Homeಮುಖಪುಟಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣಾ ಪ್ರಚಾರ ಭಾಷಣದಲ್ಲಿ ಸಂಸದ ತೇಜಸ್ವಿ ಸೂರ್ಯ, ಎಐಎಂಐಎಂ ನಾಯಕ, ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿಯನ್ನು ಪಾಕಿಸ್ತಾನದ ರಾಷ್ಟ್ರಪಿತ ಮುಹಮ್ಮದ್ ಅಲಿ ಜಿನ್ನಾರಿಗೆ ಹೋಲಿಸಿ ವಿವಾದಾವೆಬ್ಬಿಸಿದ್ದಾರೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಒವೈಸಿ ವಿರುದ್ಧ ಮಾತನಾಡಿದ ಅವರು, “ಜಿನ್ನಾ ಅವರ ಅವತಾರವಾದ ಓವೈಸಿಗೆ ನೀಡುವ ಪ್ರತಿ ಮತವು ಭಾರತದ ವಿರುದ್ಧವಾಗಿದೆ” ಎಂದು ಹೇಳಿದ್ದಾರೆ.

ಒವೈಸಿ ಮತ್ತು ಅವರ ಸಹೋದರ ಅಕ್ಬರುದ್ದೀನ್ ಒವೈಸಿ ಕೋಮುವಾದ ಮತ್ತು ವಿಭಜನೆಯ ರಾಜಕೀಯ ಮಾಡುತ್ತಿದ್ದಾರೆ. ಅವರು ಹೈದರಾಬಾದ್ ಅಭಿವೃದ್ಧಿ ಬಿಟ್ಟು ರೋಹಿಂಗ್ಯಾ ನಿರಾಶ್ರಿತರ ಅಭಿವೃದ್ದಿ ಮಾಡುತ್ತಿದ್ದಾರೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: ಲವ್ ಜಿಹಾದ್‌ಗೆ ಕಠಿಣ ಶಿಕ್ಷೆ ಎಂದ ಮಧ್ಯಪ್ರದೇಶ: ರಾಜ್ಯ ಬಿಜೆಪಿ V/S ಕೇಂದ್ರ ಬಿಜೆಪಿ- ದ್ವಂದ್ವ!

“ನೀವು ಇಲ್ಲಿ ಒವೈಸಿಗೆ ಮತ ನೀಡಿದರೆ, ಅವರು ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಸ್ಲಿಂ ಬಹುಸಂಖ್ಯಾತ ಪ್ರದೇಶಗಳಲ್ಲಿ ಪ್ರಬಲರಾಗುತ್ತಾರೆ. ಒವೈಸಿ ಜಿನ್ನಾರ ಹೊಸ ಅವತಾರವಾಗಿದ್ದಾರೆ. ನಾವು ಅವರನ್ನು ಸೋಲಿಸಬೇಕು. ಬಿಜೆಪಿಗೆ ನೀವು ಹಾಕುವ ಪ್ರತಿಯೊಂದು ಮತವು ಭಾರತ ಮತ್ತು ಹಿಂದುತ್ವಕ್ಕೆ ನೀಡುವ ಮತವಾಗಿದೆ. ಅದು ನಮ್ಮ ದೇಶವನ್ನು ಬಲಪಡಿಸುತ್ತದೆ. ಒವೈಸಿಗೆ ನೀಡುವ ಪ್ರತಿಯೊಂದು ಮತವು, ಭಾರತದ ವಿರುದ್ಧ ನೀಡುವ ಮತವಾಗಿದೆ” ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

“ಆಸಾದುದ್ದೀನ್ ಒವೈಸಿ, ಜಿನ್ನಾ ಮಾತನಾಡುವ ತೀವ್ರ ಇಸ್ಲಾಮಿಕ್, ಪ್ರತ್ಯೇಕತಾವಾದಿ ಮತ್ತು ಉಗ್ರಗಾಮಿ ರಾಜಕಾರಣದ ಭಾಷೆಯನ್ನು ಮಾತನಾಡುತ್ತಾರೆ. ಒವೈಸಿ ಸಹೋದರರ ವಿಭಜಕ ರಾಜಕಾರಣದ ವಿರುದ್ಧ ಪ್ರತಿಯೊಬ್ಬ ಭಾರತೀಯನು ನಿಲ್ಲಬೇಕು. ಈ ಇಸ್ಲಾಮೀಕರಣವನ್ನು ನಾವು ಅನುಮತಿಸುವುದಿಲ್ಲ, ಇದು ನಮ್ಮ ನಿರ್ಧಾರ” ಎಂದು ಹೇಳಿದ್ದಾರೆ.

ಹೈದರಾಬಾದ್ ಪಾಲಿಕೆ ಚುನಾವಣೆ ಡಿಸೆಂಬರ್ 1 ರಂದು ನಡೆಯಲಿದೆ. ನಿನ್ನೆ ಹೈದರಾಬಾದ್ ಹೆಸರನ್ನು ಭಾಗ್ಯನಗರ ಎಂದು ಬದಲಿಸಬೇಕು ಎಂದಿದ್ದ ತೇಜಸ್ವಿ ಸೂರ್ಯ ಅವರನ್ನು ಟ್ವಿಟ್ಟರ್‌‌ನಲ್ಲಿ ಹೈದರಾಬಾದಿಗರು ತೀವ್ರವಾಗಿ ಟ್ರೋಲ್ ಮಾಡಿದ್ದರು.

ಇದನ್ನೂ ಓದಿ: ಹೈದರಾಬಾದಿಗರಿಂದ ಟ್ರೋಲ್‌ಗೊಳಗಾಗುತ್ತಿರುವ ಸಂಸದ ತೇಜಸ್ವಿ ಸೂರ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...