Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...