Homeಮುಖಪುಟನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

ನಿಜವಾಗಿಯೂ ಇರುವುದು ಮೋದಿ ಅಲೆಯಾ? ಅಥವಾ MONEY ಅಲೆಯಾ?

- Advertisement -
- Advertisement -

ಮೊನ್ನೆಯಷ್ಟೇ 4ನೇ ಹಂತದ ಮತದಾನ ಮುಗಿದಿದೆ. ಮೋದಿ ಜನಪ್ರಿಯತೆ ಬಾಲಾಕೋಟ್ ವಾಯುದಾಳಿ ಕಾರಣದಿಂದಾಗಿ ಮತ್ತೆ ಮೊದಲಿನಷ್ಟು ಅಲ್ಲದಿದ್ದರೂ ಉತ್ತಮಗೊಂಡಿದೆ ಎಂದು ಸಮೀಕ್ಷಾ ವರದಿಯೊಂದು 3ನೇ ಹಂತದ ಮತದಾನಕ್ಕೂ ಮುಂಚೆ ಹೇಳಿತ್ತು. ಈ ಬಾಲಾಕೋಟ್ ವಾಯುದಾಳಿಯ ವಿಚಾರವೆಲ್ಲ ಹಳ್ಳಿಹಳ್ಳಿಗೆಲ್ಲ ಮುಟ್ಟಿತೆ? ಹಾಗಾಗಿದ್ದರೆ, ಈ ವಿಚಾರ ಪ್ರಸ್ತಾಪಿಸುತ್ತಲೇ ಇರುವ ಮೋದಿ ಸಹಿತ ಬಿಜೆಪಿ ನಾಯಕರ ಮಾತುಗಳನ್ನು ಪ್ರಚಾರ ಮಾಡಲು ಮಾತ್ರ ಒಂದು ದೊಡ್ಡ ಮಟ್ಟದ ವ್ಯವಸ್ಥಿತ ಯೋಜನೆ ನಡೆದಿದೆಯಲ್ಲವೇ? ಭಾರಿ ಮೊತ್ತವನ್ನು ವ್ಯಯಿಸದೇ ಅದು ಸಾಧ್ಯವೇ?

ಇಲ್ಲಿ ಮೋದಿ ವೇವ್ ಅಂದುಬಿಟ್ಟರೆ ಮುಗಿಯಲ್ಲ ಮಾಧ್ಯಮಗಳೇ, ಅದನ್ನು ಪುಶ್ ಮಾಡ್ತಾ ಇರೋದು ಮನಿ ವೇವ್… ಅಂದರೆ ಬಿಜೆಪಿ ನೀರಿನಂತೆ ಖರ್ಚು ಮಾಡುತ್ತಿರುವ ದುಡ್ಡು…ಈ ಸಲದ ಚುನಾವಣೆಯಲ್ಲಿ ಬಿಜೆಪಿಯ ವಿಪರೀತ ಪಾರ್ಟಿ ಫಂಡ್ ಬಗ್ಗೆ ಚರ್ಚೆಯೇ ಆಗಿಲ್ಲ… ಈ ಕುರಿತಾಗಿ ಒಂದು ನೋಟ ಇಲ್ಲಿದೆ….

ಇವತ್ತು ದೇಶದ ಎಲ್ಲ ಬಿಜೆಪಿಯೇತರ ಪಕ್ಷಗಳು ಚುನಾವಣೆಗಾಗಿ ವೆಚ್ಚ ಮಾಡುತ್ತಿರುವ ಒಟ್ಟು ಮೊತ್ತಕ್ಕಿಂತಲೂ ಹಲವು ಪಟ್ಟು ಮೊತ್ತವನ್ನು ಬಿಜೆಪಿ ಖರ್ಚು ಮಾಡುತ್ತಿದೆ. ಜೊತೆಗೆ ವಿವಿಧ ರೂಪದಲ್ಲಿ ‘ಅಗೋಚರ’ ಮೂಲಗಳು ಅದಕ್ಕೆ ಹಣಕಾಸಿನ ನೆರವು ಹರಿಸುತ್ತಲೇ ಇವೆ.
ಫಂಡ್ ರೈಸಿಂಗ್: ಬಿಜೆಪಿದು ಶೇ.75!

ಅಧಿಕೃತ ಅಂಕಿಅಂಶಗಳ ಪ್ರಕಾರವೇ, ದೇಶದ ಎಲ್ಲ ಪಕ್ಷಗಳಿಗೆ ದೊರೆತ ಪಾರ್ಟಿ ಫಂಡಿಗಿಂತಲೂ ಹಲವು ಪಟ್ಟು ಬಿಜೆಪಿಗೆ ಲಭಿಸಿದೆ. ಆಶ್ಚರ್ಯವೇನು ಬಂತು ಅಲ್ಲವೇ… ಕಾರ್ಪೋರೇಟ್ ನೀತಿಗಳನ್ನೇ ತನ್ನ ಉಸಿರಾಗಿಸಿಕೊಂಡ ಬಿಜೆಪಿಗೆ, ಆ ನೀತಿಗಳ ಅಕ್ರಮ ಫಲಾನುಭವಿಗಳು ಸಿಕ್ಕಾಪಟ್ಟೆ ಫಂಡ್ ಮಾಡದೇ ಇರುತ್ತಾರಾ?

ಚುನಾವಣೆ, ರಾಜಕೀಯ ವ್ಯವಹಹಾರಗಳ ಕುರಿತು ಅಧ್ಯಯನ ಮಾಡುವ ಅಶೋಷಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾಮ್ರ್ಸ (ಎ.ಡಿ.ಆರ್) ಸಂಸ್ಥೆ ಪಡೆದ ಅಧಿಕೃತ ಖಚಿತ ದಾಖಲೆಗಳ ಪ್ರಕಾರ, 2017-18ರಲ್ಲಿ ಈ ದೇಶದ ಪ್ರಮುಖ 7 ಪಕ್ಷಗಳ ಆದಾಯ (ಫಂಡ್) 1,397.90 ಕೋಟಿ ರೂಪಾಯಿ. ಇದರಲ್ಲಿ ಬಿಜೆಪಿಯ ಆದಾಯ 1,027.34 ಕೋಟಿ ರೂಪಾಯಿ. ಅಂದರೆ ಶೇ 73.5ರಷ್ಟು ಪಾರ್ಟಿ ಫಂಡ್ ಬಿಜೆಪಿಗೇ ಬಂದಿದೆ! ಇದು ಅಧಿಕೃತ ಮಾತ್ರ. ಅನಧಿಕೃತವಾಗಿ ಬಿಜೆಪಿಗೆ ಈ ಐದು ವರ್ಷಗಳಲ್ಲಿ ಸಾಕಷ್ಟು ‘ಪೇಮೆಂಟ್’ ಆಗಿಯೇ ಆಗಿದೆ.

ಬಿಜೆಪಿಯ ಆದಾಯ 1,027.34 ಕೋಟಿಯಲ್ಲಿ ದೇಣಿಗೆ ಮೂಲಕವೇ ಜಾಸ್ತಿ ಬಂದಿದ್ದು ಅದು 989 ಕೋಟಿ ರೂಪಾಯಿ! ಇದು ಕೇವಲ 2017-18ರ ಅಂಕಿಅಂಶ… ಕಪ್ಪುಹಣ ನಿರ್ನಾಮ ಮಾಡಿದೆವು ಎನ್ನುವ ಪ್ರಧಾನಿಯ ಪಾರ್ಟಿಗೆ ಬಂದ ಈ ದೇಣಿಗೆಗಳ ಮೂಲ ಬಿಳಿ ಹಣದ ವಹಿವಾಟು ಖಂಡಿತ ಇರಲಾರದು. ಕಾಂಗ್ರೆಸ್ ಏನ್ ಕಡಿಮೆಯಾ? ಅದಕ್ಕೂ 143 ಕೋಟಿ ರೂಪಾಯಿ ಅದೇ ವರ್ಷದಲ್ಲಿ ದೇಣಿಗೆ ರೂಪದಲ್ಲಿ ಬಂದು ಬಿದ್ದಿದೆ!

ಈ ಬೇನಾಮಿ ಹಣದ ಮೂಲ ಯಾವುದು?
2017ರಲ್ಲಿ ಬಿಜೆಪಿ ಸರ್ಕಾರದಿಂದ ಜಾರಿಗೆ ಬಂದ ಚುನಾವಣಾ ಬಾಂಡ್ ( ಈ ಕುರಿತಾಗಿ ಪರ-ವಿರೋಧ ವಾದ ಇದ್ದೇ ಇದೆ) ನಿಯಮ ಬಿಜೆಪಿಗೇ ಹೆಚ್ಚು ‘ಲಾಭ’ದಾಯಕವಾಗಿದೆ. ಬಾಂಡ್‍ಗಳ ಮೂಲಕ ಪಾರ್ಟಿ ಫಂಡ್ ನೀಡುವವರ ವಿವರವೇ ಗೊತ್ತಾಗುವುದಿಲ್ಲ. ಈ ‘ಅನಾಮಧೇಯ’ ಮೂಲಗಳು ಎಲ್ಲ ಪ್ರಮುಖ ಪಕ್ಷಗಳಿಗೂ ದೇಣಿಗೆ ನೀಡುತ್ತವೆ. ಆದರೆ, ದೇಶದ ಇತಿಹಾಸದಲ್ಲೇ ಈ ಸಲ ಭಾರಿ ಎನ್ನುವಂತಹ ಫಂಡ್ ಸಿಕ್ಕಿದ್ದು ಬಿಜೆಪಿಗೇ! ಒಂದು ಉದಾಹರಣೆ: 2017-18ರಲ್ಲಿ ಆರ್‍ಬಿಐ 215 ಕೋಟಿ ಮೊತ್ತದ ಚುನಾವಣಾ ಬಾಂಡ್‍ಗಳನ್ನು ಇಶ್ಯೂ ಮಾಡಿತು. ಅದರಲ್ಲಿ ಬಿಜೆಪಿ ಶೇರು 210 ಕೋಟಿ ರೂಪಾಯಿ, ಅಂದರೆ ಶೇ.98! ಈ ದೇಶದ ಉದ್ಯಮಪತಿಗಳಿಗೆ ತಲೆ ಕೆಟ್ಟಿದೆಯೇ? ಖಂಡಿತ ಇಲ್ಲ, ಮೋದಿ ಸರ್ಕಾರ ಅವರಿಗೆ ಬೇಕಾದುದನ್ನೆಲ್ಲ ನಮ್ಮ ತೆರಿಗೆ ಹಣದಲ್ಲಿ ಒದಗಿಸುತ್ತ ಬರುತ್ತಿದೆ. ಹೀಗಾಗಿ ಕೊಳ್ಳೆ ಹೊಡೆದ ನಮ್ಮ ತೆರಿಗೆ ಹಣದಲ್ಲಿ ಒಂದು ಪಾಲನ್ನು ಅವರು ಬಿಜೆಪಿಗೆ ನೀಡುತ್ತಿದ್ದಾರಷ್ಟೇ!

ಚುನಾವಣೆ ಹತ್ತಿರ ಬಂದಂತೆ ಈ ‘ಅನಾಮಧೇಯ’ರ ಫಂಡ್ ನೀಡುವಿಕೆ ಹೆಚ್ಚುತ್ತಲೇ ಹೋಗಿದೆ. ಮಾರ್ಚ್ ತಿಂಗಳ ಮೊದಲ ಎರಡು ವಾರಗಳಲ್ಲಿ 1,366 ಕೋಟಿ ಫಂಡ್ ಬಂದಿದೆ. ಇದೆಲ್ಲ ಆಲ್‍ಮೋಸ್ಟ್ ಬಿಜೆಪಿಯ ಬುಟ್ಟಿಗೆ ಬಿದ್ದಿದೆ!

ಇದಲ್ಲದೇ ಎಲ್ಲ ಪ್ರಮುಖ ಪಾರ್ಟಿಗಳಿಗೂ ಬಾಂಡ್ ಅಲ್ಲದೇ ಗುಪ್ತವಾಗಿ ನೂರಾರು ಕೋಟಿ ಬೇನಾಮಿ ದುಡ್ಡು ಹರಿದು ಬರುತ್ತಲೇ ಇದೆ. ಅದರಲ್ಲಿ ಬಿಜೆಪಿಗೆ ಶೇ. 90ಕ್ಕೂ ಹೆಚ್ಚು ಸಿಗುತ್ತಿದೆ! ಈ ಹಣದಲ್ಲೇ ಬಿಜೆಪಿಯ ಪ್ರಚಾರ ಇವತ್ತು ಜೋರಾಗಿದೆ. ಜಾಹಿರಾತು, ಪ್ರಾಯೋಜನೆ ಹೆಸರಲ್ಲಿ ಮತ್ತು ಗುಪ್ತವಾಗಿಯೂ ಅದು ದೇಶದ ಪ್ರಮುಖ ಮಾಧ್ಯಮಗಳಿಗೆ ಈ ಬೇನಾಮಿ ದುಡ್ಡಿನ ಒಂದು ಪಾಲನ್ನು ನೀಡುತ್ತಿದೆ.
ಸುಮ್ಮನೇ ಮೋದಿ ವೇವ್! ಅದನ್ನೆಲ್ಲ ಪುಶ್ ಮಾಡ್ತಾ ಇರೋದು ಕಳ್ಳ ಉದ್ಯಮಿಗಳ ಬೇನಾಮಿ ಹಣ! ಅದಕ್ಕೇ ಇದು ‘MONEY WAVE’ ಅಲ್ಲವೇ?

(ಆಧಾರ: thewire.in )

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...