Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...