Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...

ಪಶ್ಚಿಮ ಬಂಗಾಳ| ಕಲ್ಲಿದ್ದಲು ಹಗರಣ ಪ್ರಕರಣದಲ್ಲಿ ಐ-ಪ್ಯಾಕ್ ನಿರ್ದೇಶಕ ವಿನೇಶ್ ಚಾಂಡೆಲ್ ಬಂಧನ

ಪಶ್ಚಿಮ ಬಂಗಾಳದಲ್ಲಿ ನಡೆದಿದೆ ಎನ್ನಲಾದ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ (ಏಪ್ರಿಲ್ 13) ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿಯ ಸಹ-ಸಂಸ್ಥಾಪಕ ಮತ್ತು ನಿರ್ದೇಶಕ...

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...