Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...