Homeಮುಖಪುಟಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 36 ನೇ ದಿನಕ್ಕೆ ಕಾಲಿಟ್ಟದೆ. ಕೇಂದ್ರವು ಇದುವರೆಗೆ 6 ಬಾರಿ ರೈತರೊಂದಿಗೆ ಮಾತುಕತೆ ನಡೆಸಿದೆಯಾದರೂ ಕೃಷಿ ಕಾನೂನಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಹೇಳಿ ತನ್ನ ಹಠಮಾರಿ ಧೋರಣೆಯನ್ನು ಮುಂದುವರೆಸಿದೆ. ರೈತರು ಕೂಡಾ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಮತ್ತೆ ಘೋಷಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರತಿ ಸುತ್ತಿನಲ್ಲೂ, ಸರ್ಕಾರ ನೀಡುವ ನೀರನ್ನು ಕೂಡಾ ಮುಟ್ಟದೇ, ತಾವೇ ಒಯ್ದಿದ್ದ ಆಹಾರವನ್ನು ಹಂಚಿಕೊಂಡು ತಿಂದು ಸ್ವಾಭಿಮಾನ ಮೆರೆದಿದ್ದರು. ಇದು 6 ನೇ ಸುತ್ತಿನ ಮಾತುಕತೆಯ ವಿರಾಮದ ಸಮಯದಲ್ಲೂ ಮುಂದುವರೆದಿತ್ತು. ಆದರೆ ಈ ಭಾರಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್‌ ಮತ್ತು ಪಿಯೂಷ್ ಗೋಯಲ್ ರೈತರು ತಂದಿದ್ದ ಊಟ ಮಾಡಿದ್ದರು.

ಇದನ್ನೂ ಓದಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ FIR

ಕೇಂದ್ರ ಸಚಿವರಿಬ್ಬರು ರೈತರೊಂದಿಗೆ ಊಟ ಮಾಡುತ್ತಿರುವ ಈ ಚಿತ್ರವನ್ನು, ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. “ಕೃಷಿಕ ಸಂಘಟನೆಗಳೊಂದಿಗೆ ಮಾತುಕತೆಯ ಸಂದರ್ಭದಲ್ಲಿ ಕೃಷಿಕರೊಂದಿಗೆ ಭೋಜನ ಸೇವಿಸಿದ ಕೇಂದ್ರ ಕೃಷಿ ಮಂತ್ರಿ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್” ಎಂದು ಶೋಭಾ ತಮ್ಮ ಫೇಸ್‌‌ಬುಕ್ ಖಾತೆಗಳಲ್ಲಿ ಬರೆದಿದ್ದಾರೆ.

ಆದರೆ ಇದೇ ಶೋಭಾ ಕರಂದ್ಲಾಜೆ ಡಿಸೆಂಬರ್‌ 22 ರಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, “ರೈತರ ಸೋಗಿನಲ್ಲಿ ತುಕುಡೇ ಗ್ಯಾಂಗ್ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿ ಮಸೂದೆ ವಿರೋಧಿ ಹೋರಾಟದ ನೇತೃತ್ವ ವಹಿಸಿದೆ. ಕೃಷಿಕರ ಅಭ್ಯುದಯದ ಚಿಂತನೆಯನ್ನು ನಡೆಸದೆ ಕೇವಲ ರಾಜಕೀಯ ಮಾಡುವ ನಿಟ್ಟಿನಲ್ಲಿ ದೇಶದ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಹಾಗು ಇತರ ಪಕ್ಷಗಳು ಮಾಡುತ್ತಿವೆ” ಎಂದು ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ


ಇದರ ಆರ್ಕೈವ್ ಇಲ್ಲಿದೆ

ಜೊತೆಗೆ, ಟಿವಿ ಕಾರ್ಯಕ್ರಮದಲ್ಲಿ ತಾವು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಕೂಡಾ ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ, “ರೈತರ ಪ್ರತಿಭಟನೆಗೆ ಖಲಿಸ್ತಾನ್‌ಗಳಿಂದ ಹಣ ಬರುತ್ತಿದೆ, ತುಕ್ಡೆ ಗ್ಯಾಂಗ್‌ನವರು ನೇತೃತ್ವ ಸೇರಿದಂತೆ, ಅರ್ಬನ್ ನಕ್ಸಲ್‌ರು ಕೂಡಾ ಈ ಪ್ರತಿಭಟನೆಗೆ ನೇತೃತ್ವ ನೀಡುತ್ತಿದೆ” ಎಂದು ಟೀಕಿಸಿದ್ದರು.

ಇದು ಶೋಭಾ ಕರಂದ್ಲಾಜೆಯವರ ಇಬ್ಬಂದಿತನವಲ್ಲವೇ ಎಂಬ ಪ್ರಶ್ನೆ ಎದ್ದಿದೆ. ತಮಗೆ ಮನ ಬಂದಾಗ ರೈತರನ್ನು ಟೀಕಿಸಿವುದು, ಮನಬಂದಾಗ ಅವರನ್ನು ಹೊಗಳುವುದು ಎಷ್ಟು ಸರಿ? ನಮ್ಮ ಟೀಕೆ ಮತ್ತು ಹೊಗಳಿಕೆಗಳು ವಾಸ್ತವ ಅಂಶಗಳ ಆಧಾರದಲ್ಲಿರಬೇಕು ಮತ್ತು ಇತಿಮಿತಿಯಲ್ಲಿರಬೇಕು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನಿನ ವಿರುದ್ದ ದೆಹಲಿಯ ಭಾರಿ ಚಳಿಯ ಹೊರತಾಗಿಯೂ ರೈತರು ಚಳುವಳಿ ಮುಂದುವರೆಸಿದ್ದಾರೆ. ಪ್ರತಿಭಟನೆಯಲ್ಲಿ ವೃದ್ದರು, ಮಕ್ಕಳು ಸೇರಿದಂತೆ ಮಹಿಳೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರ ಹೋರಾಟವನ್ನು ಖಲಿಸ್ತಾನಿಗಳು, ಅರ್ಬನ್ ನಕ್ಸಲರು, ತುಕ್ಡೆ ಗ್ಯಾಂಗ್‌‌ನವರು ಎಂದು ಹೇಳಿರುವುದು ಕೇವಲ ಸಂಸದೆ ಶೋಭ ಕರಂದ್ಲಾಜೆ ಮಾತ್ರವಲ್ಲ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಬಿಜೆಪಿ ನಾಯಕರು ಸೇರಿದಂತೆ ಸಚಿವರು ಕೂಡಾ ಇದನ್ನು ಉಚ್ಚರಿಸಿದ್ದರು. ಆದರೆ ಅದೇ ಹೋರಾಟಗಾರೊಂದಿಗೆ ಕೇಂದ್ರ ಸರ್ಕಾರ ಆರು ಬಾರಿ ಮಾತುಕತೆ ನಡೆಸಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ಅವರ ನಾಲ್ಕು ಬೇಡಿಕೆಗಳಲ್ಲಿ ಎರಡನ್ನು ಪರಿಶೀಲಿಸುವುದಾಗಿ ಒಪ್ಪಿಕೊಂಡಿದೆ. ಪ್ರಮುಖ ಬೇಡಿಕೆಯಾದ ನೂತನ ಕೃಷಿ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಒಂದಿಂಚೂ ಹಿಂದೆ ಸರಿಯಲ್ಲ ಎಂದು ರೈತರು ಮತ್ತೆ ಘೋಷಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...