಕ್ಷಗಳು ಚುನಾವಣೆಗಾಗಿ ವೆಚ್ಚ ಮಾಡುತ್ತಿರುವ ಒಟ್ಟು ಮೊತ್ತಕ್ಕಿಂತಲೂ ಹಲವು ಪಟ್ಟು ಮೊತ್ತವನ್ನು ಬಿಜೆಪಿ ಖರ್ಚು ಮಾಡುತ್ತಿದೆ. ಜೊತೆಗೆ ವಿವಿಧ ರೂಪದಲ್ಲಿ ‘ಅಗೋಚರ’ ಮೂಲಗಳು ಅದಕ್ಕೆ ಹಣಕಾಸಿನ ನೆರವು ಹರಿಸುತ್ತಲೇ ಇವೆ.
ಫಂಡ್ ರೈಸಿಂಗ್: ಬಿಜೆಪಿದು ಶೇ.75!

ಅಧಿಕೃತ ಅಂಕಿಅಂಶಗಳ ಪ್ರಕಾರವೇ, ದೇಶದ ಎಲ್ಲ ಪಕ್ಷಗಳಿಗೆ ದೊರೆತ ಪಾರ್ಟಿ ಫಂಡಿಗಿಂತಲೂ ಹಲವು ಪಟ್ಟು ಬಿಜೆಪಿಗೆ ಲಭಿಸಿದೆ. ಆಶ್ಚರ್ಯವೇನು ಬಂತು ಅಲ್ಲವೇ… ಕಾರ್ಪೋರೇಟ್ ನೀತಿಗಳನ್ನೇ ತನ್ನ ಉಸಿರಾಗಿಸಿಕೊಂಡ ಬಿಜೆಪಿಗೆ, ಆ ನೀತಿಗಳ ಅಕ್ರಮ ಫಲಾನುಭವಿಗಳು ಸಿಕ್ಕಾಪಟ್ಟೆ ಫಂಡ್ ಮಾಡದೇ ಇರುತ್ತಾರಾ?

ಚುನಾವಣೆ, ರಾಜಕೀಯ ವ್ಯವಹಹಾರಗಳ ಕುರಿತು ಅಧ್ಯಯನ ಮಾಡುವ ಅಶೋಷಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ (ಎ.ಡಿ.ಆರ್) ಸಂಸ್ಥೆ ಪಡೆದ ಅಧಿಕೃತ ಖಚಿತ ದಾಖಲೆಗಳ ಪ್ರಕಾರ, 2017-18ರಲ್ಲಿ ಈ ದೇಶದ ಪ್ರಮುಖ 7 ಪಕ್ಷಗಳ ಆದಾಯ (ಫಂಡ್) 1,397.90 ಕೋಟಿ ರೂಪಾಯಿ. ಇದರಲ್ಲಿ ಬಿಜೆಪಿಯ ಆದಾಯ 1,027.34 ಕೋಟಿ ರೂಪಾಯಿ. ಅಂದರೆ ಶೇ 73.5ರಷ್ಟು ಪಾರ್ಟಿ ಫಂಡ್ ಬಿಜೆಪಿಗೇ ಬಂದಿದೆ! ಇದು ಅಧಿಕೃತ ಮಾತ್ರ. ಅನಧಿಕೃತವಾಗಿ ಬಿಜೆಪಿಗೆ ಈ ಐದು ವರ್ಷಗಳಲ್ಲಿ ಸಾಕಷ್ಟು ‘ಪೇಮೆಂಟ್’ ಆಗಿಯೇ ಆಗಿದೆ.

ಬಿಜೆಪಿಯ ಆದಾಯ 1,027.34 ಕೋಟಿಯಲ್ಲಿ ದೇಣಿಗೆ ಮೂಲಕವೇ ಜಾಸ್ತಿ ಬಂದಿದ್ದು ಅದು 989 ಕೋಟಿ ರೂಪಾಯಿ! ಇದು ಕೇವಲ 2017-18ರ ಅಂಕಿಅಂಶ… ಕಪ್ಪುಹಣ ನಿರ್ನಾಮ ಮಾಡಿದೆವು ಎನ್ನುವ ಪ್ರಧಾನಿಯ ಪಾರ್ಟಿಗೆ ಬಂದ ಈ ದೇಣಿಗೆಗಳ ಮೂಲ ಬಿಳಿ ಹಣದ ವಹಿವಾಟು ಖಂಡಿತ ಇರಲಾರದು. ಕಾಂಗ್ರೆಸ್ ಏನ್ ಕಡಿಮೆಯಾ? ಅದಕ್ಕೂ 143 ಕೋಟಿ ರೂಪಾಯಿ ಅದೇ ವರ್ಷದಲ್ಲಿ ದೇಣಿಗೆ ರೂಪದಲ್ಲಿ ಬಂದು ಬಿದ್ದಿದೆ!

ಈ ಬೇನಾಮಿ ಹಣದ ಮೂಲ ಯಾವುದು?
2017ರಲ್ಲಿ ಬಿಜೆಪಿ ಸರ್ಕಾರದಿಂದ ಜಾರಿಗೆ ಬಂದ ಚುನಾವಣಾ ಬಾಂಡ್ ( ಈ ಕುರಿತಾಗಿ ಪರ-ವಿರೋಧ ವಾದ ಇದ್ದೇ ಇದೆ) ನಿಯಮ ಬಿಜೆಪಿಗೇ ಹೆಚ್ಚು ‘ಲಾಭ’ದಾಯಕವಾಗಿದೆ. ಬಾಂಡ್‍ಗಳ ಮೂಲಕ ಪಾರ್ಟಿ ಫಂಡ್ ನೀಡುವವರ ವಿವರವೇ ಗೊತ್ತಾಗುವುದಿಲ್ಲ. ಈ ‘ಅನಾಮಧೇಯ’ ಮೂಲಗಳು ಎಲ್ಲ ಪ್ರಮುಖ ಪಕ್ಷಗಳಿಗೂ ದೇಣಿಗೆ ನೀಡುತ್ತವೆ. ಆದರೆ, ದೇಶದ ಇತಿಹಾಸದಲ್ಲೇ ಈ ಸಲ ಭಾರಿ ಎನ್ನುವಂತಹ ಫಂಡ್ ಸಿಕ್ಕಿದ್ದು ಬಿಜೆಪಿಗೇ! ಒಂದು ಉದಾಹರಣೆ: 2017-18ರಲ್ಲಿ ಆರ್‍ಬಿಐ 215 ಕೋಟಿ ಮೊತ್ತದ ಚುನಾವಣಾ ಬಾಂಡ್‍ಗಳನ್ನು ಇಶ್ಯೂ ಮಾಡಿತು. ಅದರಲ್ಲಿ ಬಿಜೆಪಿ ಶೇರು 210 ಕೋಟಿ ರೂಪಾಯಿ, ಅಂದರೆ ಶೇ.98! ಈ ದೇಶದ ಉದ್ಯಮಪತಿಗಳಿಗೆ ತಲೆ ಕೆಟ್ಟಿದೆಯೇ? ಖಂಡಿತ ಇಲ್ಲ, ಮೋದಿ ಸರ್ಕಾರ ಅವರಿಗೆ ಬೇಕಾದುದನ್ನೆಲ್ಲ ನಮ್ಮ ತೆರಿಗೆ ಹಣದಲ್ಲಿ ಒದಗಿಸುತ್ತ ಬರುತ್ತಿದೆ. ಹೀಗಾಗಿ ಕೊಳ್ಳೆ ಹೊಡೆದ ನಮ್ಮ ತೆರಿಗೆ ಹಣದಲ್ಲಿ ಒಂದು ಪಾಲನ್ನು ಅವರು ಬಿಜೆಪಿಗೆ ನೀಡುತ್ತಿದ್ದಾರಷ್ಟೇ!

ಚುನಾವಣೆ ಹತ್ತಿರ ಬಂದಂತೆ ಈ ‘ಅನಾಮಧೇಯ’ರ ಫಂಡ್ ನೀಡುವಿಕೆ ಹೆಚ್ಚುತ್ತಲೇ ಹೋಗಿದೆ. ಮಾರ್ಚ್ ತಿಂಗಳ ಮೊದಲ ಎರಡು ವಾರಗಳಲ್ಲಿ 1,366 ಕೋಟಿ ಫಂಡ್ ಬಂದಿದೆ. ಇದೆಲ್ಲ ಆಲ್‍ಮೋಸ್ಟ್ ಬಿಜೆಪಿಯ ಬುಟ್ಟಿಗೆ ಬಿದ್ದಿದೆ!

ಇದಲ್ಲದೇ ಎಲ್ಲ ಪ್ರಮುಖ ಪಾರ್ಟಿಗಳಿಗೂ ಬಾಂಡ್ ಅಲ್ಲದೇ ಗುಪ್ತವಾಗಿ ನೂರಾರು ಕೋಟಿ ಬೇನಾಮಿ ದುಡ್ಡು ಹರಿದು ಬರುತ್ತಲೇ ಇದೆ. ಅದರಲ್ಲಿ ಬಿಜೆಪಿಗೆ ಶೇ. 90ಕ್ಕೂ ಹೆಚ್ಚು ಸಿಗುತ್ತಿದೆ! ಈ ಹಣದಲ್ಲೇ ಬಿಜೆಪಿಯ ಪ್ರಚಾರ ಇವತ್ತು ಜೋರಾಗಿದೆ. ಜಾಹಿರಾತು, ಪ್ರಾಯೋಜನೆ ಹೆಸರಲ್ಲಿ ಮತ್ತು ಗುಪ್ತವಾಗಿಯೂ ಅದು ದೇಶದ ಪ್ರಮುಖ ಮಾಧ್ಯಮಗಳಿಗೆ ಈ ಬೇನಾಮಿ ದುಡ್ಡಿನ ಒಂದು ಪಾಲನ್ನು ನೀಡುತ್ತಿದೆ.
ಸುಮ್ಮನೇ ಮೋದಿ ವೇವ್! ಅದನ್ನೆಲ್ಲ ಪುಶ್ ಮಾಡ್ತಾ ಇರೋದು ಕಳ್ಳ ಉದ್ಯಮಿಗಳ ಬೇನಾಮಿ ಹಣ! ಅದಕ್ಕೇ ಇದು ‘MONEY WAVE’ ಅಲ್ಲವೇ?

(ಆಧಾರ: thewire.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...