Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಸ್ವಯಂ ಸೇವಕರ ಮೇಲೆ ದಾಳಿ | ರಾಜಸ್ಥಾನದ ಬಿಜೆಪಿ ಸರ್ಕಾರಕ್ಕೆ 3 ಬೇಡಿಕೆಗಳನ್ನು ಮುಂದಿಟ್ಟ ಅಭಿಜೀತ್ ದೀಪ್ಕೆ : ಈಡೇರಿಸಲು 48 ಗಂಟೆಗಳ ಗಡುವು

ಸರ್ಕಾರಿ ಶಾಲೆಯ ದುಃಸ್ಥಿತಿಯನ್ನು ಪರಿಶೀಲಿಸಲು ತೆರಳಿದ್ದ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಸಹ-ಸಂಘಟಕ ಆಶುತೋಷ್ ರಾಂಕಾ ಮತ್ತು ಇತರ ಸ್ವಯಂಸೇವಕರ ಮೇಲೆ ದಾಳಿ ನಡೆಸಿರುವುದನ್ನು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರವಾಗಿ ಖಂಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು...

ಸಾರ್ವಜನಿಕರ ಉಪಸ್ಥಿತಿಯಿಲ್ಲದ ಮುಚ್ಚಿದ ಸ್ಥಳದಲ್ಲಿ ಜಾತಿ ನಿಂದನೆ: ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ 

ಸಾರ್ವಜನಿಕ ಪ್ರವೇಶವಿಲ್ಲದ ಮತ್ತು ಸಾರ್ವಜನಿಕರ ಉಪಸ್ಥಿತಿಯಿಲ್ಲದ ನಾಲ್ಕು ಗೋಡೆಗಳ ನಡುವೆ ಅಥವಾ ಸುತ್ತುವರಿದ ಮುಚ್ಚಿದ ಜಾಗದಲ್ಲಿ ನಡೆದಿದೆ ಎನ್ನಲಾದ ಜಾತಿ ಆಧಾರಿತ ನಿಂದನೆ ಅಥವಾ ವಾಗ್ವಾದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ...

ಕರ್ನಾಟಕದ ಒಂದೂವರೆ ಕೋಟಿ ಮತದಾರರನ್ನು ಬಾಧಿಸಿದ SIR

ಎನ್ಯುಮರೇಷನ್ ಫಾರಂ (ಗಣತಿ ನಮೂನೆ) ಸಲ್ಲಿಕೆ ಹಂತ ಮುಗಿದ ಬಳಿಕ (ಆ.18-19ರ ಪ್ರಕಾರ) ದೊರೆತ ಮಾಹಿತಿ ಪ್ರಕಾರ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ನಾಟಕದ ಸುಮಾರು ಒಂದೂವರೆ ಕೋಟಿ (...

ಮಹಾರಾಷ್ಟ್ರ: 8 ವರ್ಷದ ಬಾಲಕಿ ಶಾರ್ಟ್ಸ್ ಧರಿಸಿದ್ದಕ್ಕೆ ಕುಟುಂಬದ ಮೇಲೆ ಭೀಕರ ಹಲ್ಲೆ: ನೈತಿಕ ಪೊಲೀಸ್‌ಗಿರಿಗೆ ಸಾಕ್ಷಿಯಾದ ಸಿಂಹಗಢ ಕೋಟೆ

ಮಹಾರಾಷ್ಟ್ರದ ಪುಣೆ ಸಮೀಪದ ಐತಿಹಾಸಿಕ ಸಿಂಹಗಢ ಕೋಟೆಯಲ್ಲಿ ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರವಾಸಿಗರ ಮೇಲೆ ನೈತಿಕ ಪೊಲೀಸ್‌ಗಿರಿ (ಮೊರಾಲ್ ಪೋಲಿಸಿಂಗ್) ನಡೆಸಿ ಭೀಕರ ಹಲ್ಲೆ ನಡೆಸಲಾಗಿದೆ. ಎಂಟು ವರ್ಷದ ಚಿಕ್ಕ ಬಾಲಕಿಯೊಬ್ಬಳು...

ಜೈಪುರದಲ್ಲಿ ಸರ್ಕಾರಿ ಶಾಲೆ ತಪಾಸಣೆ ವೇಳೆ ಭೀಕರ ಹಿಂಸಾಚಾರ: ‘ಸಿಜೆಪಿ’ನಾಯಕ ಅಶುತೋಷ್ ರಂಕಾ ತಂಡದ ಮೇಲೆ ದಾಳಿ, ಕಲ್ಲು ತೂರಾಟ, ಕಾರು ಧ್ವಂಸ

ಜೈಪುರ: ರಾಜಸ್ಥಾನದ ರಾಜಧಾನಿ ಜೈಪುರ ಸಮೀಪದ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ ಕನ್ವರ್‌ಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಸ್ಥಿತಿಗತಿಗಳನ್ನು ಪರಿಶೀಲಿಸಲು ತೆರಳಿದ್ದ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಕಾರ್ಯಕರ್ತರ ಮೇಲೆ ಉಗ್ರ...

BJP 40 ಕ್ಷೇತ್ರಗಳಲ್ಲಿ ಸೋಲಲು ಕಾಂಗ್ರೆಸ್ ಜಾಹೀರಾತೇ ಕಾರಣ: ಹೈಕೋರ್ಟ್‌ಗೆ ಬಿಜೆಪಿ ದೂರು

2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಂಗ್ರೆಸ್ ಪತ್ರಿಕೆಗಳಲ್ಲಿ ಪ್ರಕಟಿಸಿದ್ದ ‘ಭ್ರಷ್ಟಾಚಾರದ ರೇಟ್ ಕಾರ್ಡ್’ (Corruption Rate Card) ಜಾಹೀರಾತಿನಿಂದಾಗಿ ತಾನು 40 ಕ್ಷೇತ್ರಗಳಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಭಾರತೀಯ...

“ಎಫ್‌ಐಆರ್ ದಾಖಲಾಗದೆ ಇಲ್ಲಿಂದ ಕದಲಲ್ಲ” : ಡಿಸಿಪಿ ಕಚೇರಿ ಮುಂದೆ ಧರಣಿ ಕುಳಿತ ರಾಹುಲ್ ಗಾಂಧಿ

ಜುಲೈ 20ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ ಬಳಕೆ, ಲಾಠಿ ಚಾರ್ಜ್ ಸೇರಿದಂತೆ ಪೊಲೀಸರಿಂದ ವಿವಿಧ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ...

ಪೆಲೆಟ್ ಗನ್ ಫೈರಿಂಗ್ ವಿರುದ್ಧ FIR ದಾಖಲಿಸಲು ದೆಹಲಿ ಪೊಲೀಸರ ನಿರಾಕರಣೆ, ರಾಹುಲ್ ಗಾಂಧಿ ಧರಣಿ

ಜುಲೈ 20ರ ಸಂಸತ್ ಚಲೋ ಪ್ರತಿಭಟನೆ ವೇಳೆ ಭದ್ರತಾ ಸಿಬ್ಬಂದಿ ಪೆಲೆಟ್ ಗನ್ ಬಳಸಿ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ (ಅಗಸ್ಟ್ 20)...

ಎಸ್ಐಆರ್ ಹಗರಣದಂತೆ ಕಾಣುತ್ತಿದೆ: ಚುನಾವಣಾ ಆಯೋಗದ ಪಾರದರ್ಶಕತೆಯನ್ನು ಪ್ರಶ್ನಿಸಿದ ನಟ ಕಿಶೋರ್ ಕುಮಾರ್: ಸಾರ್ವಜನಿಕ ಪ್ರತಿರೋಧಕ್ಕೆ ಕರೆ

ಬೆಂಗಳೂರು: ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪವಿತ್ರವೆನಿಸಿದ ಮತದಾನದ ಹಕ್ಕನ್ನು ಕಸಿಯುವ ಹುನ್ನಾರಗಳು ತೀವ್ರಗೊಳ್ಳುತ್ತಿದ್ದು, ಸಾಮಾನ್ಯ ಆಡಳಿತಾತ್ಮಕ ಪ್ರಕ್ರಿಯೆಯಾಗಬೇಕಿದ್ದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಇಂದು ಬಹುದೊಡ್ಡ ಹಗರಣದಂತೆ ಕಾಣಿಸುತ್ತಿದೆ ಎಂದು...

ಕರ್ನಾಟಕ SIR : 43.80 ಲಕ್ಷ ಜನರಿಗೆ ಬರಲಿದೆ ಚುನಾವಣಾ ಆಯೋಗದ ನೋಟಿಸ್!

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಭಾಗವಾಗಿ ಮತದಾರರು ತುಂಬಿ ಕೊಟ್ಟಿರುವ 4,46,35,899 ಎನ್ಯುಮರೇಷನ್ ಫಾರಂಗಳು (ಗಣತಿ ನಮೂನೆ) ಡಿಜಿಟಲೀಕರಣಗೊಂಡಿವೆ. ಈ ಪೈಕಿ 43,80,740 ಮತದಾರರಿಗೆ ದಾಖಲೆ ಕೇಳಿ...