Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...