Homeಮುಖಪುಟಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

- Advertisement -
- Advertisement -

ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ ಇಂದಿಗೆ 36 ನೇ ದಿನಕ್ಕೆ ಕಾಲಿಟ್ಟದೆ. ಕೇಂದ್ರವು ಇದುವರೆಗೆ 6 ಬಾರಿ ರೈತರೊಂದಿಗೆ ಮಾತುಕತೆ ನಡೆಸಿದೆಯಾದರೂ ಕೃಷಿ ಕಾನೂನಗಳನ್ನು ವಾಪಾಸು ಪಡೆಯುವುದಿಲ್ಲ ಎಂದು ಹೇಳಿ ತನ್ನ ಹಠಮಾರಿ ಧೋರಣೆಯನ್ನು ಮುಂದುವರೆಸಿದೆ. ರೈತರು ಕೂಡಾ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಮತ್ತೆ ಘೋಷಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಪ್ರತಿ ಸುತ್ತಿನಲ್ಲೂ, ಸರ್ಕಾರ ನೀಡುವ ನೀರನ್ನು ಕೂಡಾ ಮುಟ್ಟದೇ, ತಾವೇ ಒಯ್ದಿದ್ದ ಆಹಾರವನ್ನು ಹಂಚಿಕೊಂಡು ತಿಂದು ಸ್ವಾಭಿಮಾನ ಮೆರೆದಿದ್ದರು. ಇದು 6 ನೇ ಸುತ್ತಿನ ಮಾತುಕತೆಯ ವಿರಾಮದ ಸಮಯದಲ್ಲೂ ಮುಂದುವರೆದಿತ್ತು. ಆದರೆ ಈ ಭಾರಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್‌ ಮತ್ತು ಪಿಯೂಷ್ ಗೋಯಲ್ ರೈತರು ತಂದಿದ್ದ ಊಟ ಮಾಡಿದ್ದರು.

ಇದನ್ನೂ ಓದಿ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರಿಂದ FIR

ಕೇಂದ್ರ ಸಚಿವರಿಬ್ಬರು ರೈತರೊಂದಿಗೆ ಊಟ ಮಾಡುತ್ತಿರುವ ಈ ಚಿತ್ರವನ್ನು, ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ತಮ್ಮ ಫೇಸ್‌ಬುಕ್ ಮತ್ತು ಟ್ವಿಟ್ಟರ್‌ ಖಾತೆಗಳಲ್ಲಿ ಹಂಚಿಕೊಂಡಿದ್ದರು. “ಕೃಷಿಕ ಸಂಘಟನೆಗಳೊಂದಿಗೆ ಮಾತುಕತೆಯ ಸಂದರ್ಭದಲ್ಲಿ ಕೃಷಿಕರೊಂದಿಗೆ ಭೋಜನ ಸೇವಿಸಿದ ಕೇಂದ್ರ ಕೃಷಿ ಮಂತ್ರಿ ಶ್ರೀ ನರೇಂದ್ರ ಸಿಂಗ್ ತೋಮರ್ ಮತ್ತು ಕೇಂದ್ರ ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್” ಎಂದು ಶೋಭಾ ತಮ್ಮ ಫೇಸ್‌‌ಬುಕ್ ಖಾತೆಗಳಲ್ಲಿ ಬರೆದಿದ್ದಾರೆ.

ಆದರೆ ಇದೇ ಶೋಭಾ ಕರಂದ್ಲಾಜೆ ಡಿಸೆಂಬರ್‌ 22 ರಂದು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ, “ರೈತರ ಸೋಗಿನಲ್ಲಿ ತುಕುಡೇ ಗ್ಯಾಂಗ್ ದೆಹಲಿಯಲ್ಲಿ ನಡೆಯುತ್ತಿರುವ ಕೃಷಿ ಮಸೂದೆ ವಿರೋಧಿ ಹೋರಾಟದ ನೇತೃತ್ವ ವಹಿಸಿದೆ. ಕೃಷಿಕರ ಅಭ್ಯುದಯದ ಚಿಂತನೆಯನ್ನು ನಡೆಸದೆ ಕೇವಲ ರಾಜಕೀಯ ಮಾಡುವ ನಿಟ್ಟಿನಲ್ಲಿ ದೇಶದ ಜನರ ದಾರಿ ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ಹಾಗು ಇತರ ಪಕ್ಷಗಳು ಮಾಡುತ್ತಿವೆ” ಎಂದು ಬರೆಯುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಭಾರತದ ಭೂಪಟದಿಂದ ಪಾಕ್‌ ಆಕ್ರಮಿತ ಕಾಶ್ಮಿರ ಕೈಬಿಟ್ಟ ರಾಷ್ಟ್ರ ಜಾಗರಣ ಸಮಿತಿ.. ಶೋಭಾ ಕರಂದ್ಲಾಚೆ ವಿರುದ್ಧ ನೆಟ್ಟಿಗರ ಕಿಡಿ


ಇದರ ಆರ್ಕೈವ್ ಇಲ್ಲಿದೆ

ಜೊತೆಗೆ, ಟಿವಿ ಕಾರ್ಯಕ್ರಮದಲ್ಲಿ ತಾವು ನೀಡಿದ್ದ ಹೇಳಿಕೆಯ ವಿಡಿಯೋವನ್ನು ಕೂಡಾ ತಮ್ಮ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದರು. ವಿಡಿಯೋದಲ್ಲಿ, “ರೈತರ ಪ್ರತಿಭಟನೆಗೆ ಖಲಿಸ್ತಾನ್‌ಗಳಿಂದ ಹಣ ಬರುತ್ತಿದೆ, ತುಕ್ಡೆ ಗ್ಯಾಂಗ್‌ನವರು ನೇತೃತ್ವ ಸೇರಿದಂತೆ, ಅರ್ಬನ್ ನಕ್ಸಲ್‌ರು ಕೂಡಾ ಈ ಪ್ರತಿಭಟನೆಗೆ ನೇತೃತ್ವ ನೀಡುತ್ತಿದೆ” ಎಂದು ಟೀಕಿಸಿದ್ದರು.

ಇದು ಶೋಭಾ ಕರಂದ್ಲಾಜೆಯವರ ಇಬ್ಬಂದಿತನವಲ್ಲವೇ ಎಂಬ ಪ್ರಶ್ನೆ ಎದ್ದಿದೆ. ತಮಗೆ ಮನ ಬಂದಾಗ ರೈತರನ್ನು ಟೀಕಿಸಿವುದು, ಮನಬಂದಾಗ ಅವರನ್ನು ಹೊಗಳುವುದು ಎಷ್ಟು ಸರಿ? ನಮ್ಮ ಟೀಕೆ ಮತ್ತು ಹೊಗಳಿಕೆಗಳು ವಾಸ್ತವ ಅಂಶಗಳ ಆಧಾರದಲ್ಲಿರಬೇಕು ಮತ್ತು ಇತಿಮಿತಿಯಲ್ಲಿರಬೇಕು ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕಾನೂನಿನ ವಿರುದ್ದ ದೆಹಲಿಯ ಭಾರಿ ಚಳಿಯ ಹೊರತಾಗಿಯೂ ರೈತರು ಚಳುವಳಿ ಮುಂದುವರೆಸಿದ್ದಾರೆ. ಪ್ರತಿಭಟನೆಯಲ್ಲಿ ವೃದ್ದರು, ಮಕ್ಕಳು ಸೇರಿದಂತೆ ಮಹಿಳೆಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ರೈತರ ಹೋರಾಟವನ್ನು ಖಲಿಸ್ತಾನಿಗಳು, ಅರ್ಬನ್ ನಕ್ಸಲರು, ತುಕ್ಡೆ ಗ್ಯಾಂಗ್‌‌ನವರು ಎಂದು ಹೇಳಿರುವುದು ಕೇವಲ ಸಂಸದೆ ಶೋಭ ಕರಂದ್ಲಾಜೆ ಮಾತ್ರವಲ್ಲ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಬಿಜೆಪಿ ನಾಯಕರು ಸೇರಿದಂತೆ ಸಚಿವರು ಕೂಡಾ ಇದನ್ನು ಉಚ್ಚರಿಸಿದ್ದರು. ಆದರೆ ಅದೇ ಹೋರಾಟಗಾರೊಂದಿಗೆ ಕೇಂದ್ರ ಸರ್ಕಾರ ಆರು ಬಾರಿ ಮಾತುಕತೆ ನಡೆಸಿದೆ. ಆರನೇ ಸುತ್ತಿನ ಮಾತುಕತೆಯಲ್ಲಿ ಅವರ ನಾಲ್ಕು ಬೇಡಿಕೆಗಳಲ್ಲಿ ಎರಡನ್ನು ಪರಿಶೀಲಿಸುವುದಾಗಿ ಒಪ್ಪಿಕೊಂಡಿದೆ. ಪ್ರಮುಖ ಬೇಡಿಕೆಯಾದ ನೂತನ ಕೃಷಿ ಕಾನೂನನ್ನು ವಾಪಾಸು ಪಡೆಯುವವರೆಗೂ ಹೋರಾಟದಿಂದ ಒಂದಿಂಚೂ ಹಿಂದೆ ಸರಿಯಲ್ಲ ಎಂದು ರೈತರು ಮತ್ತೆ ಘೋಷಿಸಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಚೆಗೆ ಈರುಳ್ಳಿ ಹಾರ ಹಾಕಿ ಪ್ರತಿಭಟನೆಗೆ ಯತ್ನ: ಸ್ಥಳದಿಂದ ಕಾಲ್ಕಿತ್ತ ಸಂಸದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...