Homeಮುಖಪುಟಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 36 ನೇ ದಿನಕ್ಕೆ ಕಾಲಿಟ್ಟದೆ. ಕೇಂದ್ರವು ಇದುವರೆಗೆ 6 ಬಾರಿ ರೈತರೊಂದಿಗೆ ಮಾತುಕತೆ ನಡೆಸಿದೆಯಾದರೂ ಕೃಷಿ ಕಾನೂನಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಹೇಳಿ ತನ್ನ ಹಠಮಾರಿ ಧೋರಣೆಯನ್ನು ಮುಂದುವರೆಸಿದೆ. ರೈತರು ಕೂಡಾ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಮತ್ತೆ ಘೋಷಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರತಿ ಸುತ್ತಿನಲ್ಲೂ, ಸರ್ಕಾರ ನೀಡುವ ನೀರನ್ನು ಕೂಡಾ ಮುಟ್ಟದೇ, ತಾವೇ ಒಯ್ದಿದ್ದ ಆಹಾರವನ್ನು ಹಂಚಿಕೊಂಡು ತಿಂದು ಸ್ವಾಭಿಮಾನ ಮೆರೆದಿದ್ದರು. ಇದು 6 ನೇ ಸುತ್ತಿನ ಮಾತುಕತೆಯ ವಿರಾಮದ ಸಮಯದಲ್ಲೂ ಮುಂದುವರೆದಿತ್ತು. ಆದರೆ ಈ ಭಾರಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್‌ ಮತ್ತು ಪಿಯೂಷ್ ಗೋಯಲ್ ರೈತರು ತಂದಿದ್ದ ಊಟ ಮಾಡಿದ್ದರು.

ಇದನ್ನೂ ಓದಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ FIR

ಕೇಂದ್ರ ಸಚಿವರಿಬ್ಬರು ರೈತರೊಂದಿಗೆ ಊಟ ಮಾಡುತ್ತಿರುವ ಈ ಚಿತ್ರವನ್ನು, ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. “ಕೃಷಿಕ ಸಂಘಟನೆಗಳೊಂದಿಗೆ ಮಾತುಕತೆಯ ಸಂದರ್ಭದಲ್ಲಿ ಕೃಷಿಕರೊಂದಿಗೆ ಭೋಜನ ಸೇವಿಸಿದ ಕೇಂದ್ರ ಕೃಷಿ ಮಂತ್ರಿ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್” ಎಂದು ಶೋಭಾ ತಮ್ಮ ಫೇಸ್‌‌ಬುಕ್ ಖಾತೆಗಳಲ್ಲಿ ಬರೆದಿದ್ದಾರೆ.

ಆದರೆ ಇದೇ ಶೋಭಾ ಕರಂದ್ಲಾಜೆ ಡಿಸೆಂಬರ್‌ 22 ರಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, “ರೈತರ ಸೋಗಿನಲ್ಲಿ ತುಕುಡೇ ಗ್ಯಾಂಗ್ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿ ಮಸೂದೆ ವಿರೋಧಿ ಹೋರಾಟದ ನೇತೃತ್ವ ವಹಿಸಿದೆ. ಕೃಷಿಕರ ಅಭ್ಯುದಯದ ಚಿಂತನೆಯನ್ನು ನಡೆಸದೆ ಕೇವಲ ರಾಜಕೀಯ ಮಾಡುವ ನಿಟ್ಟಿನಲ್ಲಿ ದೇಶದ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಹಾಗು ಇತರ ಪಕ್ಷಗಳು ಮಾಡುತ್ತಿವೆ” ಎಂದು ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ


ಇದರ ಆರ್ಕೈವ್ ಇಲ್ಲಿದೆ

ಜೊತೆಗೆ, ಟಿವಿ ಕಾರ್ಯಕ್ರಮದಲ್ಲಿ ತಾವು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಕೂಡಾ ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ, “ರೈತರ ಪ್ರತಿಭಟನೆಗೆ ಖಲಿಸ್ತಾನ್‌ಗಳಿಂದ ಹಣ ಬರುತ್ತಿದೆ, ತುಕ್ಡೆ ಗ್ಯಾಂಗ್‌ನವರು ನೇತೃತ್ವ ಸೇರಿದಂತೆ, ಅರ್ಬನ್ ನಕ್ಸಲ್‌ರು ಕೂಡಾ ಈ ಪ್ರತಿಭಟನೆಗೆ ನೇತೃತ್ವ ನೀಡುತ್ತಿದೆ” ಎಂದು ಟೀಕಿಸಿದ್ದರು.

ಇದು ಶೋಭಾ ಕರಂದ್ಲಾಜೆಯವರ ಇಬ್ಬಂದಿತನವಲ್ಲವೇ ಎಂಬ ಪ್ರಶ್ನೆ ಎದ್ದಿದೆ. ತಮಗೆ ಮನ ಬಂದಾಗ ರೈತರನ್ನು ಟೀಕಿಸಿವುದು, ಮನಬಂದಾಗ ಅವರನ್ನು ಹೊಗಳುವುದು ಎಷ್ಟು ಸರಿ? ನಮ್ಮ ಟೀಕೆ ಮತ್ತು ಹೊಗಳಿಕೆಗಳು ವಾಸ್ತವ ಅಂಶಗಳ ಆಧಾರದಲ್ಲಿರಬೇಕು ಮತ್ತು ಇತಿಮಿತಿಯಲ್ಲಿರಬೇಕು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನಿನ ವಿರುದ್ದ ದೆಹಲಿಯ ಭಾರಿ ಚಳಿಯ ಹೊರತಾಗಿಯೂ ರೈತರು ಚಳುವಳಿ ಮುಂದುವರೆಸಿದ್ದಾರೆ. ಪ್ರತಿಭಟನೆಯಲ್ಲಿ ವೃದ್ದರು, ಮಕ್ಕಳು ಸೇರಿದಂತೆ ಮಹಿಳೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರ ಹೋರಾಟವನ್ನು ಖಲಿಸ್ತಾನಿಗಳು, ಅರ್ಬನ್ ನಕ್ಸಲರು, ತುಕ್ಡೆ ಗ್ಯಾಂಗ್‌‌ನವರು ಎಂದು ಹೇಳಿರುವುದು ಕೇವಲ ಸಂಸದೆ ಶೋಭ ಕರಂದ್ಲಾಜೆ ಮಾತ್ರವಲ್ಲ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಬಿಜೆಪಿ ನಾಯಕರು ಸೇರಿದಂತೆ ಸಚಿವರು ಕೂಡಾ ಇದನ್ನು ಉಚ್ಚರಿಸಿದ್ದರು. ಆದರೆ ಅದೇ ಹೋರಾಟಗಾರೊಂದಿಗೆ ಕೇಂದ್ರ ಸರ್ಕಾರ ಆರು ಬಾರಿ ಮಾತುಕತೆ ನಡೆಸಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ಅವರ ನಾಲ್ಕು ಬೇಡಿಕೆಗಳಲ್ಲಿ ಎರಡನ್ನು ಪರಿಶೀಲಿಸುವುದಾಗಿ ಒಪ್ಪಿಕೊಂಡಿದೆ. ಪ್ರಮುಖ ಬೇಡಿಕೆಯಾದ ನೂತನ ಕೃಷಿ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಒಂದಿಂಚೂ ಹಿಂದೆ ಸರಿಯಲ್ಲ ಎಂದು ರೈತರು ಮತ್ತೆ ಘೋಷಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...