Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...