Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...