Homeಕರ್ನಾಟಕಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

- Advertisement -
- Advertisement -

ಹುತಾತ್ಮ ಯೋಧ ಪ್ರಾಂಜಲ್ ಅವರ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಅರ್ಧ ಹಂಚಿ ತಪ್ಪು ಅರ್ಥ ಬರುವಂತೆ ಸಂಸದ ತೇಜಸ್ವಿ ಸೂರ್ಯ ಬಿಂಬಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ ಮಾಡಿದ್ದ, ತೇಜಸ್ವಿ ಸೂರ್ಯ ಎಂಬ ಬಿಜೆಪಿ ಸಂಸದ, ತಪ್ಪು ಅರ್ಥ ಬರುವಂತೆ ನನ್ನ ಹೇಳಿಕೆಯನ್ನು ತುಂಡರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟು ವಿಕೃತಿ ಮೆರೆದಿರುವುದು ನನ್ನ ಗಮನಕ್ಕೆ ಬಂದಿದೆ. ಗದ್ದಲದ ಕಾರಣದಿಂದಾಗಿ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿರಲಿಲ್ಲ. ಪತ್ರಕರ್ತರ ಪ್ರಶ್ನೆ ಹುತಾತ್ಮರಾದ ವೀರಯೋಧ ಪ್ರಾಂಜಲ್ ಅವರ ಕುರಿತಾಗಿರುವುದು ಎಂದು ಗೊತ್ತಾದ ನಂತರ ರಾಜ್ಯ ಸರ್ಕಾರ ಪರಿಹಾರ ನೀಡಲು ಬದ್ಧವಾಗಿರುವುದನ್ನು ತಿಳಿಸಿದ್ದು ಮಾತ್ರವಲ್ಲ, ಬೇರೆ ಯಾವ ರಾಜ್ಯದಲ್ಲಿಯಾದರೂ ಹುತಾತ್ಮ ಯೋಧರಿಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಿರುವುದು ಗೊತ್ತಾದರೆ ಅಷ್ಟೇ ಮೊತ್ತವನ್ನು ನೀಡಲು ಸಿದ್ಧ ಎಂದೂ ತಿಳಿಸಿದ್ದೇನೆ. ಇಂದು ನಮ್ಮ ಅಧಿಕಾರಿಗಳು ಪರಿಹಾರದ ಚೆಕ್‌ನ್ನು ಹುತಾತ್ಮ ಪ್ರಾಂಜಲ ಅವರ ಕುಟುಂಬಕ್ಕೆ ನೀಡಿದ್ದಾರೆ. ಪತ್ರಕರ್ತರ ಮುಂದೆ ನಾನು ನೀಡಿರುವ ಹೇಳಿಕೆ ಪೂರ್ಣ ವಿಡಿಯೋವನ್ನು ಇಲ್ಲಿ ಹಂಚಿಕೊಂಡಿದ್ದೇನೆ. ರಾಜಕೀಯ ದುರುದ್ದೇಶದಿಂದ ಈ ವಿಡಿಯೋವನ್ನು  ತೇಜಸ್ವಿ ಸೂರ್ಯ ಅವರು ಹುತಾತ್ಮ ಪ್ರಾಂಜಲ್ ಮತ್ತು ಅವರ ಕುಟುಂಬ ವರ್ಗಕ್ಕೆ ಮಾತ್ರವಲ್ಲ ಸಮಸ್ತ ಯೋಧ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಈ ಸಂಸದನಲ್ಲಿ ಕಿಂಚಿತ್ತು ಮಾನ-ಮರ್ಯಾದೆ ಏನಾದರೂ ಉಳಿದುಕೊಂಡಿದ್ದರೆ ತಾನು ಮಾಡಿರುವ ತಪ್ಪನ್ನು ಒಪ್ಪಿಕೊಂಡು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ದೇಶ, ದೇವರು, ಸೈನಿಕರು ಎಲ್ಲವೂ ಭಾರತೀಯ ಜನತಾ ಪಕ್ಷಕ್ಕೆ ರಾಜಕೀಯ ವ್ಯಾಪಾರದ ಸರಕುಗಳು ಮಾತ್ರ ಎನ್ನುವುದನ್ನು ದೇಶದ ಜನರು ಅರ್ಥಮಾಡಿಕೊಂಡಿದ್ದಾರೆ. ಹುತಾತ್ಮ ಪ್ರಾಂಜಲ್ ಅವರ ಮೃತದೇಹವನ್ನು ಇಲ್ಲಿಗೆ ತಂದಿದ್ದ ದಿನ ಪ್ರಧಾನಿ ನರೇಂದ್ರಮೋದಿ ಅವರು ಬೆಂಗಳೂರಿನಲ್ಲಿಯೇ ಇದ್ದರೂ ಅಂತಿಮ ದರ್ಶನ ಮಾಡಿ ಹೆತ್ತವರಿಗೆ ಸಾಂತ್ವನ ಹೇಳುವ ಸೌಜನ್ಯವನ್ನೂ ತೋರಲಿಲ್ಲ. ಇದನ್ನು ನಾವು ವಿವಾದ ಮಾಡಲು ಹೋಗಲಿಲ್ಲ. ಆದರೆ ಸಂಸದ ಒಬ್ಬ ವೀರ ಯೋಧನ ಬಲಿದಾನವನ್ನು ಕೂಡಾ ತನ್ನ ಸುಳ್ಳು ಸುದ್ದಿಯ ಫ್ಯಾಕ್ಟರಿಗೆ ಸರಕಾಗಿ ಮಾಡಿ ನನ್ನ ಮಾನ ಹಾನಿಗೆ ಪ್ರಯತ್ನಿಸಿರುವುದು ಅಕ್ಷಮ್ಯ. ಇಂತಹ ಸುಳ್ಳುಕೋರರು ನಮ್ಮ ನಾಡಿಗೆ ಕಳಂಕ. ಇವರಿಗೆ ರಾಜ್ಯದ ಜನರೇ ತಕ್ಕ ಪಾಠ ಕಲಿಸಬೇಕಾಗಿದೆ ಎಂದು ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಕ್ಯಾ. ಪ್ರಾಂಜಲ್‌ ಕುರಿತ ಸಿದ್ದರಾಮಯ್ಯ ಅವರ ಹೇಳಿಕೆಯ ಅರ್ಧ ಭಾಗವನ್ನು ಮಾತ್ರ ಸಂಸದ ತೇಜಸ್ವಿ ಸೂರ್ಯ ಹಂಚಿಕೊಂಡಿದ್ದರು. ಅದರಲ್ಲಿ ಸಿದ್ದರಾಮಯ್ಯ ಅವರು ಕ್ಯಾ. ಪ್ರಾಂಜಲ್‌ ಯಾರು? ಯಾವಾಗ ಪರಿಹಾರ ನೀಡುತ್ತೇವೆ ಎಂದು ಘೋಷಿಸಿದ್ವಿ? ಎಂದು ಪ್ರಶ್ನಿಸಿದ್ದಾರೆ ಎಂದು ಆರೋಪಿಸಿದ್ದರು. ಆದರೆ ವಾಸ್ತವವಾಗಿ ಸಿದ್ದರಾಮಯ್ಯ ಅವರಿಗೆ ವರದಿಗಾರರ ಪ್ರಶ್ನೆ ಪ್ರಾರಂಭದಲ್ಲಿ ಸರಿಯಾಗಿ ಕೇಳಿಸಿರಲಿಲ್ಲ. ಆ ಬಳಿಕ ಅವರು ಪರಿಹಾರ ನೀಡುವ ಬಗ್ಗೆ ಸ್ಪಷ್ಟಪಡಿಸಿದ್ದರು. ಆ ಕುರಿತ ಸಂಪೂರ್ಣ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...