Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನಿಸಿದ್ದೇವೆ : ಸಿಎಂ ಸಿದ್ದರಾಮಯ್ಯ

ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು (ಮಾ.28) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು...

ಇರಾನ್‌ನ ಸರ್ವೋಚ್ಚ ನಾಯಕನನ್ನು ‘ನಿರ್ಮೂಲನೆ’ ಮಾಡಲಾಗಿದೆ; ನಮ್ಮ ಮುಂದಿನ ಗುರಿ ಕ್ಯೂಬಾ: ಡೊನಾಲ್ಡ್‌ ಟ್ರಂಪ್

ಪಶ್ಚಿಮ ಏಷ್ಯಾದಾದ್ಯಂತ ಯುದ್ಧ ಮುಂದುವರೆದಿದ್ದರೂ ಮತ್ತು ರಾಜತಾಂತ್ರಿಕ ಪ್ರಯತ್ನಗಳು ಅನಿಶ್ಚಿತವಾಗಿದ್ದರೂ ಸಹ, ಇರಾನ್‌ನ ಉನ್ನತ ನಾಯಕರು ಮತ್ತು ಅದರ ಹೆಚ್ಚಿನ ಮಿಲಿಟರಿ ಸಾಮರ್ಥ್ಯ ನಾಶವಾಗಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮಿಯಾಮಿಯಲ್ಲಿ ಸೌದಿ...

ತೆಲಂಗಾಣ| ನಿಗದಿತ ವೇತನ-ಉದ್ಯೋಗ ಭದ್ರತೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಹೈದರಾಬಾದ್‌ನ ಧರಣಾ ಚೌಕ್‌ನಲ್ಲಿ ಇಂದು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ಅವರನ್ನು ಬಂಧಿಸಲಾಯಿತು. ಸರ್ಕಾರವು 18,000 ರೂ.ಗಳ ಮಾಸಿಕ ನಿಗದಿತ ವೇತನ ಮತ್ತು ಉದ್ಯೋಗ ಭದ್ರತೆಯ ಚುನಾವಣಾ...

2001-2006 ರ ಚುನಾವಣೆ ಗೆಲ್ಲಲು ವಿ.ಡಿ. ಸತೀಸನ್ ಆರ್‌ಎಸ್‌ಎಸ್ ಬೆಂಬಲ ಕೋರಿದ್ದರು: ಸಂಘದ ನಾಯಕನಿಂದ ಆರೋಪ

ಕೇರಳದ ಯುಡಿಎಫ್ ಅಧ್ಯಕ್ಷ ವಿ ಡಿ ಸತೀಸನ್ 2001 ಮತ್ತು 2006 ರಲ್ಲಿ ವಿಧಾನಸಭಾ ಚುನಾವಣೆಗಳಲ್ಲಿ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘದ ನಾಯಕರ ಬೆಂಬಲ ಕೋರಿದ್ದರು ಎಂದು ಸಂಘ ಪರಿವಾರದ ಹಿರಿಯ ನಾಯಕ...

ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಕನ್ನಡ ಕಲಿತು ಬರಬೇಕು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮಾ.28: ಇತರೇ ರಾಜ್ಯಗಳಿಂದ ಕರ್ನಾಟಕದ ಚರ್ಚ್‌ಗಳಲ್ಲಿ ಧರ್ಮಾಧ್ಯಕ್ಷರಾಗಲು ಬರುವವರು ಕಡ್ಡಾಯವಾಗಿ ಕನಿಷ್ಠ ಆರು ತಿಂಗಳು ವ್ಯಾವಹಾರಿಕ ಕನ್ನಡವನ್ನು ಕಲಿತು ಬರಬೇಕು. ಇಲ್ಲದಿದ್ದರೆ ಇಲ್ಲಿನ ಧರ್ಮಾಧ್ಯಕ್ಷರ ಸ್ಥಾನಕ್ಕೆ ಗೌರವ ಉಳಿಯುವುದಿಲ್ಲ ಎಂದು ಸಾಹಿತಿ...

‘ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಒತ್ತಡ ಎದುರಿಸಬಹುದು..’; ಸೇನಾ ಮುಖ್ಯಸ್ಥರಿಂದ ಸರ್ಕಾರಕ್ಕೆ ಎಚ್ಚರಿಕೆ

ಹೆಚ್ಚುತ್ತಿರುವ ಮಾನವಶಕ್ತಿ ಕೊರತೆಯಿಂದಾಗಿ ಇಸ್ರೇಲ್ ರಕ್ಷಣಾ ಪಡೆಗಳು ಕಾರ್ಯಾಚರಣೆಯ ಗಂಭೀರ ಒತ್ತಡವನ್ನು ಎದುರಿಸಬಹುದು ಎಂದು ಸೇನಾ ಮುಖ್ಯಸ್ಥ ಇಯಾಲ್ ಜಮೀರ್ ಭದ್ರತಾ ಕ್ಯಾಬಿನೆಟ್ ಸಭೆಯಲ್ಲಿ ಸರ್ಕಾರಕ್ಕೆ ಎಚ್ಚರಿಸಿದ್ದಾರೆ ಎಂದು ಇಸ್ರೇಲ್ ಮಾಧ್ಯಮ ವರದಿಗಳನ್ನು...

ಯೆಮೆನ್‌ನಿಂದ ಹಾರಿದ ಮೊದಲ ಕ್ಷಿಪಣಿ ಎದುರಿಸಿದ ಇಸ್ರೇಲ್; ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಹೌತಿ ಪ್ರವೇಶ?

ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ, ಮಾರ್ಚ್ 28 ರಂದು ಯೆಮೆನ್‌ನಿಂದ ಹಾರಿಸಲಾದ ಕ್ಷಿಪಣಿಯೊಂದನ್ನು ಇಸ್ರೇಲ್ ಮೊದಲಬಾರಿಗೆ ಎದುರಿಸಿದೆ. ಕಳೆದ ತಿಂಗಳು ಮಧ್ಯಪ್ರಾಚ್ಯದಲ್ಲಿ ಯುದ್ಧ ಭುಗಿಲೆದ್ದ ನಂತರ ಯೆಮೆನ್‌ನಿಂದ ಮೊದಲ ಬಾರಿಗೆ...

ಬಿಜೆಪಿಗೆ ಮತ ಹಾಕುವುದು ವ್ಯರ್ಥ; ಬದಲಿಗೆ ಕಾಂಗ್ರೆಸ್‌ಗೆ ಹಾಕಿ: ಸಂಸದ ಶಶಿ ತರೂರ್

ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಮತ ಹಾಕುವುದು ವ್ಯರ್ಥ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಕೇರಳದಲ್ಲಿ ಹೇಳಿದ್ದಾರೆ. ರಾಜ್ಯದ ಚುನಾವಣಾ ಸ್ಪರ್ಧೆ ಪ್ರಾಥಮಿಕವಾಗಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮತ್ತು ಎಡ...

ಅಬುಧಾಬಿ | ಭದ್ರತಾ ಪಡೆಗಳು ಹೊಡೆದುರುಳಿಸಿದ ಕ್ಷಿಪಣಿಯ ಅವಶೇಷಗಳು ಬಿದ್ದು ಐವರು ಭಾರತೀಯರಿಗೆ ಗಾಯ

ಯುಎಇ ರಾಜಧಾನಿ ಅಬುಧಾಬಿ ಸೇರಿದಂತೆ ವಿವಿಧ ಪ್ರದೇಶಗಳ ಮೇಲೆ ಇರಾನ್ ನಡೆಸಿದ ಕ್ಷಿಪಣಿ ಮತ್ತು ಡ್ರೋನ್ ದಾಳಿಗಳ ಸಂದರ್ಭದಲ್ಲಿ, ಕ್ಷಿಪಣಿಗಳ ಅವಶೇಷಗಳು ಬಿದ್ದ ಪರಿಣಾಮ ಐವರು ಭಾರತೀಯರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅಬುಧಾಬಿಯ ಸರ್ಕಾರಿ...

ಧುರಂಧರ್-2 ಬಿಜೆಪಿಯ ದೊಡ್ಡ ಬಜೆಟ್‌ನ ರಾಜಕೀಯ ಜಾಹೀರಾತು: ಧ್ರುವ ರಾಥೀ

ಚಲನಚಿತ್ರ ನಿರ್ಮಾಪಕ ಆದಿತ್ಯ ಧರ್ ಅವರ ಆಕ್ಷನ್ ಎಂಟರ್‌ಟೈನರ್ ಧುರಂಧರ್‌ನ ಮುಂದುವರಿದ ಭಾಗವು ಬಾಕ್ಸ್ ಆಫೀಸ್‌ನಲ್ಲಿ ಭಾರಿ ಗಳಿಕೆಯ ಜೊತೆಗೆ ಬಲಪಂಥೀಯ ವರ್ಗದ ಪ್ರೇಕ್ಷಕರ ಪ್ರತಿಕ್ರಿಯೆಯನ್ನು ಗಳಿಸುತ್ತಿದೆ. ಆದರೂ, ಈ ಚಿತ್ರವು ಸಾಕಷ್ಟು...